AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶತಕ ವಂಚಿತ ರೋಹಿತ್ ಏಕಾಂಗಿ ಹೋರಾಟ; ಆಂಗ್ಲರಿಗೆ 230 ರನ್ ಟಾರ್ಗೆಟ್

IND vs ENG, ICC World Cup 2023: ಲಕ್ನೋದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವಕಪ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

ಪೃಥ್ವಿಶಂಕರ
|

Updated on:Oct 29, 2023 | 6:19 PM

Share
ಲಕ್ನೋದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವಕಪ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

ಲಕ್ನೋದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವಕಪ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ.

1 / 8
ಟೀಂ ಇಂಡಿಯಾ ಪರ ನಾಯಕನ ಆಟ ಆಡಿದ ರೋಹಿತ್ ಶರ್ಮಾ 101 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 87 ರನ್ ಕಲೆಹಾಕಿ 13 ರನ್​ಗಳಿಂದ ಶತಕ ವಂಚಿತರಾದರು.

ಟೀಂ ಇಂಡಿಯಾ ಪರ ನಾಯಕನ ಆಟ ಆಡಿದ ರೋಹಿತ್ ಶರ್ಮಾ 101 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 87 ರನ್ ಕಲೆಹಾಕಿ 13 ರನ್​ಗಳಿಂದ ಶತಕ ವಂಚಿತರಾದರು.

2 / 8
ಈ ಪಂದ್ಯದಲ್ಲಿ ರೋಹಿತ್ ಶತಕ ವಂಚಿತರಾದರೂ ನಾಯಕನಾಗಿ 100ನೇ ಪಂದ್ಯವನ್ನಾಡಿದ ದಾಖಲೆಯ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 18000 ರನ್​ಗಳನ್ನು ಸಹ ಪೂರೈಸಿದರು.

ಈ ಪಂದ್ಯದಲ್ಲಿ ರೋಹಿತ್ ಶತಕ ವಂಚಿತರಾದರೂ ನಾಯಕನಾಗಿ 100ನೇ ಪಂದ್ಯವನ್ನಾಡಿದ ದಾಖಲೆಯ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 18000 ರನ್​ಗಳನ್ನು ಸಹ ಪೂರೈಸಿದರು.

3 / 8
ರೋಹಿತ್ ಹೊರತಾಗಿ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 39 ರನ್​ಗಳ ಇನ್ನಿಂಗ್ಸ್‌ ಆಡಿದರೆ, ಸೂರ್ಯಕುಮಾರ್ ಯಾದವ್ 49 ರನ್​ಗಳ ಅವಶ್ಯಕ ಇನ್ನಿಂಗ್ಸ್‌ ಆಡಿದರು.

ರೋಹಿತ್ ಹೊರತಾಗಿ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 39 ರನ್​ಗಳ ಇನ್ನಿಂಗ್ಸ್‌ ಆಡಿದರೆ, ಸೂರ್ಯಕುಮಾರ್ ಯಾದವ್ 49 ರನ್​ಗಳ ಅವಶ್ಯಕ ಇನ್ನಿಂಗ್ಸ್‌ ಆಡಿದರು.

4 / 8
ಆದರೆ ತಂಡಕ್ಕೆ ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಗಿಲ್, ಶ್ರೇಯಸ್ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸಿದರೆ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಆದರೆ ತಂಡಕ್ಕೆ ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಗಿಲ್, ಶ್ರೇಯಸ್ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸಿದರೆ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

5 / 8
ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು. ಡೇವಿಡ್ ವಿಲಿ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಮಿಡ್ ಆಫ್‌ನಲ್ಲಿ ಬೆನ್ ಸ್ಟೋಕ್ಸ್‌ಗೆ ಕ್ಯಾಚ್ ನೀಡಿದರು.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು. ಡೇವಿಡ್ ವಿಲಿ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಮಿಡ್ ಆಫ್‌ನಲ್ಲಿ ಬೆನ್ ಸ್ಟೋಕ್ಸ್‌ಗೆ ಕ್ಯಾಚ್ ನೀಡಿದರು.

6 / 8
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದದ್ದು ಇದು 34ನೇ ಬಾರಿ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ಅನಗತ್ಯ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 34 ಬಾರಿ ಶೂನ್ಯಕ್ಕೆ ಔಟಾಗಿದ್ದರು.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದದ್ದು ಇದು 34ನೇ ಬಾರಿ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ಅನಗತ್ಯ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 34 ಬಾರಿ ಶೂನ್ಯಕ್ಕೆ ಔಟಾಗಿದ್ದರು.

7 / 8
ಇಂಗ್ಲೆಂಡ್ ಪರ ಮಿಂಚಿದ ವೇಗಿಗಳಾದ ಡೇವಿಡ್ ವಿಲ್ಲಿ 3 ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ ಹಾಗೂ ಸ್ಪಿನ್ನರ್ ಆದೀಲ್ ರಶೀದ್ ತಲಾ 2 ವಿಕೆಟ್ ಪಡೆದರು.

ಇಂಗ್ಲೆಂಡ್ ಪರ ಮಿಂಚಿದ ವೇಗಿಗಳಾದ ಡೇವಿಡ್ ವಿಲ್ಲಿ 3 ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ ಹಾಗೂ ಸ್ಪಿನ್ನರ್ ಆದೀಲ್ ರಶೀದ್ ತಲಾ 2 ವಿಕೆಟ್ ಪಡೆದರು.

8 / 8

Published On - 6:02 pm, Sun, 29 October 23

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್