AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

India vs England: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 471 ರನ್ ಕಲೆಹಾಕಿದರೆ, ಇಂಗ್ಲೆಂಡ್ 465 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on:Jun 23, 2025 | 8:37 AM

Share
ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು.

ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು.

1 / 6
ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ ಆಂಗ್ಲರ ವಿರುದ್ಧ ಟೆಸ್ಟ್ ನಲ್ಲಿ ಸಾವಿರ ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ್ದಾರೆ.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ ಆಂಗ್ಲರ ವಿರುದ್ಧ ಟೆಸ್ಟ್ ನಲ್ಲಿ ಸಾವಿರ ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧ ಈವರೆಗೆ 14 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ 26 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕನ್ನಡಿಗ ಕಲೆಹಾಕಿರುವುದು 1044 ರನ್​ಗಳು. ಇದರ ನಡುವೆ 3 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಈವರೆಗೆ 14 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ 26 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕನ್ನಡಿಗ ಕಲೆಹಾಕಿರುವುದು 1044 ರನ್​ಗಳು. ಇದರ ನಡುವೆ 3 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

3 / 6
ಈ ಮೂಲಕ ಭಾರತ - ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ‌ ಪಾತ್ರರಾಗಿದ್ದಾರೆ.

ಈ ಮೂಲಕ ಭಾರತ - ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ‌ ಪಾತ್ರರಾಗಿದ್ದಾರೆ.

4 / 6
ಇನ್ನು ಭಾರತ - ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಜೋ ರೂಟ್. ಟೀಮ್ ಇಂಡಿಯಾ ವಿರುದ್ಧ ಈವರೆಗೆ 56* ಇನಿಂಗ್ಸ್ ಆಡಿರುವ ರೂಟ್ ಒಟ್ಟು 2874 ರನ್ ಕಲೆಹಾಕಿದ್ದಾರೆ. ಈ ವೇಳೆ ರೂಟ್ ಬ್ಯಾಟ್ ನಿಂದ 10 ಶತಕಗಳು ಮತ್ತು 11 ಅರ್ಧಶತಕಗಳು ಮೂಡಿಬಂದಿವೆ.

ಇನ್ನು ಭಾರತ - ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಜೋ ರೂಟ್. ಟೀಮ್ ಇಂಡಿಯಾ ವಿರುದ್ಧ ಈವರೆಗೆ 56* ಇನಿಂಗ್ಸ್ ಆಡಿರುವ ರೂಟ್ ಒಟ್ಟು 2874 ರನ್ ಕಲೆಹಾಕಿದ್ದಾರೆ. ಈ ವೇಳೆ ರೂಟ್ ಬ್ಯಾಟ್ ನಿಂದ 10 ಶತಕಗಳು ಮತ್ತು 11 ಅರ್ಧಶತಕಗಳು ಮೂಡಿಬಂದಿವೆ.

5 / 6
ಇನ್ನು  ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 6 ರನ್​ಗಳ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 90 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​​ಮನ್ ಗಿಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ನಾಲ್ಕನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು  ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 6 ರನ್​ಗಳ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 90 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​​ಮನ್ ಗಿಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ನಾಲ್ಕನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

6 / 6

Published On - 8:32 am, Mon, 23 June 25

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ