Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ವಿರುದ್ಧ ಮೊದಲ ಬಾರಿಗೆ ಈ ಸಾಧನೆ ಮಾಡಿದ ಶುಭ್​ಮನ್ ಗಿಲ್

Shubman Gill: ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಶುಭ್ಮನ್ ಗಿಲ್ ಅವರ ಅದ್ಭುತ ಅರ್ಧಶತಕ ಭಾರತಕ್ಕೆ ಗೆಲುವು ತಂದುಕೊಟ್ಟಿದೆ. 19 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗೆ ಬಂದ ಗಿಲ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿ ತಮ್ಮ 15ನೇ ಅರ್ಧಶತಕ ದಾಖಲಿಸಿದರು. ವಿಶೇಷವೆಂದರೆ ಉಪನಾಯಕನಾಗಿ ಗಿಲ್​ಗೆ ಇದು ಮೊದಲ ಅರ್ಧಶತಕವಾದರೆ, ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಅರ್ಧಶತಕ ಸಿಡಿಸಿದ ಸಾಧನೆಯನ್ನು ಗಿಲ್ ಮಾಡಿದರು.

ಪೃಥ್ವಿಶಂಕರ
|

Updated on: Feb 07, 2025 | 8:33 AM

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ಮೂರನೇ ಸ್ಥಾನದಲ್ಲಿ ಕ್ರೀಸ್​ಗಿಳಿದಿದ್ದ ಶುಭ್​ಮನ್ ಗಿಲ್ ಅದ್ಭುತ ಪ್ರದರ್ಶನ ನೀಡಿದರು. ಕೇವಲ 19 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಜವಬ್ದಾರಿಯುತ ಬ್ಯಾಟಿಂಗ್ ಮಾಡಿದ ಶುಭ್​ಮನ್ ತಮ್ಮ ಏಕದಿನ ವೃತ್ತಿಜೀವನದ 15 ನೇ ಅರ್ಧಶತಕ ದಾಖಲಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ಮೂರನೇ ಸ್ಥಾನದಲ್ಲಿ ಕ್ರೀಸ್​ಗಿಳಿದಿದ್ದ ಶುಭ್​ಮನ್ ಗಿಲ್ ಅದ್ಭುತ ಪ್ರದರ್ಶನ ನೀಡಿದರು. ಕೇವಲ 19 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಜವಬ್ದಾರಿಯುತ ಬ್ಯಾಟಿಂಗ್ ಮಾಡಿದ ಶುಭ್​ಮನ್ ತಮ್ಮ ಏಕದಿನ ವೃತ್ತಿಜೀವನದ 15 ನೇ ಅರ್ಧಶತಕ ದಾಖಲಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

1 / 5
ಆದಾಗ್ಯೂ ಶುಭಮನ್ ಗಿಲ್ ಕೊನೆಯ ಹಂತದಲ್ಲಿ ಹೊಡಿಬಡಿ ಆಟಕ್ಕೆ ಮುಂದಾಗಿ ಕೇವಲ 13 ರನ್​ಗಳಿಂದ ಶತಕ ವಂಚಿತರಾದರೂ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಅಪರೂಪದ ಅರ್ಧಶತಕದ ಸಾಧನೆ ಮಾಡಿದರು. ವಾಸ್ತವವಾಗಿ ಗಿಲ್ ಅವರಿಗೆ ಈ ಅರ್ಧಶತಕ ವಿಶೇಷವಾಗಿದೆ. ಏಕೆಂದರೆ ಅವರು ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಬಾರಿಗೆ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಅದರಲ್ಲೂ ಗುರಿ ಬೆನ್ನಟ್ಟುವ ಬಂದ ಈ ಅರ್ಧಶತಕ ಗಿಲ್ ಪಾಲಿಗೆ ಮತ್ತಷ್ಟು ವಿಶೇಷವಾಗಿದೆ.

ಆದಾಗ್ಯೂ ಶುಭಮನ್ ಗಿಲ್ ಕೊನೆಯ ಹಂತದಲ್ಲಿ ಹೊಡಿಬಡಿ ಆಟಕ್ಕೆ ಮುಂದಾಗಿ ಕೇವಲ 13 ರನ್​ಗಳಿಂದ ಶತಕ ವಂಚಿತರಾದರೂ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಅಪರೂಪದ ಅರ್ಧಶತಕದ ಸಾಧನೆ ಮಾಡಿದರು. ವಾಸ್ತವವಾಗಿ ಗಿಲ್ ಅವರಿಗೆ ಈ ಅರ್ಧಶತಕ ವಿಶೇಷವಾಗಿದೆ. ಏಕೆಂದರೆ ಅವರು ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಬಾರಿಗೆ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಅದರಲ್ಲೂ ಗುರಿ ಬೆನ್ನಟ್ಟುವ ಬಂದ ಈ ಅರ್ಧಶತಕ ಗಿಲ್ ಪಾಲಿಗೆ ಮತ್ತಷ್ಟು ವಿಶೇಷವಾಗಿದೆ.

2 / 5
ಮೇಲೆ ಹೇಳಿದಂತೆ ಭಾರತ ಸಂಕಷ್ಟದಲ್ಲಿದ್ದಾಗ ಶುಭ್​ಮನ್ ಗಿಲ್ ತಂಡದ ಸಾರಥ್ಯ ವಹಿಸಿಕೊಂಡರು. ಟೀಂ ಇಂಡಿಯಾ ಕೇವಲ 19 ರನ್​ಗಳಿಗೆ ಜೈಸ್ವಾಲ್ ಮತ್ತು ರೋಹಿತ್ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಅಯ್ಯರ್ ಜೊತೆ ಸೇರಿ ಗಿಲ್ ಮೂರನೇ ವಿಕೆಟ್‌ಗೆ ಕೇವಲ 10.4 ಓವರ್‌ಗಳಲ್ಲಿ 94 ರನ್‌ಗಳನ್ನು ಜೊತೆಯಾಟ ನಡೆಸಿದರು.

ಮೇಲೆ ಹೇಳಿದಂತೆ ಭಾರತ ಸಂಕಷ್ಟದಲ್ಲಿದ್ದಾಗ ಶುಭ್​ಮನ್ ಗಿಲ್ ತಂಡದ ಸಾರಥ್ಯ ವಹಿಸಿಕೊಂಡರು. ಟೀಂ ಇಂಡಿಯಾ ಕೇವಲ 19 ರನ್​ಗಳಿಗೆ ಜೈಸ್ವಾಲ್ ಮತ್ತು ರೋಹಿತ್ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಅಯ್ಯರ್ ಜೊತೆ ಸೇರಿ ಗಿಲ್ ಮೂರನೇ ವಿಕೆಟ್‌ಗೆ ಕೇವಲ 10.4 ಓವರ್‌ಗಳಲ್ಲಿ 94 ರನ್‌ಗಳನ್ನು ಜೊತೆಯಾಟ ನಡೆಸಿದರು.

3 / 5
ಅರ್ಧಶತಕ ಸಿಡಿಸಿ ಶ್ರೇಯಸ್ ಅಯ್ಯರ್ ಔಟಾದ ಬಳಿಕವೂ ಗಿಲ್ ಅದೇ ಜವಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದರು. ಈ ವೇಳೆ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಕ್ರೀಸ್​ಗೆ ಬಂದ ಅಕ್ಷರ್ ಪಟೇಲ್ ಅವರೊಂದಿಗೂ  ಶತಕದ ಜೊತೆಯಾಟ ನಡೆಸಿದರು. ಇಬ್ಬರೂ 107 ಎಸೆತಗಳಲ್ಲಿ 108 ರನ್ ಸೇರಿಸಿದರು. ಈ ಜೊತೆಯಾಟದಲ್ಲಿ ಅಕ್ಷರ್ 52 ರನ್ ಮತ್ತು ಗಿಲ್ 53 ರನ್ ಕಲೆಹಾಕಿದರು.

ಅರ್ಧಶತಕ ಸಿಡಿಸಿ ಶ್ರೇಯಸ್ ಅಯ್ಯರ್ ಔಟಾದ ಬಳಿಕವೂ ಗಿಲ್ ಅದೇ ಜವಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದರು. ಈ ವೇಳೆ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಕ್ರೀಸ್​ಗೆ ಬಂದ ಅಕ್ಷರ್ ಪಟೇಲ್ ಅವರೊಂದಿಗೂ ಶತಕದ ಜೊತೆಯಾಟ ನಡೆಸಿದರು. ಇಬ್ಬರೂ 107 ಎಸೆತಗಳಲ್ಲಿ 108 ರನ್ ಸೇರಿಸಿದರು. ಈ ಜೊತೆಯಾಟದಲ್ಲಿ ಅಕ್ಷರ್ 52 ರನ್ ಮತ್ತು ಗಿಲ್ 53 ರನ್ ಕಲೆಹಾಕಿದರು.

4 / 5
ಶುಭಮನ್ ಗಿಲ್ ನಾಗ್ಪುರ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸುವುದರೊಂದಿಗೆ ಮತ್ತೊಂದು ದೊಡ್ಡ ಸಾಧನೆ ಕೂಡ ಮಾಡಿದ್ದಾರೆ. ವಾಸ್ತವವಾಗಿ ಗಿಲ್, 2000 ಕ್ಕೂ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಅತ್ಯಧಿಕ ಸರಾಸರಿ ಹೊಂದಿರುವ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗಿಲ್ ಅವರ ಸರಾಸರಿ 60 ದಾಟಿದೆ.

ಶುಭಮನ್ ಗಿಲ್ ನಾಗ್ಪುರ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸುವುದರೊಂದಿಗೆ ಮತ್ತೊಂದು ದೊಡ್ಡ ಸಾಧನೆ ಕೂಡ ಮಾಡಿದ್ದಾರೆ. ವಾಸ್ತವವಾಗಿ ಗಿಲ್, 2000 ಕ್ಕೂ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಅತ್ಯಧಿಕ ಸರಾಸರಿ ಹೊಂದಿರುವ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗಿಲ್ ಅವರ ಸರಾಸರಿ 60 ದಾಟಿದೆ.

5 / 5
Follow us
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ