AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕೆಎಲ್ ರಾಹುಲ್ ಔಟ್, ದೇವದತ್ ಪಡಿಕ್ಕಲ್ ಇನ್..! ಬಿಸಿಸಿಐ ಆಧಿಕೃತ ಮಾಹಿತಿ

IND vs ENG: ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಖಚಿತಪಡಿಸಿದೆ.

ಪೃಥ್ವಿಶಂಕರ
|

Updated on:Feb 12, 2024 | 9:00 PM

Share
ಭಾರತ ಹಾಗೂ ಇಂಗ್ಲೆಂಡ್ ನಡುವೆ ರಾಜ್​ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯದಿಂದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ರಾಹುಲ್ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಧೃಡಪಡಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವೆ ರಾಜ್​ಕೋಟ್​ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್​ ಪಂದ್ಯದಿಂದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ರಾಹುಲ್ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಧೃಡಪಡಿಸಿದೆ.

1 / 8
ರಾಹುಲ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಇಂಜುರಿಯಿಂದಾಗಿ ರಾಹುಲ್ ಮೂರನೇ ಟೆಸ್ಟ್​ ಪಂದ್ಯದಿಂದ ಹೊರಗುಳಿಯುತ್ತಿದ್ದು, ಅವರ ಬದಲಿಯಾಗಿ ದೇವದತ್ ಪಡಿಕ್ಕಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದಿದೆ.

ರಾಹುಲ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಇಂಜುರಿಯಿಂದಾಗಿ ರಾಹುಲ್ ಮೂರನೇ ಟೆಸ್ಟ್​ ಪಂದ್ಯದಿಂದ ಹೊರಗುಳಿಯುತ್ತಿದ್ದು, ಅವರ ಬದಲಿಯಾಗಿ ದೇವದತ್ ಪಡಿಕ್ಕಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದಿದೆ.

2 / 8
ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದ ವೇಳೆ ಇಂಜುರಿಗೊಳಗಾಗಿದ್ದ ಕೆಎಲ್​ ರಾಹುಲ್, ರಿಹ್ಯಾಬ್​ಗಾಗಿ ಬೆಂಗಳೂರಿನ ಎನ್​ಸಿಎ ಸೇರಿಕೊಂಡಿದ್ದರು. ಇಷ್ಟು ದಿನ ಎನ್​ಸಿಎನಲ್ಲಿ ಚೇತರಿಸಿಕೊಳ್ಳುತ್ತಿದ್ದ ರಾಹುಲ್, ನಿನ್ನೆಯಿಂದ ಅಭ್ಯಾಸವನ್ನೂ ಆರಂಭಿಸಿದ್ದರು.

ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದ ವೇಳೆ ಇಂಜುರಿಗೊಳಗಾಗಿದ್ದ ಕೆಎಲ್​ ರಾಹುಲ್, ರಿಹ್ಯಾಬ್​ಗಾಗಿ ಬೆಂಗಳೂರಿನ ಎನ್​ಸಿಎ ಸೇರಿಕೊಂಡಿದ್ದರು. ಇಷ್ಟು ದಿನ ಎನ್​ಸಿಎನಲ್ಲಿ ಚೇತರಿಸಿಕೊಳ್ಳುತ್ತಿದ್ದ ರಾಹುಲ್, ನಿನ್ನೆಯಿಂದ ಅಭ್ಯಾಸವನ್ನೂ ಆರಂಭಿಸಿದ್ದರು.

3 / 8
ಈ ಹಿಂದೆ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟ ಮಾಡಿದ್ದ ಬಿಸಿಸಿಐ, ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾರನ್ನು ತಂಡಕ್ಕೆ ಆಯ್ಕೆ ಮಾಡಿತ್ತು. ಆದರೆ ವೈದ್ಯಕೀಯ ತಂಡದಿಂದ ರಾಹುಲ್ ಫಿಟ್ ಎಂಬ ವರದಿ ಬಂದರೆ ಮಾತ್ರ ಅವರನ್ನು ತಂಡದಲ್ಲಿ ಆಡಿಸಲಾಗುವುದು ಎಂದಿತ್ತು.

ಈ ಹಿಂದೆ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟ ಮಾಡಿದ್ದ ಬಿಸಿಸಿಐ, ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾರನ್ನು ತಂಡಕ್ಕೆ ಆಯ್ಕೆ ಮಾಡಿತ್ತು. ಆದರೆ ವೈದ್ಯಕೀಯ ತಂಡದಿಂದ ರಾಹುಲ್ ಫಿಟ್ ಎಂಬ ವರದಿ ಬಂದರೆ ಮಾತ್ರ ಅವರನ್ನು ತಂಡದಲ್ಲಿ ಆಡಿಸಲಾಗುವುದು ಎಂದಿತ್ತು.

4 / 8
ಇದೀಗ ರಾಹುಲ್ ಮೂರನೇ ಟೆಸ್ಟ್​ನಿಂದ ಹೊರಗುಳಿದಿದ್ದಾರೆ. ಅಂದರೆ ರಾಹುಲ್ ಇನ್ನು ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂಬರ್ಥವಾಗಿದೆ. ಹೀಗಾಗಿ ರಾಹುಲ್​ ಎನ್​ಸಿಎನಲ್ಲೇ ಉಳಿಯುವ ಸಾಧ್ಯತೆಗಳಿವೆ. 4ನೇ ಟೆಸ್ಟ್​ ವೇಳೆಗೆ ರಾಹುಲ್ ಫಿಟ್ ಆದರೆ ಆಗ ತಂಡವನ್ನು ಕೂಡಿಕೊಳ್ಳಬಹುದಾಗಿದೆ.

ಇದೀಗ ರಾಹುಲ್ ಮೂರನೇ ಟೆಸ್ಟ್​ನಿಂದ ಹೊರಗುಳಿದಿದ್ದಾರೆ. ಅಂದರೆ ರಾಹುಲ್ ಇನ್ನು ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂಬರ್ಥವಾಗಿದೆ. ಹೀಗಾಗಿ ರಾಹುಲ್​ ಎನ್​ಸಿಎನಲ್ಲೇ ಉಳಿಯುವ ಸಾಧ್ಯತೆಗಳಿವೆ. 4ನೇ ಟೆಸ್ಟ್​ ವೇಳೆಗೆ ರಾಹುಲ್ ಫಿಟ್ ಆದರೆ ಆಗ ತಂಡವನ್ನು ಕೂಡಿಕೊಳ್ಳಬಹುದಾಗಿದೆ.

5 / 8
ಇನ್ನು ರಾಹುಲ್ ಬದಲಿಯಾಗಿ ಟೀಂ ಇಂಡಿಯಾವನ್ನು ಸೇರಿಕೊಂಡಿರುವ ದೇವದತ್ ಪಡಿಕಲ್ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾದ ಕರೆ ಸ್ವೀಕರಿಸಿರುವ ಪಡಿಕ್ಕಲ್ ಕರ್ನಾಟಕ ತಂಡವನ್ನು ಇಷ್ಟರಲ್ಲೇ ತೊರೆಯಲ್ಲಿದ್ದಾರೆ.

ಇನ್ನು ರಾಹುಲ್ ಬದಲಿಯಾಗಿ ಟೀಂ ಇಂಡಿಯಾವನ್ನು ಸೇರಿಕೊಂಡಿರುವ ದೇವದತ್ ಪಡಿಕಲ್ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾದ ಕರೆ ಸ್ವೀಕರಿಸಿರುವ ಪಡಿಕ್ಕಲ್ ಕರ್ನಾಟಕ ತಂಡವನ್ನು ಇಷ್ಟರಲ್ಲೇ ತೊರೆಯಲ್ಲಿದ್ದಾರೆ.

6 / 8
ಕೆಎಲ್ ರಾಹುಲ್ ಟೀಂ ಇಂಡಿಯಾದಿಂದ ಹೊರಗುಳಿಯವುದರೊಂದಿಗೆ ರವೀಂದ್ರ ಜಡೇಜಾ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ವಾಸ್ತವವಾಗಿ ಜಡೇಜಾ ಕೂಡ ರಾಹುಲ್​ರಂತೆ ಇಂಜುರಿಗೆ ತುತ್ತಾಗಿದ್ದರು. ಆದರೀಗ ಚೇತರಿಸಿಕೊಂಡಿರುವ ಜಡೇಜಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವುದನ್ನು ಕಾಣಬಹುದಾಗಿದೆ.

ಕೆಎಲ್ ರಾಹುಲ್ ಟೀಂ ಇಂಡಿಯಾದಿಂದ ಹೊರಗುಳಿಯವುದರೊಂದಿಗೆ ರವೀಂದ್ರ ಜಡೇಜಾ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ವಾಸ್ತವವಾಗಿ ಜಡೇಜಾ ಕೂಡ ರಾಹುಲ್​ರಂತೆ ಇಂಜುರಿಗೆ ತುತ್ತಾಗಿದ್ದರು. ಆದರೀಗ ಚೇತರಿಸಿಕೊಂಡಿರುವ ಜಡೇಜಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವುದನ್ನು ಕಾಣಬಹುದಾಗಿದೆ.

7 / 8
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

8 / 8

Published On - 8:44 pm, Mon, 12 February 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ