AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ಎಂಟ್ರಿ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಗಾಯಗೊಂಡಿರುವ ಪಂತ್ ಬದಲಿಗೆ ಇದೀಗ ತಮಿಳುನಾಡು ಮೂಲದ ವಿಕೆಟ್ ಕೀಪರ್​ನನ್ನು ಆಯ್ಕೆ ಮಾಡಲಾಗಿದೆ.

ಝಾಹಿರ್ ಯೂಸುಫ್
|

Updated on: Jul 28, 2025 | 7:24 AM

Share
ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆಯಾಗಿದೆ‌. ಈ ಬದಲಾವಣೆಯೊಂದಿಗೆ ರಿಷಭ್ ಪಂತ್ (Rishab Pant) ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಸಹ ಖಚಿತವಾಗಿದೆ.

ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆಯಾಗಿದೆ‌. ಈ ಬದಲಾವಣೆಯೊಂದಿಗೆ ರಿಷಭ್ ಪಂತ್ (Rishab Pant) ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಸಹ ಖಚಿತವಾಗಿದೆ.

1 / 5
ಮ್ಯಾಂಚೆಸ್ಟರ್​ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಬ್ಯಾಟಿಂಗ್ ವೇಳೆ ರಿಷಭ್ ಪಂತ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿತ್ತು. ಈ ಗಾಯದ ಕಾರಣ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ‌. ಅಲ್ಲದೆ ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು 6 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐದನೇ ಟೆಸ್ಟ್ ಪಂದ್ಯದಿಂದ ಪಂತ್ ಹೊರಗುಳಿದಿದ್ದಾರೆ.

ಮ್ಯಾಂಚೆಸ್ಟರ್​ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಬ್ಯಾಟಿಂಗ್ ವೇಳೆ ರಿಷಭ್ ಪಂತ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿತ್ತು. ಈ ಗಾಯದ ಕಾರಣ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ‌. ಅಲ್ಲದೆ ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು 6 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐದನೇ ಟೆಸ್ಟ್ ಪಂದ್ಯದಿಂದ ಪಂತ್ ಹೊರಗುಳಿದಿದ್ದಾರೆ.

2 / 5
ಇತ್ತ ರಿಷಭ್ ಪಂತ್ ಹೊರಗುಳಿಯುವ ಸುದ್ದಿಯ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬದಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ ಇಶಾನ್ ಕೂಡ ಗಾಯಗೊಂಡಿರುವ ಕಾರಣ ತಮಿಳುನಾಡು ಮೂಲಕ ಅನುಭವಿ ವಿಕೆಟ್ ಕೀಪರ್ ನಾರಾಯಣ್ ಜಗದೀಸನ್​ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಇತ್ತ ರಿಷಭ್ ಪಂತ್ ಹೊರಗುಳಿಯುವ ಸುದ್ದಿಯ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬದಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ ಇಶಾನ್ ಕೂಡ ಗಾಯಗೊಂಡಿರುವ ಕಾರಣ ತಮಿಳುನಾಡು ಮೂಲಕ ಅನುಭವಿ ವಿಕೆಟ್ ಕೀಪರ್ ನಾರಾಯಣ್ ಜಗದೀಸನ್​ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

3 / 5
ಎನ್​. ಜಗದೀಸನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 52 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 79 ಇನಿಂಗ್ಸ್ ಆಡಿರುವ ಅವರು 3373 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ತ್ರಿಶತಕ, 9 ಶತಕ ಹಾಗೂ 14 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಅನುಭವಿ ಆಟಕ್ಕೆ ಮಣೆಹಾಕಿರುವ ಬಿಸಿಸಿಐ ಕೊನೆಯ ಟೆಸ್ಟ್ ಪಂದ್ಯಕ್ಕೆ 29 ವರ್ಷದ ಜಗದೀಸನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಎನ್​. ಜಗದೀಸನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 52 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 79 ಇನಿಂಗ್ಸ್ ಆಡಿರುವ ಅವರು 3373 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ತ್ರಿಶತಕ, 9 ಶತಕ ಹಾಗೂ 14 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಅನುಭವಿ ಆಟಕ್ಕೆ ಮಣೆಹಾಕಿರುವ ಬಿಸಿಸಿಐ ಕೊನೆಯ ಟೆಸ್ಟ್ ಪಂದ್ಯಕ್ಕೆ 29 ವರ್ಷದ ಜಗದೀಸನ್ ಅವರನ್ನು ಆಯ್ಕೆ ಮಾಡಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್.

5 / 5
Follow Us
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ