AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ

England vs India, 1st Test: ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 465 ರನ್​​ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Jun 23, 2025 | 7:24 AM

Share
120 ಎಸೆತಗಳಲ್ಲಿ ಬರೋಬ್ಬರಿ 128 ರನ್​… ಇದು ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಆಟಗಾರ ಪ್ರಸಿದ್ಧ್ ಕೃಷ್ಣ ಕಲೆಹಾಕಿರುವ ರನ್​ಗಳಲ್ಲ. ಬದಲಾಗಿ ನೀಡಿರುವ ರನ್​..! ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಗಿದ್ದಾರೆ.

120 ಎಸೆತಗಳಲ್ಲಿ ಬರೋಬ್ಬರಿ 128 ರನ್​… ಇದು ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಆಟಗಾರ ಪ್ರಸಿದ್ಧ್ ಕೃಷ್ಣ ಕಲೆಹಾಕಿರುವ ರನ್​ಗಳಲ್ಲ. ಬದಲಾಗಿ ನೀಡಿರುವ ರನ್​..! ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಗಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್​​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು 471 ರನ್​ ಕಲೆಹಾಕಿದ ಆಲೌಟ್ ಆಯಿತು.

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್​​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು 471 ರನ್​ ಕಲೆಹಾಕಿದ ಆಲೌಟ್ ಆಯಿತು.

2 / 6
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಜಸ್​ಪ್ರೀತ್ ಬುಮ್ರಾ ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ವೇಗಿಗಳಿಂದ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಅದರಲ್ಲೂ ಪ್ರಸಿದ್ಧ್ ಕೃಷ್ಣ ಓವರ್​ಗಳಲ್ಲಿ ಇಂಗ್ಲೆಂಡ್ ದಾಂಡಿಗರು ನಿರಾಯಾಸವಾಗಿ ರನ್ ಕಲೆಹಾಕುತ್ತಿರುವುದು ಕಂಡು ಬಂತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಜಸ್​ಪ್ರೀತ್ ಬುಮ್ರಾ ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ವೇಗಿಗಳಿಂದ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಅದರಲ್ಲೂ ಪ್ರಸಿದ್ಧ್ ಕೃಷ್ಣ ಓವರ್​ಗಳಲ್ಲಿ ಇಂಗ್ಲೆಂಡ್ ದಾಂಡಿಗರು ನಿರಾಯಾಸವಾಗಿ ರನ್ ಕಲೆಹಾಕುತ್ತಿರುವುದು ಕಂಡು ಬಂತು.

3 / 6
ಪರಿಣಾಮ ಪ್ರಸಿದ್ಧ್ ಕೃಷ್ಣ ಕೇವಲ 17 ಓವರ್​​ಗಳಲ್ಲಿ 102 ರನ್​ ಬಿಟ್ಟು ಕೊಟ್ಟರು. ನೂರು ರನ್​ಗಳ ಬಳಿಕ ಕೂಡ ಪ್ರಸಿದ್ಧ್ ಲಯಕ್ಕೆ ಮರಳಲಿಲ್ಲ. ಬದಲಾಗಿ ಮತ್ತಷ್ಟು ದುಬಾರಿಯಾದರು. ಈ ಮೂಲಕ 20 ಓವರ್​​ಗಳಲ್ಲಿ ಬರೋಬ್ಬರಿ 128 ರನ್​ಗಳನ್ನು ನೀಡಿದರು. ಅಂದರೆ ಪ್ರತಿ ಓವರ್​ಗೆ 6.4 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟರು. ಇದರ ನಡುವೆ ಮೂರು ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಮಾಧಾನಕರ.

ಪರಿಣಾಮ ಪ್ರಸಿದ್ಧ್ ಕೃಷ್ಣ ಕೇವಲ 17 ಓವರ್​​ಗಳಲ್ಲಿ 102 ರನ್​ ಬಿಟ್ಟು ಕೊಟ್ಟರು. ನೂರು ರನ್​ಗಳ ಬಳಿಕ ಕೂಡ ಪ್ರಸಿದ್ಧ್ ಲಯಕ್ಕೆ ಮರಳಲಿಲ್ಲ. ಬದಲಾಗಿ ಮತ್ತಷ್ಟು ದುಬಾರಿಯಾದರು. ಈ ಮೂಲಕ 20 ಓವರ್​​ಗಳಲ್ಲಿ ಬರೋಬ್ಬರಿ 128 ರನ್​ಗಳನ್ನು ನೀಡಿದರು. ಅಂದರೆ ಪ್ರತಿ ಓವರ್​ಗೆ 6.4 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟರು. ಇದರ ನಡುವೆ ಮೂರು ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಮಾಧಾನಕರ.

4 / 6
ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಕೂಡ ರನ್​ ಸೋರಿಕೆ ಮಾಡಿದರು. ಪರಿಣಾಮ ಸಿರಾಜ್ ಎಸೆದ 22 ಓವರ್​​ಗಳಲ್ಲಿ ಇಂಗ್ಲೆಂಡ್ ದಾಂಡಿಗರು 100 ರನ್ ಕಲೆಹಾಕಿದರು. ಇದಾದ ಬಳಿಕ ಲಯಕ್ಕೆ ಮರಳಿದ ಸಿರಾಜ್ 27 ಓವರ್​​ಗಳಲ್ಲಿ 122 ರನ್ ನೀಡಿ 2 ವಿಕೆಟ್ ಕಬಳಿಸಿದರು.

ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಕೂಡ ರನ್​ ಸೋರಿಕೆ ಮಾಡಿದರು. ಪರಿಣಾಮ ಸಿರಾಜ್ ಎಸೆದ 22 ಓವರ್​​ಗಳಲ್ಲಿ ಇಂಗ್ಲೆಂಡ್ ದಾಂಡಿಗರು 100 ರನ್ ಕಲೆಹಾಕಿದರು. ಇದಾದ ಬಳಿಕ ಲಯಕ್ಕೆ ಮರಳಿದ ಸಿರಾಜ್ 27 ಓವರ್​​ಗಳಲ್ಲಿ 122 ರನ್ ನೀಡಿ 2 ವಿಕೆಟ್ ಕಬಳಿಸಿದರು.

5 / 6
ಇನ್ನೊಂದೆಡೆ ಏಕಾಂಗಿಯಾಗಿ ಇಂಗ್ಲೆಂಡ್ ದಾಂಡಿಗರನ್ನು ಕಾಡಿದ ಜಸ್​ಪ್ರೀತ್ ಬುಮ್ರಾ 24.4 ಕೇವಲ 83 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್​​​ನಲ್ಲಿ 465 ರನ್​​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 6 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.

ಇನ್ನೊಂದೆಡೆ ಏಕಾಂಗಿಯಾಗಿ ಇಂಗ್ಲೆಂಡ್ ದಾಂಡಿಗರನ್ನು ಕಾಡಿದ ಜಸ್​ಪ್ರೀತ್ ಬುಮ್ರಾ 24.4 ಕೇವಲ 83 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್​​​ನಲ್ಲಿ 465 ರನ್​​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 6 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.

6 / 6
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ