IND vs NZ: ರೋಹಿತ್ ತಪ್ಪು ನಿರ್ಧಾರದ ಹೊರತಾಗಿ ಈ ಐವರ ಕಳಪೆ ಪ್ರದರ್ಶನವೂ ಸೋಲಿಗೆ ಕಾರಣವಾಯ್ತು

IND vs NZ: ನ್ಯೂಜಿಲೆಂಡ್ ತಂಡ ಬೆಂಗಳೂರು ಟೆಸ್ಟ್‌ನಲ್ಲಿ ಭಾರತ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದೆ. ಟೀಂ ಇಂಡಿಯಾದ ಈ ಸೋಲಿಗೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ನಿರ್ಧಾರವೇ ಪ್ರಮುಖ ಕಾರಣ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಆದರೆ ಅದರ ಹೊರತಾಗಿಯೂ ಸಂಕಷ್ಟದ ಸಮಯದಲ್ಲಿ ತಂಡಕ್ಕೆ ನೆರವಾಗದ ಈ ಐವರು ಆಟಗಾರರು ಕೂಡ ಮೊದಲ ಟೆಸ್ಟ್ ಸೋಲಿಗೆ ಪ್ರಮುಖ ಕಾರಣರಾದರು.

|

Updated on: Oct 20, 2024 | 5:05 PM

ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್ ನೀಡಿದ ನ್ಯೂಜಿಲೆಂಡ್ ತಂಡ ಬೆಂಗಳೂರು ಟೆಸ್ಟ್‌ನಲ್ಲಿ ಭಾರತ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದೆ. ಟೀಂ ಇಂಡಿಯಾದ ಈ ಸೋಲಿಗೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ನಿರ್ಧಾರವೇ ಪ್ರಮುಖ ಕಾರಣ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಆದರೆ ಅದರ ಹೊರತಾಗಿಯೂ ಸಂಕಷ್ಟದ ಸಮಯದಲ್ಲಿ ತಂಡಕ್ಕೆ ನೆರವಾಗದ ಈ ಐವರು ಆಟಗಾರರು ಕೂಡ ಮೊದಲ ಟೆಸ್ಟ್ ಸೋಲಿಗೆ ಪ್ರಮುಖ ಕಾರಣರಾದರು.

ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್ ನೀಡಿದ ನ್ಯೂಜಿಲೆಂಡ್ ತಂಡ ಬೆಂಗಳೂರು ಟೆಸ್ಟ್‌ನಲ್ಲಿ ಭಾರತ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದೆ. ಟೀಂ ಇಂಡಿಯಾದ ಈ ಸೋಲಿಗೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ನಿರ್ಧಾರವೇ ಪ್ರಮುಖ ಕಾರಣ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಆದರೆ ಅದರ ಹೊರತಾಗಿಯೂ ಸಂಕಷ್ಟದ ಸಮಯದಲ್ಲಿ ತಂಡಕ್ಕೆ ನೆರವಾಗದ ಈ ಐವರು ಆಟಗಾರರು ಕೂಡ ಮೊದಲ ಟೆಸ್ಟ್ ಸೋಲಿಗೆ ಪ್ರಮುಖ ಕಾರಣರಾದರು.

1 / 7
ವಾಸ್ತವವಾಗಿ ಬೆಂಗಳೂರು ಟೆಸ್ಟ್​ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಆದರೆ ಅವರ ನಿರ್ಧಾರ ತಪ್ಪು ಎಂಬುದು ಕೇವಲ 46 ರನ್​ಗಳಿಗೆ ಆಲೌಟ್ ಆದಾಗಲೇ ಎಲ್ಲರಿಗೂ ತಿಳಿದಿತ್ತು. ಆದಾಗ್ಯೂ ಪಂದ್ಯ ಮುಗಿದ ಬಳಿಕ ಮಾತನಾಡಿದ್ದ ರೋಹಿತ್, ಪಿಚ್ ಫ್ಲಾಟ್ ಆಗಿದ್ದರಿಂದ ಬ್ಯಾಟಿಂಗ್‌ ನೆರವಾಗುವುದೆಂದು ಊಹಿಸಿ ಈ ತಪ್ಪು ನಿರ್ಧಾರ ಕೈಗೊಂಡೆ ಎಂದಿದ್ದರು.

ವಾಸ್ತವವಾಗಿ ಬೆಂಗಳೂರು ಟೆಸ್ಟ್​ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಆದರೆ ಅವರ ನಿರ್ಧಾರ ತಪ್ಪು ಎಂಬುದು ಕೇವಲ 46 ರನ್​ಗಳಿಗೆ ಆಲೌಟ್ ಆದಾಗಲೇ ಎಲ್ಲರಿಗೂ ತಿಳಿದಿತ್ತು. ಆದಾಗ್ಯೂ ಪಂದ್ಯ ಮುಗಿದ ಬಳಿಕ ಮಾತನಾಡಿದ್ದ ರೋಹಿತ್, ಪಿಚ್ ಫ್ಲಾಟ್ ಆಗಿದ್ದರಿಂದ ಬ್ಯಾಟಿಂಗ್‌ ನೆರವಾಗುವುದೆಂದು ಊಹಿಸಿ ಈ ತಪ್ಪು ನಿರ್ಧಾರ ಕೈಗೊಂಡೆ ಎಂದಿದ್ದರು.

2 / 7
ಇನ್ನು ಈ ಟೆಸ್ಟ್ ಪಂದ್ಯದ ಸೋಲಿಗೆ ರೋಹಿತ್ ಹೊರತಾಗಿ ತಂಡದ ಐವರು ಆಟಗಾರರು ಪ್ರಮುಖ ಕಾರಣರಾಗಿದ್ದಾರೆ. ಅವರಲ್ಲಿ ಪ್ರಮುಖರು ಕನ್ನಡಿಗ ಕೆಎಲ್ ರಾಹುಲ್. ತವರಿನಲ್ಲಿ ಟೆಸ್ಟ್ ಪಂದ್ಯವನ್ನಾಡುತ್ತಿದ್ದ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ರಾಹುಲ್ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 12 ರನ್ ಬಾರಿಸಿ ತಂಡವನ್ನು ಸಂಕಷ್ಟಕ್ಕೆ ದೂಡಿದರು.

ಇನ್ನು ಈ ಟೆಸ್ಟ್ ಪಂದ್ಯದ ಸೋಲಿಗೆ ರೋಹಿತ್ ಹೊರತಾಗಿ ತಂಡದ ಐವರು ಆಟಗಾರರು ಪ್ರಮುಖ ಕಾರಣರಾಗಿದ್ದಾರೆ. ಅವರಲ್ಲಿ ಪ್ರಮುಖರು ಕನ್ನಡಿಗ ಕೆಎಲ್ ರಾಹುಲ್. ತವರಿನಲ್ಲಿ ಟೆಸ್ಟ್ ಪಂದ್ಯವನ್ನಾಡುತ್ತಿದ್ದ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ರಾಹುಲ್ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 12 ರನ್ ಬಾರಿಸಿ ತಂಡವನ್ನು ಸಂಕಷ್ಟಕ್ಕೆ ದೂಡಿದರು.

3 / 7
ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿ ತಂಡದ ಕೈಹಿಡಿಯುವಲ್ಲಿ ವಿಫಲರಾದರು. ತಂಡಕ್ಕೆ ತೀರಾ ಅಗತ್ಯವಿದ್ದ ಸಮಯದಲ್ಲಿ ಜಡೇಜಾ ಅವರ ಬ್ಯಾಟ್ ಮೌನವಾಗಿಯೇ ಇತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಡಕ್‌ಗೆ ಔಟಾಗಿದ್ದ ಜಡೇಜಾ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಗಳಿಸಿ ಔಟಾದರು. ಬೌಲಿಂಗ್‌ನಲ್ಲಿಯೂ ಜಡೇಜಾ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 3 ವಿಕೆಟ್‌ ಮಾತ್ರ ಉರುಳಿಸಿದರು.

ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿ ತಂಡದ ಕೈಹಿಡಿಯುವಲ್ಲಿ ವಿಫಲರಾದರು. ತಂಡಕ್ಕೆ ತೀರಾ ಅಗತ್ಯವಿದ್ದ ಸಮಯದಲ್ಲಿ ಜಡೇಜಾ ಅವರ ಬ್ಯಾಟ್ ಮೌನವಾಗಿಯೇ ಇತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಡಕ್‌ಗೆ ಔಟಾಗಿದ್ದ ಜಡೇಜಾ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಗಳಿಸಿ ಔಟಾದರು. ಬೌಲಿಂಗ್‌ನಲ್ಲಿಯೂ ಜಡೇಜಾ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 3 ವಿಕೆಟ್‌ ಮಾತ್ರ ಉರುಳಿಸಿದರು.

4 / 7
ಅನುಭವಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಈ ಟೆಸ್ಟ್‌ನಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ವಿಫಲರಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಡಕ್‌ ಔಟ್ ಆಗಿದ್ದ ಅಶ್ವಿನ್, ಎರಡನೇ ಇನ್ನಿಂಗ್ಸ್‌ನಲ್ಲಿ 15 ರನ್​ಗೆ ಸುಸ್ತಾದರು. ಬೌಲಿಂಗ್​ನಲ್ಲೂ ಫೇಲ್ ಆದ ಅಶ್ವಿನ್ ಇಡೀ ಪಂದ್ಯದಲ್ಲಿ 1 ವಿಕೆಟ್ ಪಡೆದರೆ, ಅಧಿಕ ರನ್ ಬಿಟ್ಟುಕೊಟ್ಟು ದುಬಾರಿಯಾದರು. ಮೊದಲ ಇನ್ನಿಂಗ್ಸ್​ನಲ್ಲಿ ಬೌಲ್ ಮಾಡಿದ 16 ಓವರ್‌ಗಳಲ್ಲಿ 5.88 ಎಕಾನಮಿಯಲ್ಲಿ 94 ರನ್ ನೀಡಿದರು.

ಅನುಭವಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಈ ಟೆಸ್ಟ್‌ನಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ವಿಫಲರಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಡಕ್‌ ಔಟ್ ಆಗಿದ್ದ ಅಶ್ವಿನ್, ಎರಡನೇ ಇನ್ನಿಂಗ್ಸ್‌ನಲ್ಲಿ 15 ರನ್​ಗೆ ಸುಸ್ತಾದರು. ಬೌಲಿಂಗ್​ನಲ್ಲೂ ಫೇಲ್ ಆದ ಅಶ್ವಿನ್ ಇಡೀ ಪಂದ್ಯದಲ್ಲಿ 1 ವಿಕೆಟ್ ಪಡೆದರೆ, ಅಧಿಕ ರನ್ ಬಿಟ್ಟುಕೊಟ್ಟು ದುಬಾರಿಯಾದರು. ಮೊದಲ ಇನ್ನಿಂಗ್ಸ್​ನಲ್ಲಿ ಬೌಲ್ ಮಾಡಿದ 16 ಓವರ್‌ಗಳಲ್ಲಿ 5.88 ಎಕಾನಮಿಯಲ್ಲಿ 94 ರನ್ ನೀಡಿದರು.

5 / 7
ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಚಿನ್ನಸ್ವಾಮಿ ಮೈದಾನ ತವರು ಮೈದಾನವಿದಂತೆ. ಹೀಗಾಗಿ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ತೀರ ದುಬಾರಿಯಾದ ಸಿರಾಜ್, ಮೊದಲ ಇನಿಂಗ್ಸ್‌ನಲ್ಲಿ 18 ಓವರ್‌ ಬೌಲ್ ಮಾಡಿ 84 ರನ್ ನೀಡಿ 2 ವಿಕೆಟ್ ಪಡೆದರೆ, ಎರಡನೇ ಇನಿಂಗ್ಸ್‌ನಲ್ಲಿ 7 ಓವರ್‌ಗೆ 16 ರನ್ ನೀಡಿ ಯಾವುದೇ ವಿಕೆಟ್ ಪಡೆಯಲಿಲ್ಲ.

ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಚಿನ್ನಸ್ವಾಮಿ ಮೈದಾನ ತವರು ಮೈದಾನವಿದಂತೆ. ಹೀಗಾಗಿ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ತೀರ ದುಬಾರಿಯಾದ ಸಿರಾಜ್, ಮೊದಲ ಇನಿಂಗ್ಸ್‌ನಲ್ಲಿ 18 ಓವರ್‌ ಬೌಲ್ ಮಾಡಿ 84 ರನ್ ನೀಡಿ 2 ವಿಕೆಟ್ ಪಡೆದರೆ, ಎರಡನೇ ಇನಿಂಗ್ಸ್‌ನಲ್ಲಿ 7 ಓವರ್‌ಗೆ 16 ರನ್ ನೀಡಿ ಯಾವುದೇ ವಿಕೆಟ್ ಪಡೆಯಲಿಲ್ಲ.

6 / 7
ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಕೂಡ ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಹೆಚ್ಚಿನ ಪ್ರಭಾವ ಬೀರಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 13 ರನ್ ಗಳಿಸಿದ್ದ ಜೈಸ್ವಾಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದುಕೊಂಡರಾದರೂ ಕೇವಲ 35 ರನ್‌ಗಳಲ್ಲಿ ದೊಡ್ಡ ಶಾಟ್‌ ಆಡುವ ಪ್ರಯತ್ನದಲ್ಲಿ ವಿಕೆಟ್‌ ಕಳೆದುಕೊಂಡರು. ಭಾರತಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ ಅವರಿಂದ ದೊಡ್ಡ ಇನ್ನಿಂಗ್ಸ್‌ನ ಅಗತ್ಯವಿತ್ತು.

ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಕೂಡ ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಹೆಚ್ಚಿನ ಪ್ರಭಾವ ಬೀರಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 13 ರನ್ ಗಳಿಸಿದ್ದ ಜೈಸ್ವಾಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದುಕೊಂಡರಾದರೂ ಕೇವಲ 35 ರನ್‌ಗಳಲ್ಲಿ ದೊಡ್ಡ ಶಾಟ್‌ ಆಡುವ ಪ್ರಯತ್ನದಲ್ಲಿ ವಿಕೆಟ್‌ ಕಳೆದುಕೊಂಡರು. ಭಾರತಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ ಅವರಿಂದ ದೊಡ್ಡ ಇನ್ನಿಂಗ್ಸ್‌ನ ಅಗತ್ಯವಿತ್ತು.

7 / 7
Follow us
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್