AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಆಂಗ್ಲರ ಮುಂದೆ ಕನ್ನಡಿಗನ ಪಾತ್ರ ನಿರ್ಣಾಯಕ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Jun 19, 2025 | 12:30 PM

Share
ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್​ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ (KL Rahul). 33 ವರ್ಷದ ರಾಹುಲ್ ಈಗಾಗಲೇ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್​ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ (KL Rahul). 33 ವರ್ಷದ ರಾಹುಲ್ ಈಗಾಗಲೇ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

1 / 5
ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

2 / 5
ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್​ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್​ಆರ್​ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್​ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್​ಗಳಿಸಿದ್ದಾರೆ.

ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್​ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್​ಆರ್​ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್​ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್​ಗಳಿಸಿದ್ದಾರೆ.

3 / 5
ಈ 18 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ.

ಈ 18 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ.

4 / 5
ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

5 / 5
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು