AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ರ ಐವರಿಂದ 50+ ಸ್ಕೋರ್; ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ಭಾರತ..!

IND vs NED, ICC World Cup 2023: 2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಪೃಥ್ವಿಶಂಕರ
|

Updated on:Nov 12, 2023 | 10:06 PM

Share
2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

1 / 9
ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ  8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

2 / 9
ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು.

3 / 9
ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

4 / 9
ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

5 / 9
ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

6 / 9
ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

7 / 9
ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

8 / 9
ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.

ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.

9 / 9

Published On - 7:44 pm, Sun, 12 November 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ