AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕೆಎಲ್ ರಾಹುಲ್ ಅಲಭ್ಯ; ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆ ಅವಕಾಶ?

IND vs ENG: ರಾಹುಲ್ ಬದಲು ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

ಪೃಥ್ವಿಶಂಕರ
|

Updated on: Feb 12, 2024 | 8:31 PM

Share
ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

1 / 7
ವರದಿಯಂತೆ ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

ವರದಿಯಂತೆ ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

2 / 7
ಅವರುಗಳಲ್ಲಿ ಪ್ರಮುಖರು ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ಈ ಇಬ್ಬರು ಚೊಚ್ಚಲ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

ಅವರುಗಳಲ್ಲಿ ಪ್ರಮುಖರು ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ಈ ಇಬ್ಬರು ಚೊಚ್ಚಲ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

3 / 7
ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ ಸತತ ಅವಕಾಶಗಳ ಹೊರತಾಗಿಯೂ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಕೆಎಸ್ ಭರತ್ ಬದಲಿಗೆ ಧೃವ್ ಜುರೇಲ್​ಗೆ ಅವಕಾಶ  ನೀಡುವ ಸಾಧ್ಯತೆಗಳು ಹೆಚ್ಚಿವೆ. ಭರತ್ ಬದಲಿಯಾಗಲ್ಲದಿದ್ದರೂ, ರಾಹುಲ್ ಬದಲಿಯಾಗದರೂ ಧೃವ್ ಆಡುವ ಅವಕಾಶ ಪಡೆಯಬಹುದಾಗಿದೆ.

ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ ಸತತ ಅವಕಾಶಗಳ ಹೊರತಾಗಿಯೂ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಕೆಎಸ್ ಭರತ್ ಬದಲಿಗೆ ಧೃವ್ ಜುರೇಲ್​ಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಭರತ್ ಬದಲಿಯಾಗಲ್ಲದಿದ್ದರೂ, ರಾಹುಲ್ ಬದಲಿಯಾಗದರೂ ಧೃವ್ ಆಡುವ ಅವಕಾಶ ಪಡೆಯಬಹುದಾಗಿದೆ.

4 / 7
ಭಾರತದಲ್ಲಿ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿರುವ ಧೃವ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 1 ಶತಕ ಸೇರಿದಂತೆ 790 ರನ್ ಸಹ ಗಳಿಸಿದ್ದಾರೆ. ಇದಲ್ಲದೆ ಧೃವ್ 10 ಲಿಸ್ಟ್ ಎ ಪಂದ್ಯಗಳನ್ನೂ ಆಡಿದ್ದಾರೆ.

ಭಾರತದಲ್ಲಿ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿರುವ ಧೃವ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 1 ಶತಕ ಸೇರಿದಂತೆ 790 ರನ್ ಸಹ ಗಳಿಸಿದ್ದಾರೆ. ಇದಲ್ಲದೆ ಧೃವ್ 10 ಲಿಸ್ಟ್ ಎ ಪಂದ್ಯಗಳನ್ನೂ ಆಡಿದ್ದಾರೆ.

5 / 7
ರಣಜಿ ಟ್ರೋಫಿಯ ಕಳೆದ ಹಲವು ಸೀಸನ್‌ಗಳಲ್ಲಿ ಸರ್ಫರಾಜ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಉತ್ತಮ ಲಯದಲ್ಲಿದ್ದು, ದೊಡ್ಡ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ರಾಹುಲ್ ಬದಲಿಯಾಗಿ ಸರ್ಫರಾಜ್​ಗೆ ಅವಕಾಶ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.

ರಣಜಿ ಟ್ರೋಫಿಯ ಕಳೆದ ಹಲವು ಸೀಸನ್‌ಗಳಲ್ಲಿ ಸರ್ಫರಾಜ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಉತ್ತಮ ಲಯದಲ್ಲಿದ್ದು, ದೊಡ್ಡ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ರಾಹುಲ್ ಬದಲಿಯಾಗಿ ಸರ್ಫರಾಜ್​ಗೆ ಅವಕಾಶ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.

6 / 7
ಸರ್ಫರಾಜ್ ಇದುವರೆಗೆ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 14 ಶತಕಗಳನ್ನು ಒಳಗೊಂಡಂತೆ 3912 ರನ್ ಗಳಿಸಿದ್ದಾರೆ. ಹಾಗೆಯೇ 37 ಲಿಸ್ಟ್-ಎ ಪಂದ್ಯಗಳಲ್ಲಿ ಸರ್ಫರಾಜ್ 629 ರನ್ ಕಲೆಹಾಕಿದ್ದಾರೆ.

ಸರ್ಫರಾಜ್ ಇದುವರೆಗೆ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 14 ಶತಕಗಳನ್ನು ಒಳಗೊಂಡಂತೆ 3912 ರನ್ ಗಳಿಸಿದ್ದಾರೆ. ಹಾಗೆಯೇ 37 ಲಿಸ್ಟ್-ಎ ಪಂದ್ಯಗಳಲ್ಲಿ ಸರ್ಫರಾಜ್ 629 ರನ್ ಕಲೆಹಾಕಿದ್ದಾರೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ