AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

India vs England: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 471 ರನ್ ಕಲೆಹಾಕಿದರೆ, ಇಂಗ್ಲೆಂಡ್ 465 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on:Jun 23, 2025 | 8:37 AM

Share
ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು.

ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು.

1 / 6
ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ ಆಂಗ್ಲರ ವಿರುದ್ಧ ಟೆಸ್ಟ್ ನಲ್ಲಿ ಸಾವಿರ ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ್ದಾರೆ.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ ಆಂಗ್ಲರ ವಿರುದ್ಧ ಟೆಸ್ಟ್ ನಲ್ಲಿ ಸಾವಿರ ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧ ಈವರೆಗೆ 14 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ 26 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕನ್ನಡಿಗ ಕಲೆಹಾಕಿರುವುದು 1044 ರನ್​ಗಳು. ಇದರ ನಡುವೆ 3 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಈವರೆಗೆ 14 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ 26 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕನ್ನಡಿಗ ಕಲೆಹಾಕಿರುವುದು 1044 ರನ್​ಗಳು. ಇದರ ನಡುವೆ 3 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

3 / 6
ಈ ಮೂಲಕ ಭಾರತ - ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ‌ ಪಾತ್ರರಾಗಿದ್ದಾರೆ.

ಈ ಮೂಲಕ ಭಾರತ - ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ‌ ಪಾತ್ರರಾಗಿದ್ದಾರೆ.

4 / 6
ಇನ್ನು ಭಾರತ - ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಜೋ ರೂಟ್. ಟೀಮ್ ಇಂಡಿಯಾ ವಿರುದ್ಧ ಈವರೆಗೆ 56* ಇನಿಂಗ್ಸ್ ಆಡಿರುವ ರೂಟ್ ಒಟ್ಟು 2874 ರನ್ ಕಲೆಹಾಕಿದ್ದಾರೆ. ಈ ವೇಳೆ ರೂಟ್ ಬ್ಯಾಟ್ ನಿಂದ 10 ಶತಕಗಳು ಮತ್ತು 11 ಅರ್ಧಶತಕಗಳು ಮೂಡಿಬಂದಿವೆ.

ಇನ್ನು ಭಾರತ - ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಜೋ ರೂಟ್. ಟೀಮ್ ಇಂಡಿಯಾ ವಿರುದ್ಧ ಈವರೆಗೆ 56* ಇನಿಂಗ್ಸ್ ಆಡಿರುವ ರೂಟ್ ಒಟ್ಟು 2874 ರನ್ ಕಲೆಹಾಕಿದ್ದಾರೆ. ಈ ವೇಳೆ ರೂಟ್ ಬ್ಯಾಟ್ ನಿಂದ 10 ಶತಕಗಳು ಮತ್ತು 11 ಅರ್ಧಶತಕಗಳು ಮೂಡಿಬಂದಿವೆ.

5 / 6
ಇನ್ನು  ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 6 ರನ್​ಗಳ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 90 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​​ಮನ್ ಗಿಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ನಾಲ್ಕನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು  ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 6 ರನ್​ಗಳ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 90 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​​ಮನ್ ಗಿಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ನಾಲ್ಕನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

6 / 6

Published On - 8:32 am, Mon, 23 June 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ