AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ಭಾರತ ತಂಡದ ನಾಯಕತ್ವ..?

IND vs IRE: ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಪೃಥ್ವಿಶಂಕರ
|

Updated on: Jul 23, 2023 | 8:07 AM

Share
ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

1 / 6
ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

2 / 6
ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

3 / 6
ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

4 / 6
ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 6
ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

6 / 6
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು