AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 10 ವಿಕೆಟ್ ಉರುಳಿಸಿ ಇತಿಹಾಸ ಸೃಷ್ಟಿಸಿದ ವರುಣ್ ಚಕ್ರವರ್ತಿ

Varun Chakravarthy: ರಾಜ್‌ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಟಿ20ಯಲ್ಲಿ ವರುಣ್ ಚಕ್ರವರ್ತಿ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಬಲಗೈ ಸ್ಪಿನ್ನರ್ ಮೂರನೇ ಟಿ20ಯಲ್ಲಿ ಐದು ವಿಕೆಟ್ ಕಬಳಿಸಿದರು. ಈ ಪ್ರದರ್ಶನದ ಆಧಾರದ ಮೇಲೆ, ಅವರು ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡಿದರು.

ಪೃಥ್ವಿಶಂಕರ
|

Updated on: Jan 28, 2025 | 10:04 PM

Share
ಭಾರತ ಮತ್ತು ಇಂಗ್ಲೆಂಡ್‌ ನಡುವೆ ರಾಜ್‌ಕೋಟ್​ನಲ್ಲಿ ಮೂರನೇ ಟಿ20 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಆತಿಥೇಯ ಭಾರತಕ್ಕೆ 172 ರನ್​ಗಳ ಟಾರ್ಗೆಟ್ ನೀಡಿದೆ. ಇಂಗ್ಲೆಂಡ್ ಪರ ಬೆನ್ ಡಕೆಟ್ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಇತ್ತ ಭಾರತದ ಪರ ವರುಣ್ ಚಕ್ರವರ್ತಿ ಐದು ವಿಕೆಟ್​ಗಳ ಗೊಂಚಲು ಪಡೆದರು.

ಭಾರತ ಮತ್ತು ಇಂಗ್ಲೆಂಡ್‌ ನಡುವೆ ರಾಜ್‌ಕೋಟ್​ನಲ್ಲಿ ಮೂರನೇ ಟಿ20 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಆತಿಥೇಯ ಭಾರತಕ್ಕೆ 172 ರನ್​ಗಳ ಟಾರ್ಗೆಟ್ ನೀಡಿದೆ. ಇಂಗ್ಲೆಂಡ್ ಪರ ಬೆನ್ ಡಕೆಟ್ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಇತ್ತ ಭಾರತದ ಪರ ವರುಣ್ ಚಕ್ರವರ್ತಿ ಐದು ವಿಕೆಟ್​ಗಳ ಗೊಂಚಲು ಪಡೆದರು.

1 / 5
ರಾಜ್‌ಕೋಟ್‌ ಟಿ20ಯಲ್ಲಿ ವರುಣ್‌ ಚಕ್ರವರ್ತಿ ಏಕಾಂಗಿಯಾಗಿ ಇಂಗ್ಲೆಂಡ್‌ ತಂಡದ ಅರ್ಧದಷ್ಟು ಆಟಗಾರರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶಸ್ವಿಯಾದರು. ವರುಣ್ ತಮ್ಮ ಖೋಟಾದ 4 ಓವರ್‌ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಪಡೆದರು. ಈ ಮೂಲಕ ಈ ಟಿ20 ಸರಣಿಯಲ್ಲಿ ವರುಣ್ ಇದುವರೆಗೆ ಒಟ್ಟು 10 ವಿಕೆಟ್ ಉರುಳಿಸಿದ್ದು, ಇದರೊಂದಿಗೆ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.

ರಾಜ್‌ಕೋಟ್‌ ಟಿ20ಯಲ್ಲಿ ವರುಣ್‌ ಚಕ್ರವರ್ತಿ ಏಕಾಂಗಿಯಾಗಿ ಇಂಗ್ಲೆಂಡ್‌ ತಂಡದ ಅರ್ಧದಷ್ಟು ಆಟಗಾರರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶಸ್ವಿಯಾದರು. ವರುಣ್ ತಮ್ಮ ಖೋಟಾದ 4 ಓವರ್‌ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಪಡೆದರು. ಈ ಮೂಲಕ ಈ ಟಿ20 ಸರಣಿಯಲ್ಲಿ ವರುಣ್ ಇದುವರೆಗೆ ಒಟ್ಟು 10 ವಿಕೆಟ್ ಉರುಳಿಸಿದ್ದು, ಇದರೊಂದಿಗೆ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.

2 / 5
ವರುಣ್ ಚಕ್ರವರ್ತಿ ಇಂಗ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳಲ್ಲಿ 10 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಕೋಲ್ಕತ್ತಾ ಟಿ20ಯಲ್ಲಿ 23 ರನ್ ನೀಡಿ 3 ವಿಕೆಟ್ ಕಬಳಿಸಿದ್ದರೆ, ಚೆನ್ನೈನಲ್ಲಿ 2 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಈಗ ರಾಜ್‌ಕೋಟ್‌ನಲ್ಲಿ ಮಾರಕ ದಾಳಿ ನಡೆಸಿದ ವರುಣ್ 5 ವಿಕೆಟ್‌ಗಳನ್ನು ಪಡೆಯುವ ಮೂಲಕ 10 ವಿಕೆಟ್‌ಗಳನ್ನು ಪೂರೈಸಿದರು.

ವರುಣ್ ಚಕ್ರವರ್ತಿ ಇಂಗ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳಲ್ಲಿ 10 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಕೋಲ್ಕತ್ತಾ ಟಿ20ಯಲ್ಲಿ 23 ರನ್ ನೀಡಿ 3 ವಿಕೆಟ್ ಕಬಳಿಸಿದ್ದರೆ, ಚೆನ್ನೈನಲ್ಲಿ 2 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಈಗ ರಾಜ್‌ಕೋಟ್‌ನಲ್ಲಿ ಮಾರಕ ದಾಳಿ ನಡೆಸಿದ ವರುಣ್ 5 ವಿಕೆಟ್‌ಗಳನ್ನು ಪಡೆಯುವ ಮೂಲಕ 10 ವಿಕೆಟ್‌ಗಳನ್ನು ಪೂರೈಸಿದರು.

3 / 5
ಈ ಮೂಲಕ ವರುಣ್ ಚಕ್ರವರ್ತಿ ಎರಡು ಟಿ20 ಸರಣಿಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ವರುಣ್, ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯಲ್ಲಿ 12 ವಿಕೆಟ್ ಕಬಳಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧವೂ 10 ವಿಕೆಟ್ ಪಡೆದಿದ್ದಾರೆ.

ಈ ಮೂಲಕ ವರುಣ್ ಚಕ್ರವರ್ತಿ ಎರಡು ಟಿ20 ಸರಣಿಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ವರುಣ್, ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯಲ್ಲಿ 12 ವಿಕೆಟ್ ಕಬಳಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧವೂ 10 ವಿಕೆಟ್ ಪಡೆದಿದ್ದಾರೆ.

4 / 5
ಇದಲ್ಲದೆ ವರುಣ್ ಚಕ್ರವರ್ತಿ ಟೀಂ ಇಂಡಿಯಾದಲ್ಲಿ ಅದ್ಭುತ ಪುನರಾಗಮನ ಮಾಡಿದ್ದಾರೆ. ಚಕ್ರವರ್ತಿ ಮೊದಲ 6 ಟಿ20 ಪಂದ್ಯಗಳಲ್ಲಿ ಕೇವಲ 2 ವಿಕೆಟ್​ಗಳನ್ನಷ್ಟೇ ಪಡೆದಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಇದೀಗ ಭರ್ಜರಿ ಕಂಬ್ಯಾಕ್ ಮಾಡಿರುವ ವರುಣ್, ಆಡಿರುವ 10 ಟಿ20 ಪಂದ್ಯಗಳಲ್ಲಿ 27 ವಿಕೆಟ್ಗಳನ್ನು ಪಡೆದಿದ್ದಾರೆ.

ಇದಲ್ಲದೆ ವರುಣ್ ಚಕ್ರವರ್ತಿ ಟೀಂ ಇಂಡಿಯಾದಲ್ಲಿ ಅದ್ಭುತ ಪುನರಾಗಮನ ಮಾಡಿದ್ದಾರೆ. ಚಕ್ರವರ್ತಿ ಮೊದಲ 6 ಟಿ20 ಪಂದ್ಯಗಳಲ್ಲಿ ಕೇವಲ 2 ವಿಕೆಟ್​ಗಳನ್ನಷ್ಟೇ ಪಡೆದಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಇದೀಗ ಭರ್ಜರಿ ಕಂಬ್ಯಾಕ್ ಮಾಡಿರುವ ವರುಣ್, ಆಡಿರುವ 10 ಟಿ20 ಪಂದ್ಯಗಳಲ್ಲಿ 27 ವಿಕೆಟ್ಗಳನ್ನು ಪಡೆದಿದ್ದಾರೆ.

5 / 5
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?