AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Root: ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಕಣ್ಣಿಟ್ಟ ಜೋ ರೂಟ್

India vs England Test: ಭಾರತ vs ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಿಂದ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಅತ್ತ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಹ್ಯಾರಿ ಬ್ರೂಕ್ ಕೂಡ ವೈಯುಕ್ತಿಕ ಕಾರಣಗಳಿಂದಾಗಿ ಈ ಸರಣಿಯಿಂದ ಹಿಂದೆ ಸರಿದಿದ್ದಾರೆ.

TV9 Web
| Edited By: |

Updated on: Jan 24, 2024 | 3:07 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ನಾಳೆಯಿಂದ (ಜ.25) ಶುರುವಾಗಲಿದೆ. ಹೈದರಾಬಾದ್​​ನ ರಾಜೀವ್ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ 10 ರನ್ ಬಾರಿಸಿದರೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಲಿದೆ. ಅದು ಕೂಡ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ನಾಳೆಯಿಂದ (ಜ.25) ಶುರುವಾಗಲಿದೆ. ಹೈದರಾಬಾದ್​​ನ ರಾಜೀವ್ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ 10 ರನ್ ಬಾರಿಸಿದರೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಲಿದೆ. ಅದು ಕೂಡ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇಂಗ್ಲೆಂಡ್ ವಿರುದ್ಧ 32 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ 7 ಶತಕಗಳೊಂದಿಗೆ 2535 ರನ್ ಕಲೆಹಾಕಿದ್ದಾರೆ.

ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇಂಗ್ಲೆಂಡ್ ವಿರುದ್ಧ 32 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ 7 ಶತಕಗಳೊಂದಿಗೆ 2535 ರನ್ ಕಲೆಹಾಕಿದ್ದಾರೆ.

2 / 5
ಇದೀಗ ಜೋ ರೂಟ್ ಈ ದಾಖಲೆಯನ್ನು ಮುರಿಯುವ ಹೊಸ್ತಿಲಲ್ಲಿದ್ದಾರೆ. ಭಾರತದ ವಿರುದ್ಧ 26 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 9 ಭರ್ಜರಿ ಶತಕಗಳೊಂದಿಗೆ 2526 ರನ್ ಬಾರಿಸಿದ್ದಾರೆ. ಇದೀಗ 27ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿರುವ ರೂಟ್ ಕೇವಲ 10 ರನ್​ಗಳಿಸಿದರೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಬಹುದು.

ಇದೀಗ ಜೋ ರೂಟ್ ಈ ದಾಖಲೆಯನ್ನು ಮುರಿಯುವ ಹೊಸ್ತಿಲಲ್ಲಿದ್ದಾರೆ. ಭಾರತದ ವಿರುದ್ಧ 26 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 9 ಭರ್ಜರಿ ಶತಕಗಳೊಂದಿಗೆ 2526 ರನ್ ಬಾರಿಸಿದ್ದಾರೆ. ಇದೀಗ 27ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿರುವ ರೂಟ್ ಕೇವಲ 10 ರನ್​ಗಳಿಸಿದರೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಬಹುದು.

3 / 5
ಹಾಗೆಯೇ ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿದರೆ ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ 1000 ರನ್ ಪೂರೈಸಿದ ಹಿರಿಮೆಗೂ ಜೋ ರೂಟ್ ಪಾತ್ರರಾಗಲಿದ್ದಾರೆ. ಇದುವರೆಗೆ ಭಾರತದಲ್ಲಿ 20 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್ 2 ಶತಕಗಳೊಂದಿಗೆ ಒಟ್ಟು 952 ರನ್ ಕಲೆಹಾಕಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿದರೆ ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ 1000 ರನ್ ಪೂರೈಸಿದ ಹಿರಿಮೆಗೂ ಜೋ ರೂಟ್ ಪಾತ್ರರಾಗಲಿದ್ದಾರೆ. ಇದುವರೆಗೆ ಭಾರತದಲ್ಲಿ 20 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್ 2 ಶತಕಗಳೊಂದಿಗೆ ಒಟ್ಟು 952 ರನ್ ಕಲೆಹಾಕಿದ್ದಾರೆ.

4 / 5
ಭಾರತದ ಪಿಚ್​ನಲ್ಲಿ 50.10 ಸರಾಸರಿಯಲ್ಲಿ ರನ್ ಕಲೆಹಾಕಿರುವ ಜೋ ರೂಟ್ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಟ್ರಂಪ್ ಕಾರ್ಡ್​. ಇದರ ಜೊತೆಗೆ ಸ್ಪಿನ್ ಬೌಲಿಂಗ್ ಕೂಡ ಮಾಡಬಲ್ಲರು. ಹೀಗಾಗಿ ಈ ಸರಣಿಯಲ್ಲಿ ಜೋ ರೂಟ್​ಗಾಗಿ ಟೀಮ್ ಇಂಡಿಯಾ ವಿಶೇಷ ರಣತಂತ್ರಗಳನ್ನು ರೂಪಿಸಲಿದೆ. ಈ ರಣತಂತ್ರಗಳಿಗೆ ಜೋ ರೂಟ್ ಪ್ರತಿತಂತ್ರ ರೂಪಿಸಿ ಯಾವೆಲ್ಲಾ ದಾಖಲೆ ಬರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಭಾರತದ ಪಿಚ್​ನಲ್ಲಿ 50.10 ಸರಾಸರಿಯಲ್ಲಿ ರನ್ ಕಲೆಹಾಕಿರುವ ಜೋ ರೂಟ್ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಟ್ರಂಪ್ ಕಾರ್ಡ್​. ಇದರ ಜೊತೆಗೆ ಸ್ಪಿನ್ ಬೌಲಿಂಗ್ ಕೂಡ ಮಾಡಬಲ್ಲರು. ಹೀಗಾಗಿ ಈ ಸರಣಿಯಲ್ಲಿ ಜೋ ರೂಟ್​ಗಾಗಿ ಟೀಮ್ ಇಂಡಿಯಾ ವಿಶೇಷ ರಣತಂತ್ರಗಳನ್ನು ರೂಪಿಸಲಿದೆ. ಈ ರಣತಂತ್ರಗಳಿಗೆ ಜೋ ರೂಟ್ ಪ್ರತಿತಂತ್ರ ರೂಪಿಸಿ ಯಾವೆಲ್ಲಾ ದಾಖಲೆ ಬರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ