AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಪ್ಲೇಯಿಂಗ್ XI ನಿಂದ ಸಂಜು ಸ್ಯಾಮ್ಸನ್ ಕೈಬಿಡಲು ಕಾರಣ ಬಹಿರಂಗ: ಯಾಕೆ ಗೊತ್ತೇ?

India vs New Zealand, Second ODI: ಎರಡನೇ ಏಕದಿನಕ್ಕೆ ಅರನೇ ಬೌಲರ್ ಅಗತ್ಯವಿದ್ದ ಕಾರಣ ಓರ್ವ ಬ್ಯಾಟರ್ ಅನ್ನು ಹೊರಗಿಡುವುದು ಅನಿವಾರ್ಯವಾಗಿತ್ತು. ಹೀಗಾಗಿ ತಂಡದಿಂದ ಸ್ಯಾಮ್ಸನ್ ಅವರನ್ನು ಬಿಟ್ಟರೆ ಮತ್ಯಾರನ್ನು ಹೊರಗಿಡುವ ಸ್ಥಿತಿಯಲ್ಲಿ ಮ್ಯಾನೇಜ್ಮೆಂಟ್ ಇರಲಿಲ್ಲ.

TV9 Web
| Updated By: Vinay Bhat

Updated on:Nov 27, 2022 | 9:22 AM

ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಶಾರ್ದೂಲ್ ಠಾಕೂರ್ ಜಾಗಕ್ಕೆ ದೀಪಕ್ ಚಹರ್ ಮತ್ತು ಸಂಜು ಸ್ಯಾಮ್ಸನ್ ಬದಲು ದೀಪಕ್ ಹೂಡ ಆಯ್ಕೆಯಾಗಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಸೋತ ಪರಿಣಾಮ ಎರಡನೇ ಪಂದ್ಯಕ್ಕೆ ಬದಲಾವಣೆ ನಿರೀಕ್ಷಿಸಲಾಗಿತ್ತು. ಆದರೆ, ಸಂಜು ಸ್ಯಾಮ್ಸನ್ ತಮ್ಮ ಜಾಗವನ್ನನು ತ್ಯಾಗ ಮಾಡಬೇಕಾಗಿ ಬರಬಹುದೆಂದು ಯಾರೂ ಊಹಿಸಿರಲಿಲ್ಲ.

ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಶಾರ್ದೂಲ್ ಠಾಕೂರ್ ಜಾಗಕ್ಕೆ ದೀಪಕ್ ಚಹರ್ ಮತ್ತು ಸಂಜು ಸ್ಯಾಮ್ಸನ್ ಬದಲು ದೀಪಕ್ ಹೂಡ ಆಯ್ಕೆಯಾಗಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಸೋತ ಪರಿಣಾಮ ಎರಡನೇ ಪಂದ್ಯಕ್ಕೆ ಬದಲಾವಣೆ ನಿರೀಕ್ಷಿಸಲಾಗಿತ್ತು. ಆದರೆ, ಸಂಜು ಸ್ಯಾಮ್ಸನ್ ತಮ್ಮ ಜಾಗವನ್ನನು ತ್ಯಾಗ ಮಾಡಬೇಕಾಗಿ ಬರಬಹುದೆಂದು ಯಾರೂ ಊಹಿಸಿರಲಿಲ್ಲ.

1 / 7
ಯಾಕೆಂದರೆ ಸ್ಯಾಮ್ಸನ್ ಮೊದಲ ಏಕದಿನದಲ್ಲಿ ತಂಡಕ್ಕೆ ಆಸರೆಯಾಗಿದ್ದರು. ತಂಡ ಸಂಕಷ್ಟದಲ್ಲಿದ್ದ ಸಂದರ್ಭ ಕ್ರೀಸ್​​ಗೆ ಬಂದ ಸಂಜು ಅವರು ಶ್ರೇಯಸ್ ಅಯ್ಯರ್ ಜೊತೆಗೂಡಿ 94 ರನ್​ಗಳ ಜೊತೆಯಾಟ ಆಡಿದರು. 38 ಎಸೆತಗಳಲ್ಲಿ 36 ರನ್​ಗಳ ಕೊಡುಗೆ ನೀಡಿದರು. ಹೀಗಿದ್ದರೂ ದ್ವಿತೀಯ ಏಕದಿನದಲ್ಲಿ ಇವರನ್ನು ಬೆಂಚ್ ಕಾಯಿಸಿದ್ದಾರೆ. ಇದೀಗ ಸಂಜು ಅವರನ್ನು ಕೈಬಿಡಲು ಏನು ಕಾರಣ ಎಂಬುದು ಬಹಿರಂಗವಾಗಿದೆ.

ಯಾಕೆಂದರೆ ಸ್ಯಾಮ್ಸನ್ ಮೊದಲ ಏಕದಿನದಲ್ಲಿ ತಂಡಕ್ಕೆ ಆಸರೆಯಾಗಿದ್ದರು. ತಂಡ ಸಂಕಷ್ಟದಲ್ಲಿದ್ದ ಸಂದರ್ಭ ಕ್ರೀಸ್​​ಗೆ ಬಂದ ಸಂಜು ಅವರು ಶ್ರೇಯಸ್ ಅಯ್ಯರ್ ಜೊತೆಗೂಡಿ 94 ರನ್​ಗಳ ಜೊತೆಯಾಟ ಆಡಿದರು. 38 ಎಸೆತಗಳಲ್ಲಿ 36 ರನ್​ಗಳ ಕೊಡುಗೆ ನೀಡಿದರು. ಹೀಗಿದ್ದರೂ ದ್ವಿತೀಯ ಏಕದಿನದಲ್ಲಿ ಇವರನ್ನು ಬೆಂಚ್ ಕಾಯಿಸಿದ್ದಾರೆ. ಇದೀಗ ಸಂಜು ಅವರನ್ನು ಕೈಬಿಡಲು ಏನು ಕಾರಣ ಎಂಬುದು ಬಹಿರಂಗವಾಗಿದೆ.

2 / 7
ಮೊದಲ ಏಕದಿನದಲ್ಲಿ  ಟೀಮ್ ಇಂಡಿಯಾ ಸೋಲಿಗೆ ಮುಖ್ಯ ಕಾರಣ ಬೌಲರ್​ ವಿಭಾಗ. 300+ ಟಾರ್ಗೆಟ್ ನೀಡಿದ್ದರೂ ವಿಕೆಟ್ ಕೀಳಲು ಪರದಾಡಿದ ಬೌಲರ್​ಗಳು ಎದುರಾಳಿಯನ್ನು  ಕಟ್ಟು ಹಾಕುವಲ್ಲೂ ವಿಫಲರಾದರು. ಭಾರತದಲ್ಲಿ ಆರನೇ ಬೌಲರ್​ ಕೊರತೆ ಎದ್ದು ಕಂಡಿತು. ಅರ್ಶ್​ದೀಪ್ ಸಿಂಗ್, ಯುಜ್ವೇಂದ್ರ ಚಹಲ್​, ಶಾರ್ದೂಲ್​ ಸೇರಿ ಪ್ರತಿ ಬೌಲರ್ ದುಬಾರಿಯಾದರು.

ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾ ಸೋಲಿಗೆ ಮುಖ್ಯ ಕಾರಣ ಬೌಲರ್​ ವಿಭಾಗ. 300+ ಟಾರ್ಗೆಟ್ ನೀಡಿದ್ದರೂ ವಿಕೆಟ್ ಕೀಳಲು ಪರದಾಡಿದ ಬೌಲರ್​ಗಳು ಎದುರಾಳಿಯನ್ನು ಕಟ್ಟು ಹಾಕುವಲ್ಲೂ ವಿಫಲರಾದರು. ಭಾರತದಲ್ಲಿ ಆರನೇ ಬೌಲರ್​ ಕೊರತೆ ಎದ್ದು ಕಂಡಿತು. ಅರ್ಶ್​ದೀಪ್ ಸಿಂಗ್, ಯುಜ್ವೇಂದ್ರ ಚಹಲ್​, ಶಾರ್ದೂಲ್​ ಸೇರಿ ಪ್ರತಿ ಬೌಲರ್ ದುಬಾರಿಯಾದರು.

3 / 7
ಹೀಗಾಗಿ ಎರಡನೇ ಏಕದಿನಕ್ಕೆ ಅರನೇ ಬೌಲರ್ ಅಗತ್ಯವಿದ್ದ ಕಾರಣ ಓರ್ವ ಬ್ಯಾಟರ್ ಅನ್ನು ಹೊರಗಿಡುವುದು ಅನಿವಾರ್ಯವಾಗಿತ್ತು. ಧವನ್ ನಾಯಕನಾದರೆ, ಗಿಲ್ ಓಪನರ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮರ್ ಫಾರ್ಮ್​ನಲ್ಲಿದ್ದಾರೆ. ರಿಷಭ್ ಪಂತ್ ಉಪ ನಾಯಕ. ಹೀಗೆ ತಂಡದಿಂದ ಸ್ಯಾಮ್ಸನ್ ಅವರನ್ನು ಬಿಟ್ಟರೆ ಮತ್ಯಾರನ್ನು ಹೊರಗಿಡುವ ಸ್ಥಿತಿಯಲ್ಲಿ ಮ್ಯಾನೇಜ್ಮೆಂಟ್ ಇರಲಿಲ್ಲ.

ಹೀಗಾಗಿ ಎರಡನೇ ಏಕದಿನಕ್ಕೆ ಅರನೇ ಬೌಲರ್ ಅಗತ್ಯವಿದ್ದ ಕಾರಣ ಓರ್ವ ಬ್ಯಾಟರ್ ಅನ್ನು ಹೊರಗಿಡುವುದು ಅನಿವಾರ್ಯವಾಗಿತ್ತು. ಧವನ್ ನಾಯಕನಾದರೆ, ಗಿಲ್ ಓಪನರ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮರ್ ಫಾರ್ಮ್​ನಲ್ಲಿದ್ದಾರೆ. ರಿಷಭ್ ಪಂತ್ ಉಪ ನಾಯಕ. ಹೀಗೆ ತಂಡದಿಂದ ಸ್ಯಾಮ್ಸನ್ ಅವರನ್ನು ಬಿಟ್ಟರೆ ಮತ್ಯಾರನ್ನು ಹೊರಗಿಡುವ ಸ್ಥಿತಿಯಲ್ಲಿ ಮ್ಯಾನೇಜ್ಮೆಂಟ್ ಇರಲಿಲ್ಲ.

4 / 7
ಸ್ಯಾಮ್ಸನ್ ಅವರನ್ನ ಹೊರಗಿಟ್ಟ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ಕೇಳಿಬರುತ್ತಿದೆ. ಸಂಜು ಸ್ಯಾಮ್ಸನ್ ಉತ್ತಮ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಆಗಿದ್ದರೂ ತಂಡದಲ್ಲಿ ರಿಷಭ್ ಪಂತ್ ಇರುವ ಕಾರಣ ಅವಕಾಶ ವಂಚಿತರಾಗುತ್ತಿದ್ದಾರೆ. ತಂಡದಲ್ಲಿದ್ದರೂ ಕೇವಲ ಬೆಂಚ್ ಬಿಸಿಮಾಡಲಷ್ಟೇ ಸೀಮಿತವಾಗಿದ್ದಾರೆ. ಕಳಪೆ ಫಾರ್ಮ್​ನಲ್ಲಿರುವ ಪಂತ್​ ಮೇಲೆ ಬಿಸಿಸಿಐಗೆ ಅದು ಯಾಕಿಷ್ಟು ಪ್ರೀತಿ,” ಎಂದು ಅಭಿಮಾನಿಗಳು ಕಿಡಿ ಕಾರುತ್ತಿದ್ದಾರೆ.

ಸ್ಯಾಮ್ಸನ್ ಅವರನ್ನ ಹೊರಗಿಟ್ಟ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ಕೇಳಿಬರುತ್ತಿದೆ. ಸಂಜು ಸ್ಯಾಮ್ಸನ್ ಉತ್ತಮ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಆಗಿದ್ದರೂ ತಂಡದಲ್ಲಿ ರಿಷಭ್ ಪಂತ್ ಇರುವ ಕಾರಣ ಅವಕಾಶ ವಂಚಿತರಾಗುತ್ತಿದ್ದಾರೆ. ತಂಡದಲ್ಲಿದ್ದರೂ ಕೇವಲ ಬೆಂಚ್ ಬಿಸಿಮಾಡಲಷ್ಟೇ ಸೀಮಿತವಾಗಿದ್ದಾರೆ. ಕಳಪೆ ಫಾರ್ಮ್​ನಲ್ಲಿರುವ ಪಂತ್​ ಮೇಲೆ ಬಿಸಿಸಿಐಗೆ ಅದು ಯಾಕಿಷ್ಟು ಪ್ರೀತಿ,” ಎಂದು ಅಭಿಮಾನಿಗಳು ಕಿಡಿ ಕಾರುತ್ತಿದ್ದಾರೆ.

5 / 7
ಭಾರತ ಕಿವೀಸ್ ನಾಡಿಗೆ ಪ್ರವಾಸ ಬೆಳೆಸುವಮುನ್ನ ಹಿರಿಯ ಆಟಗಾರರಿಗೆ ರೆಸ್ಟ್ ನೀಡಿದ ಪರಿಣಾಮ ತಂಡಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್‍ಗೆ ಅವಕಾಶ ಸಿಗಬಹುದೆಂಬ ನಿರೀಕ್ಷೆ ಇತ್ತು. ಆದರೆ 3 ಪಂದ್ಯಗಳ ಟಿ20 ಸರಣಿಯಲ್ಲಿ ಒಂದೇ ಒಂದು ಪಂದ್ಯದಲ್ಲೂ ಸ್ಯಾಮ್ಸನ್‍ಗೆ ಅವಕಾಶ ನೀಡಲಿಲ್ಲ. ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಡಿಸಿ ದ್ವಿತೀಯ ಪಂದ್ಯದಿಂದ ಮತ್ತೆ ಕೈಬಿಡಲಾಗಿದೆ.

ಭಾರತ ಕಿವೀಸ್ ನಾಡಿಗೆ ಪ್ರವಾಸ ಬೆಳೆಸುವಮುನ್ನ ಹಿರಿಯ ಆಟಗಾರರಿಗೆ ರೆಸ್ಟ್ ನೀಡಿದ ಪರಿಣಾಮ ತಂಡಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್‍ಗೆ ಅವಕಾಶ ಸಿಗಬಹುದೆಂಬ ನಿರೀಕ್ಷೆ ಇತ್ತು. ಆದರೆ 3 ಪಂದ್ಯಗಳ ಟಿ20 ಸರಣಿಯಲ್ಲಿ ಒಂದೇ ಒಂದು ಪಂದ್ಯದಲ್ಲೂ ಸ್ಯಾಮ್ಸನ್‍ಗೆ ಅವಕಾಶ ನೀಡಲಿಲ್ಲ. ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಡಿಸಿ ದ್ವಿತೀಯ ಪಂದ್ಯದಿಂದ ಮತ್ತೆ ಕೈಬಿಡಲಾಗಿದೆ.

6 / 7
ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.v

ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.v

7 / 7

Published On - 9:22 am, Sun, 27 November 22

Follow us
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?