AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

India vs New Zealand, 4th T20I: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನುಳಿದಿರುವ ಎರಡು ಮ್ಯಾಚ್​ಗಳು ಔಪಚಾರಿಕ. ಹೀಗಾಗಿ ಟೀಮ್ ಇಂಡಿಯಾ ಕೊನೆಯ ಎರಡು ಪಂದ್ಯಗಳ ವೇಳೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 

ಝಾಹಿರ್ ಯೂಸುಫ್
|

Updated on: Jan 28, 2026 | 8:27 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ.

1 / 5
ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಯಾಗಿದೆ.

ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಯಾಗಿದೆ.

2 / 5
ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಕಳೆದೆರಡು ಪಂದ್ಯಗಳಲ್ಲಿ ಕಣಕ್ಕಿಳಿಯದ ಅಕ್ಷರ್ ಪಟೇಲ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಇನ್ನು ಅಕ್ಷರ್ ಪಟೇಲ್ ಈ ಪಂದ್ಯಕ್ಕೂ ಫಿಟ್ ಆಗಿರದೇ ಇದ್ದರೆ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಕಳೆದೆರಡು ಪಂದ್ಯಗಳಲ್ಲಿ ಕಣಕ್ಕಿಳಿಯದ ಅಕ್ಷರ್ ಪಟೇಲ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಇನ್ನು ಅಕ್ಷರ್ ಪಟೇಲ್ ಈ ಪಂದ್ಯಕ್ಕೂ ಫಿಟ್ ಆಗಿರದೇ ಇದ್ದರೆ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

3 / 5
ಇನ್ನು ಈ ಪಂದ್ಯದಿಂದ ಹರ್ಷಿತ್ ರಾಣಾ ಕೂಡ ಹೊರಗುಳಿದರೆ ಅಚ್ಚರಿಪಡಬೇಕಿಲ್ಲ. ಏಕೆಂದರೆ ಕಳೆದ ಪಂದ್ಯದ ವೇಳೆ ಅರ್ಷದೀಪ್ ಸಿಂಗ್​​ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಅರ್ಷದೀಪ್​​ ಸಿಂಗ್​ ಅವರನ್ನು ಕಣಕ್ಕಿಳಿಸಿದ ಹರ್ಷಿತ್​ಗೆ ರೆಸ್ಟ್ ನೀಡುವ ಸಾಧ್ಯತೆಯಿದೆ. ಹಾಗೆಯೇ ರವಿ ಬಿಷ್ಣೋಯ್ ಬದಲಿಗೆ ಈ ಮ್ಯಾಚ್​ನಲ್ಲಿ ವರುಣ್ ಚಕ್ರವರ್ತಿ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಇನ್ನು ಈ ಪಂದ್ಯದಿಂದ ಹರ್ಷಿತ್ ರಾಣಾ ಕೂಡ ಹೊರಗುಳಿದರೆ ಅಚ್ಚರಿಪಡಬೇಕಿಲ್ಲ. ಏಕೆಂದರೆ ಕಳೆದ ಪಂದ್ಯದ ವೇಳೆ ಅರ್ಷದೀಪ್ ಸಿಂಗ್​​ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಅರ್ಷದೀಪ್​​ ಸಿಂಗ್​ ಅವರನ್ನು ಕಣಕ್ಕಿಳಿಸಿದ ಹರ್ಷಿತ್​ಗೆ ರೆಸ್ಟ್ ನೀಡುವ ಸಾಧ್ಯತೆಯಿದೆ. ಹಾಗೆಯೇ ರವಿ ಬಿಷ್ಣೋಯ್ ಬದಲಿಗೆ ಈ ಮ್ಯಾಚ್​ನಲ್ಲಿ ವರುಣ್ ಚಕ್ರವರ್ತಿ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 5
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ