AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: 112 ವರ್ಷಗಳ ಐತಿಹಾಸಿಕ ದಾಖಲೆ ಸರಿಗಟ್ಟಿದ ಟೀಮ್ ಇಂಡಿಯಾ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಈ ಮೂಲಕ 112 ವರ್ಷಗಳ ಹಳೆಯ ದಾಖಲೆಯನ್ನು ಭಾರತ ತಂಡ ಸರಿಗಟ್ಟಿದೆ.

TV9 Web
| Edited By: |

Updated on:Mar 09, 2024 | 3:18 PM

Share
ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐತಿಹಾಸಿಕ ದಾಖಲೆಯೊಂದನ್ನು ನಿರ್ಮಿಸಿರುವುದು ವಿಶೇಷ.

ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐತಿಹಾಸಿಕ ದಾಖಲೆಯೊಂದನ್ನು ನಿರ್ಮಿಸಿರುವುದು ವಿಶೇಷ.

1 / 5
ಹೌದು, ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಪಂದ್ಯವನ್ನು ಸೋತು, ಆ ಬಳಿಕ 4-1 ಅಂತರದಿಂದ ಸರಣಿ ಗೆದ್ದ ವಿಶೇಷ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲಿ ಇಂತಹದೊಂದು ಅಪರೂಪದ ಫಲಿತಾಂಶದ ದಾಖಲೆ ನಿರ್ಮಾಣವಾಗಿದ್ದು ಕೇವಲ 3 ಬಾರಿ ಮಾತ್ರ.

ಹೌದು, ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಪಂದ್ಯವನ್ನು ಸೋತು, ಆ ಬಳಿಕ 4-1 ಅಂತರದಿಂದ ಸರಣಿ ಗೆದ್ದ ವಿಶೇಷ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲಿ ಇಂತಹದೊಂದು ಅಪರೂಪದ ಫಲಿತಾಂಶದ ದಾಖಲೆ ನಿರ್ಮಾಣವಾಗಿದ್ದು ಕೇವಲ 3 ಬಾರಿ ಮಾತ್ರ.

2 / 5
1897-98 ಮತ್ತು 1901-02 ರಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಸೋತು ಆಸ್ಟ್ರೇಲಿಯಾ ಆ ಬಳಿಕ 4-1 ಅಂತರದಿಂದ 2 ಬಾರಿ ಸರಣಿ ಗೆದ್ದಿತ್ತು. ಇದಾದ ಬಳಿಕ 1912 ರಲ್ಲಿ ಇಂಗ್ಲೆಂಡ್ ತಂಡ ಇಂತಹದೊಂದು ಸಾಧನೆ ಮಾಡಿತ್ತು.

1897-98 ಮತ್ತು 1901-02 ರಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಸೋತು ಆಸ್ಟ್ರೇಲಿಯಾ ಆ ಬಳಿಕ 4-1 ಅಂತರದಿಂದ 2 ಬಾರಿ ಸರಣಿ ಗೆದ್ದಿತ್ತು. ಇದಾದ ಬಳಿಕ 1912 ರಲ್ಲಿ ಇಂಗ್ಲೆಂಡ್ ತಂಡ ಇಂತಹದೊಂದು ಸಾಧನೆ ಮಾಡಿತ್ತು.

3 / 5
ಇದೀಗ ಬರೋಬ್ಬರಿ 112 ವರ್ಷಗಳ ಬಳಿಕ ಟೀಮ್ ಇಂಡಿಯಾ 4-1 ಅಂತರದಿಂದ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ ಮೊದಲ ಪಂದ್ಯವನ್ನು ಸೋತು, 4-1 ಅಂತರದಿಂದ ಸರಣಿ ಗೆದ್ದ ವಿಶ್ವದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.

ಇದೀಗ ಬರೋಬ್ಬರಿ 112 ವರ್ಷಗಳ ಬಳಿಕ ಟೀಮ್ ಇಂಡಿಯಾ 4-1 ಅಂತರದಿಂದ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ ಮೊದಲ ಪಂದ್ಯವನ್ನು ಸೋತು, 4-1 ಅಂತರದಿಂದ ಸರಣಿ ಗೆದ್ದ ವಿಶ್ವದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.

4 / 5
ವಿಶೇಷ ಎಂದರೆ ಟೀಮ್ ಇಂಡಿಯಾ ಇಂತಹದೊಂದು ಅಪರೂಪದ ದಾಖಲೆ ಬರೆದಿರುವುದು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಕೆಎಲ್ ರಾಹುಲ್ (ಮೊದಲ ಪಂದ್ಯ ಆಡಿದ್ದರು), ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ ಅವರಂತಹ ಸ್ಟಾರ್ ಆಟಗಾರರಿಲ್ಲದೆ, ಭಾರತ ತಂಡವು ಬಲಿಷ್ಠ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಮಣಿಸಿದೆ. ಈ ಮೂಲಕ ಈ ಶತಮಾನದ ಅಭೂತಪೂರ್ವ ಗೆಲುವು ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ವಿಶೇಷ ಎಂದರೆ ಟೀಮ್ ಇಂಡಿಯಾ ಇಂತಹದೊಂದು ಅಪರೂಪದ ದಾಖಲೆ ಬರೆದಿರುವುದು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಕೆಎಲ್ ರಾಹುಲ್ (ಮೊದಲ ಪಂದ್ಯ ಆಡಿದ್ದರು), ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ ಅವರಂತಹ ಸ್ಟಾರ್ ಆಟಗಾರರಿಲ್ಲದೆ, ಭಾರತ ತಂಡವು ಬಲಿಷ್ಠ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಮಣಿಸಿದೆ. ಈ ಮೂಲಕ ಈ ಶತಮಾನದ ಅಭೂತಪೂರ್ವ ಗೆಲುವು ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

5 / 5

Published On - 3:09 pm, Sat, 9 March 24

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ