AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕೆಎಲ್ ರಾಹುಲ್ ಅಲಭ್ಯ; ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆ ಅವಕಾಶ?

IND vs ENG: ರಾಹುಲ್ ಬದಲು ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

ಪೃಥ್ವಿಶಂಕರ
|

Updated on: Feb 12, 2024 | 8:31 PM

Share
ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

1 / 7
ವರದಿಯಂತೆ ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

ವರದಿಯಂತೆ ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

2 / 7
ಅವರುಗಳಲ್ಲಿ ಪ್ರಮುಖರು ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ಈ ಇಬ್ಬರು ಚೊಚ್ಚಲ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

ಅವರುಗಳಲ್ಲಿ ಪ್ರಮುಖರು ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ಈ ಇಬ್ಬರು ಚೊಚ್ಚಲ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

3 / 7
ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ ಸತತ ಅವಕಾಶಗಳ ಹೊರತಾಗಿಯೂ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಕೆಎಸ್ ಭರತ್ ಬದಲಿಗೆ ಧೃವ್ ಜುರೇಲ್​ಗೆ ಅವಕಾಶ  ನೀಡುವ ಸಾಧ್ಯತೆಗಳು ಹೆಚ್ಚಿವೆ. ಭರತ್ ಬದಲಿಯಾಗಲ್ಲದಿದ್ದರೂ, ರಾಹುಲ್ ಬದಲಿಯಾಗದರೂ ಧೃವ್ ಆಡುವ ಅವಕಾಶ ಪಡೆಯಬಹುದಾಗಿದೆ.

ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ ಸತತ ಅವಕಾಶಗಳ ಹೊರತಾಗಿಯೂ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಕೆಎಸ್ ಭರತ್ ಬದಲಿಗೆ ಧೃವ್ ಜುರೇಲ್​ಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಭರತ್ ಬದಲಿಯಾಗಲ್ಲದಿದ್ದರೂ, ರಾಹುಲ್ ಬದಲಿಯಾಗದರೂ ಧೃವ್ ಆಡುವ ಅವಕಾಶ ಪಡೆಯಬಹುದಾಗಿದೆ.

4 / 7
ಭಾರತದಲ್ಲಿ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿರುವ ಧೃವ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 1 ಶತಕ ಸೇರಿದಂತೆ 790 ರನ್ ಸಹ ಗಳಿಸಿದ್ದಾರೆ. ಇದಲ್ಲದೆ ಧೃವ್ 10 ಲಿಸ್ಟ್ ಎ ಪಂದ್ಯಗಳನ್ನೂ ಆಡಿದ್ದಾರೆ.

ಭಾರತದಲ್ಲಿ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿರುವ ಧೃವ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 1 ಶತಕ ಸೇರಿದಂತೆ 790 ರನ್ ಸಹ ಗಳಿಸಿದ್ದಾರೆ. ಇದಲ್ಲದೆ ಧೃವ್ 10 ಲಿಸ್ಟ್ ಎ ಪಂದ್ಯಗಳನ್ನೂ ಆಡಿದ್ದಾರೆ.

5 / 7
ರಣಜಿ ಟ್ರೋಫಿಯ ಕಳೆದ ಹಲವು ಸೀಸನ್‌ಗಳಲ್ಲಿ ಸರ್ಫರಾಜ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಉತ್ತಮ ಲಯದಲ್ಲಿದ್ದು, ದೊಡ್ಡ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ರಾಹುಲ್ ಬದಲಿಯಾಗಿ ಸರ್ಫರಾಜ್​ಗೆ ಅವಕಾಶ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.

ರಣಜಿ ಟ್ರೋಫಿಯ ಕಳೆದ ಹಲವು ಸೀಸನ್‌ಗಳಲ್ಲಿ ಸರ್ಫರಾಜ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಉತ್ತಮ ಲಯದಲ್ಲಿದ್ದು, ದೊಡ್ಡ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ರಾಹುಲ್ ಬದಲಿಯಾಗಿ ಸರ್ಫರಾಜ್​ಗೆ ಅವಕಾಶ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.

6 / 7
ಸರ್ಫರಾಜ್ ಇದುವರೆಗೆ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 14 ಶತಕಗಳನ್ನು ಒಳಗೊಂಡಂತೆ 3912 ರನ್ ಗಳಿಸಿದ್ದಾರೆ. ಹಾಗೆಯೇ 37 ಲಿಸ್ಟ್-ಎ ಪಂದ್ಯಗಳಲ್ಲಿ ಸರ್ಫರಾಜ್ 629 ರನ್ ಕಲೆಹಾಕಿದ್ದಾರೆ.

ಸರ್ಫರಾಜ್ ಇದುವರೆಗೆ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 14 ಶತಕಗಳನ್ನು ಒಳಗೊಂಡಂತೆ 3912 ರನ್ ಗಳಿಸಿದ್ದಾರೆ. ಹಾಗೆಯೇ 37 ಲಿಸ್ಟ್-ಎ ಪಂದ್ಯಗಳಲ್ಲಿ ಸರ್ಫರಾಜ್ 629 ರನ್ ಕಲೆಹಾಕಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ