ವೇಗ ಅತೀ ವೇಗ… ಭರ್ಜರಿ ದಾಖಲೆ ಬರೆದ ಭಾರತ ತಂಡ

IND vs ENG 1st T20: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಯ ತಂಡ 132 ರನ್ ಗಳಿಸಿ ಆಲೌಟ್ ಆದರೆ, ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 12.5 ಚೇಸ್ ಮಾಡಿದೆ. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದೆ.

ಝಾಹಿರ್ ಯೂಸುಫ್
|

Updated on: Jan 23, 2025 | 7:23 AM

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.

1 / 6
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್​ನ ಎಲ್ಲಾ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಇದಾಗ್ಯೂ ಒಂದೆಡೆ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 68 ರನ್ ಬಾರಿಸುವಲ್ಲಿ ಸಫಲರಾದರು. ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 132 ರನ್ ಗಳಿಸಿ ಆಲೌಟ್ ಆಯಿತು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್​ನ ಎಲ್ಲಾ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಇದಾಗ್ಯೂ ಒಂದೆಡೆ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 68 ರನ್ ಬಾರಿಸುವಲ್ಲಿ ಸಫಲರಾದರು. ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 132 ರನ್ ಗಳಿಸಿ ಆಲೌಟ್ ಆಯಿತು.

2 / 6
133 ರನ್ ಗಳ ಗುರಿ ಪಡೆದ ಟೀಮ್ ಇಂಡಿಯಾಗೆ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದರು. ಅದರಲ್ಲೂ ಅಭಿಷೇಕ್ ಶರ್ಮಾ ಕೇವಲ 34 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 79 ರನ್ ಚಚ್ಚಿದರು. ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಕೇವಲ 12.5 ಓವರ್‌ಗಳಲ್ಲಿ 133 ರನ್ ಬಾರಿಸಿ 7 ವಿಕೆಟ್‌ಗಳ ಜಯ ಸಾಧಿಸಿತು.

133 ರನ್ ಗಳ ಗುರಿ ಪಡೆದ ಟೀಮ್ ಇಂಡಿಯಾಗೆ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದರು. ಅದರಲ್ಲೂ ಅಭಿಷೇಕ್ ಶರ್ಮಾ ಕೇವಲ 34 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 79 ರನ್ ಚಚ್ಚಿದರು. ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಕೇವಲ 12.5 ಓವರ್‌ಗಳಲ್ಲಿ 133 ರನ್ ಬಾರಿಸಿ 7 ವಿಕೆಟ್‌ಗಳ ಜಯ ಸಾಧಿಸಿತು.

3 / 6
ಈ ಜಯದೊಂದಿಗೆ ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಗೆಲುವಿನ ದಾಖಲೆ ಬರೆದಿದೆ. ಅಂದರೆ ಟಿ20 ಪಂದ್ಯದಲ್ಲಿ ಭಾರತ ತಂಡವು ಇದೇ ಮೊದಲ ಬಾರಿಗೆ 130+ ರನ್ ಗಳ ಗುರಿಯನ್ನು ಅತೀ ವೇಗವಾಗಿ ಚೇಸ್ ಮಾಡಿ ಜಯಭೇರಿ ಬಾರಿಸಿದೆ.

ಈ ಜಯದೊಂದಿಗೆ ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಗೆಲುವಿನ ದಾಖಲೆ ಬರೆದಿದೆ. ಅಂದರೆ ಟಿ20 ಪಂದ್ಯದಲ್ಲಿ ಭಾರತ ತಂಡವು ಇದೇ ಮೊದಲ ಬಾರಿಗೆ 130+ ರನ್ ಗಳ ಗುರಿಯನ್ನು ಅತೀ ವೇಗವಾಗಿ ಚೇಸ್ ಮಾಡಿ ಜಯಭೇರಿ ಬಾರಿಸಿದೆ.

4 / 6
ಇದಕ್ಕೂ ಮುನ್ನ ಭಾರತ ತಂಡ 130+ ಸ್ಕೋರ್ ಅನ್ನು ಅತೀ ವೇಗವಾಗಿ ಚೇಸ್ ಮಾಡಿದ್ದು 2012 ರಲ್ಲಿ. ಪುಣೆಯಲ್ಲಿ ನಡೆದ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 158 ರನ್ ಗಳನ್ನು 17.5 ಓವರುಗಳಲ್ಲಿ ಚೇಸ್ ಮಾಡಿ ದಾಖಲೆ ಬರೆದಿತ್ತು.

ಇದಕ್ಕೂ ಮುನ್ನ ಭಾರತ ತಂಡ 130+ ಸ್ಕೋರ್ ಅನ್ನು ಅತೀ ವೇಗವಾಗಿ ಚೇಸ್ ಮಾಡಿದ್ದು 2012 ರಲ್ಲಿ. ಪುಣೆಯಲ್ಲಿ ನಡೆದ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 158 ರನ್ ಗಳನ್ನು 17.5 ಓವರುಗಳಲ್ಲಿ ಚೇಸ್ ಮಾಡಿ ದಾಖಲೆ ಬರೆದಿತ್ತು.

5 / 6
ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ 43 ಎಸೆತಗಳನ್ನು ಬಾಕಿ ಇರಿಸಿ ಟೀಮ್ ಇಂಡಿಯಾ 133 ರನ್ ಗಳನ್ನು ಬೆನ್ನಟ್ಟಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಎಸೆತಗಳನ್ನು ಬಾರಿಸಿ 130+ ರನ್ ಗಳನ್ನು ಚೇಸ್ ಮಾಡಿದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ಬರೆದಿದೆ.

ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ 43 ಎಸೆತಗಳನ್ನು ಬಾಕಿ ಇರಿಸಿ ಟೀಮ್ ಇಂಡಿಯಾ 133 ರನ್ ಗಳನ್ನು ಬೆನ್ನಟ್ಟಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಎಸೆತಗಳನ್ನು ಬಾರಿಸಿ 130+ ರನ್ ಗಳನ್ನು ಚೇಸ್ ಮಾಡಿದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ಬರೆದಿದೆ.

6 / 6
Follow us
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ