AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ, ಮತ್ತೋರ್ವ ವೇಗಿಗೆ ವಿಶ್ರಾಂತಿ

IND vs ENG 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆ ಹೊಂದಿದ್ದು, ಹೀಗಾಗಿ ಮ್ಯಾಚೆಂಸ್ಟರ್​ನಲ್ಲಿ ಭಾರತ ತಂಡ ಗೆಲ್ಲುವುದು ಅಥವಾ ಡ್ರಾ ಸಾಧಿಸುವುದು ಅನಿವಾರ್ಯ.

ಝಾಹಿರ್ ಯೂಸುಫ್
|

Updated on: Jul 20, 2025 | 1:56 PM

Share
ಮ್ಯಾಚೆಂಸ್ಟರ್​ನ ಓಲ್ಡ್​ ಟ್ರಾಫೋರ್ಡ್​ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಇದಕ್ಕೂ ಮುನ್ನ ಬುಮ್ರಾ ನಾಲ್ಕನೇ ಪಂದ್ಯದಿಂದ ಹೊರಗುಳಿಯಲಿದ್ದು, ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಮ್ಯಾಚೆಂಸ್ಟರ್​ನ ಓಲ್ಡ್​ ಟ್ರಾಫೋರ್ಡ್​ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಇದಕ್ಕೂ ಮುನ್ನ ಬುಮ್ರಾ ನಾಲ್ಕನೇ ಪಂದ್ಯದಿಂದ ಹೊರಗುಳಿಯಲಿದ್ದು, ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಕನ್ಫರ್ಮ್​ ಆಗಿದೆ. ಮೂರನೇ ಟೆಸ್ಟ್ ಪಂದ್ಯದ ಬಳಿಕ ಒಂದು ವಾರ ವಿಶ್ರಾಂತಿ ಲಭಿಸಿರುವ ಕಾರಣ ಬುಮ್ರಾ ಮ್ಯಾಚೆಂಸ್ಟರ್​ನಲ್ಲಿ ನಿರ್ಣಾಯಕ ಪಂದ್ಯವಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ನಾಲ್ಕನೇ ಪಂದ್ಯದ ವೇಳೆ ಮತ್ತೋರ್ವ ವೇಗಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಕನ್ಫರ್ಮ್​ ಆಗಿದೆ. ಮೂರನೇ ಟೆಸ್ಟ್ ಪಂದ್ಯದ ಬಳಿಕ ಒಂದು ವಾರ ವಿಶ್ರಾಂತಿ ಲಭಿಸಿರುವ ಕಾರಣ ಬುಮ್ರಾ ಮ್ಯಾಚೆಂಸ್ಟರ್​ನಲ್ಲಿ ನಿರ್ಣಾಯಕ ಪಂದ್ಯವಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ನಾಲ್ಕನೇ ಪಂದ್ಯದ ವೇಳೆ ಮತ್ತೋರ್ವ ವೇಗಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

2 / 5
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ 10 ವಿಕೆಟ್ ಕಬಳಿಸಿ ಮಿಂಚಿದ್ದ ಆಕಾಶ್ ದೀಪ್ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಅವರು ಏಕೈಕ ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್​ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ 10 ವಿಕೆಟ್ ಕಬಳಿಸಿ ಮಿಂಚಿದ್ದ ಆಕಾಶ್ ದೀಪ್ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಅವರು ಏಕೈಕ ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್​ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಇತ್ತ  ಆಕಾಶ್ ದೀಪ್​ ಹೊರಗುಳಿದರೆ, ಅವರ ಬದಲಿಗೆ ಕುಲ್ದೀಪ್ ಯಾದವ್ ಅಥವಾ ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಅವರನ್ನು ಕಣಕ್ಕಿಳಿಸಬಹುದು. ಇಲ್ಲ ಗಾಯಾಳು ಅರ್ಷದೀಪ್ ಸಿಂಗ್ ಬದಲಿಗೆ ಆಯ್ಕೆಯಾಗಿರುವ ಅನ್ಶುಲ್ ಕಂಬೋಜ್ ಅವರನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಬಹುದು. ಈ ಮೂಲಕ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸುವ ಸಾಧ್ಯತೆಯಿದೆ.

ಇತ್ತ  ಆಕಾಶ್ ದೀಪ್​ ಹೊರಗುಳಿದರೆ, ಅವರ ಬದಲಿಗೆ ಕುಲ್ದೀಪ್ ಯಾದವ್ ಅಥವಾ ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಅವರನ್ನು ಕಣಕ್ಕಿಳಿಸಬಹುದು. ಇಲ್ಲ ಗಾಯಾಳು ಅರ್ಷದೀಪ್ ಸಿಂಗ್ ಬದಲಿಗೆ ಆಯ್ಕೆಯಾಗಿರುವ ಅನ್ಶುಲ್ ಕಂಬೋಜ್ ಅವರನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಬಹುದು. ಈ ಮೂಲಕ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸುವ ಸಾಧ್ಯತೆಯಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

5 / 5
Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್