AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಆಂಗ್ಲರ ಮುಂದೆ ಕನ್ನಡಿಗನ ಪಾತ್ರ ನಿರ್ಣಾಯಕ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Jun 19, 2025 | 12:30 PM

Share
ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್​ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ (KL Rahul). 33 ವರ್ಷದ ರಾಹುಲ್ ಈಗಾಗಲೇ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್​ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ (KL Rahul). 33 ವರ್ಷದ ರಾಹುಲ್ ಈಗಾಗಲೇ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

1 / 5
ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

2 / 5
ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್​ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್​ಆರ್​ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್​ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್​ಗಳಿಸಿದ್ದಾರೆ.

ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್​ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್​ಆರ್​ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್​ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್​ಗಳಿಸಿದ್ದಾರೆ.

3 / 5
ಈ 18 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ.

ಈ 18 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ.

4 / 5
ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

5 / 5
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು