AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಭಾರತದ ಗೆಲುವು ಕಸಿದ ಭಾರತೀಯ ಮೂಲದವರು..!

Ajaz Patel - Rachin Ravindra: ಅಂತಿಮವಾಗಿ 91 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅಜೇಯ 18 ರನ್​ಗಳಿಸಿದರೆ, ಏಜಾಝ್ ಪಟೇಲ್ 23 ಎಸೆತಗಳಲ್ಲಿ ಕೇವಲ 2 ರನ್​ಗಳಿಸಿ ಅಜೇಯರಾಗಿ ಉಳಿದರು.

TV9 Web
| Updated By: ಝಾಹಿರ್ ಯೂಸುಫ್|

Updated on: Nov 29, 2021 | 5:28 PM

Share
 ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ.  ಟೀಮ್ ಇಂಡಿಯಾ ನೀಡಿದ 284 ರನ್​ಗಳ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. 86ನೇ ಓವರ್​ ಮುಕ್ತಾಯದ ವೇಳೆಗೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 147 ರನ್​ಗಳಿಸಿತ್ತು. ಈ ವೇಳೆ ಗೆಲುವು ಭಾರತದ್ದೇ ಎಂದು ಎಲ್ಲರೂ ಭಾವಿಸಿದ್ದರು.

ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ. ಟೀಮ್ ಇಂಡಿಯಾ ನೀಡಿದ 284 ರನ್​ಗಳ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. 86ನೇ ಓವರ್​ ಮುಕ್ತಾಯದ ವೇಳೆಗೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 147 ರನ್​ಗಳಿಸಿತ್ತು. ಈ ವೇಳೆ ಗೆಲುವು ಭಾರತದ್ದೇ ಎಂದು ಎಲ್ಲರೂ ಭಾವಿಸಿದ್ದರು.

1 / 6
 ಆದರೆ 8ನೇ ಕ್ರಮಾಂಕದಲ್ಲಿ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾರತೀಯ ಮೂಲದ ನ್ಯೂಜಿಲೆಂಡ್​ ಕ್ರಿಕೆಟರ್ ಟೀಮ್ ಇಂಡಿಯಾ ಬೌಲರುಗಳ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಭಾರತೀಯ ಅನುಭವಿ ಸ್ಪಿನ್ನರ್​ಗಳ ಮುಂದೆ 22 ವರ್ಷದ ರಚಿನ್ ತಡೆಗೋಡೆಯಾಗಿ ನಿಂತು ಏಕಾಂಗಿಯಾಗಿ ಹೋರಾಟ ಮುಂದುವರೆಸಿದರು. ಈ ಹಂತದಲ್ಲಿ 90ನೇ ಓವರ್​ನಲ್ಲಿ ಟಿಮ್ ಸೌಥಿಯನ್ನು ಜಡೇಜಾ ಔಟ್ ಮಾಡಿದರು. ಈ ವೇಳೆ ಮತ್ತೊಮ್ಮೆ ಭಾರತದ ಗೆಲುವಿನ ಆಸೆ ಚಿಗುರಿತು.

ಆದರೆ 8ನೇ ಕ್ರಮಾಂಕದಲ್ಲಿ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾರತೀಯ ಮೂಲದ ನ್ಯೂಜಿಲೆಂಡ್​ ಕ್ರಿಕೆಟರ್ ಟೀಮ್ ಇಂಡಿಯಾ ಬೌಲರುಗಳ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಭಾರತೀಯ ಅನುಭವಿ ಸ್ಪಿನ್ನರ್​ಗಳ ಮುಂದೆ 22 ವರ್ಷದ ರಚಿನ್ ತಡೆಗೋಡೆಯಾಗಿ ನಿಂತು ಏಕಾಂಗಿಯಾಗಿ ಹೋರಾಟ ಮುಂದುವರೆಸಿದರು. ಈ ಹಂತದಲ್ಲಿ 90ನೇ ಓವರ್​ನಲ್ಲಿ ಟಿಮ್ ಸೌಥಿಯನ್ನು ಜಡೇಜಾ ಔಟ್ ಮಾಡಿದರು. ಈ ವೇಳೆ ಮತ್ತೊಮ್ಮೆ ಭಾರತದ ಗೆಲುವಿನ ಆಸೆ ಚಿಗುರಿತು.

2 / 6
ಆದರೆ 10ನೇ ವಿಕೆಟ್​ಗೆ ರಚಿನ್ ಜೊತೆಗೂಡಿದ ಮತ್ತೋರ್ವ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗ ಅಜಾಝ್ ಪಟೇಲ್ ಕೂಡ ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರು. ಅದರಂತೆ ಇಬ್ಬರೂ ಬಂಡೆಯಂತೆ ಕ್ರೀಸ್ ಕಚ್ಚಿ ನಿಂತರು. ಅಂತಿಮ 9 ಓವರ್​ಗಳನ್ನು ಜೊತೆಯಾಗಿ ಎದುರಿಸಿದ ರಚಿನ್ ಹಾಗೂ ಏಜಾಝ್ ಕಲೆಹಾಕಿದ್ದು ಕೇವಲ 10 ರನ್​ ಮಾತ್ರ. ಅಂದರೆ ಇಬ್ಬರೂ ಟೆಸ್ಟ್ ಕ್ರಿಕೆಟ್ ಹೇಗೆ ಆಡಬೇಕೆಂದು ಇಡೀ ವಿಶ್ವಕ್ಕೆ ತೋರಿಸಿಕೊಟ್ಟರು.

ಆದರೆ 10ನೇ ವಿಕೆಟ್​ಗೆ ರಚಿನ್ ಜೊತೆಗೂಡಿದ ಮತ್ತೋರ್ವ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗ ಅಜಾಝ್ ಪಟೇಲ್ ಕೂಡ ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರು. ಅದರಂತೆ ಇಬ್ಬರೂ ಬಂಡೆಯಂತೆ ಕ್ರೀಸ್ ಕಚ್ಚಿ ನಿಂತರು. ಅಂತಿಮ 9 ಓವರ್​ಗಳನ್ನು ಜೊತೆಯಾಗಿ ಎದುರಿಸಿದ ರಚಿನ್ ಹಾಗೂ ಏಜಾಝ್ ಕಲೆಹಾಕಿದ್ದು ಕೇವಲ 10 ರನ್​ ಮಾತ್ರ. ಅಂದರೆ ಇಬ್ಬರೂ ಟೆಸ್ಟ್ ಕ್ರಿಕೆಟ್ ಹೇಗೆ ಆಡಬೇಕೆಂದು ಇಡೀ ವಿಶ್ವಕ್ಕೆ ತೋರಿಸಿಕೊಟ್ಟರು.

3 / 6
 ಅಂತಿಮವಾಗಿ 91 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅಜೇಯ 18 ರನ್​ಗಳಿಸಿದರೆ, ಏಜಾಝ್ ಪಟೇಲ್ 23 ಎಸೆತಗಳಲ್ಲಿ ಕೇವಲ 2 ರನ್​ಗಳಿಸಿ ಅಜೇಯರಾಗಿ ಉಳಿದರು. ಕೊನೆಯ 8 ಓವರ್​ಗಳಲ್ಲಿ ಅತ್ಯುತ್ತಮ ರಕ್ಷಣಾತ್ಮಕ ಆಟವಾಡಿದ ಭಾರತೀಯ ಮೂಲದ ಈ ಜೋಡಿ ಅಂತಿಮವಾಗಿ 9 ವಿಕೆಟ್​ ನಷ್ಟಕ್ಕೆ 165 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ ಪಾಲಿನ ಗೆಲುವನ್ನು ಕಸಿದುಕೊಂಡರು.

ಅಂತಿಮವಾಗಿ 91 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅಜೇಯ 18 ರನ್​ಗಳಿಸಿದರೆ, ಏಜಾಝ್ ಪಟೇಲ್ 23 ಎಸೆತಗಳಲ್ಲಿ ಕೇವಲ 2 ರನ್​ಗಳಿಸಿ ಅಜೇಯರಾಗಿ ಉಳಿದರು. ಕೊನೆಯ 8 ಓವರ್​ಗಳಲ್ಲಿ ಅತ್ಯುತ್ತಮ ರಕ್ಷಣಾತ್ಮಕ ಆಟವಾಡಿದ ಭಾರತೀಯ ಮೂಲದ ಈ ಜೋಡಿ ಅಂತಿಮವಾಗಿ 9 ವಿಕೆಟ್​ ನಷ್ಟಕ್ಕೆ 165 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ ಪಾಲಿನ ಗೆಲುವನ್ನು ಕಸಿದುಕೊಂಡರು.

4 / 6
ಅಂದಹಾಗೆ ರಚಿನ್ ರವೀಂದ್ರ ಬೆಂಗಳೂರು ಮೂಲದ  ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿ ಅಲ್ಲಿಯೇ ನೆಲೆಸಿದ್ದಾರೆ. ಇದೀಗ ರಚಿನ್ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಅಂದಹಾಗೆ ರಚಿನ್ ರವೀಂದ್ರ ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿ ಅಲ್ಲಿಯೇ ನೆಲೆಸಿದ್ದಾರೆ. ಇದೀಗ ರಚಿನ್ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

5 / 6
ಇನ್ನು ಮುಂಬೈ ಮೂಲದ ಏಜಾಝ್ ಪಟೇಲ್ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ನ್ಯೂಜಿಲೆಂಡ್ ತಂಡದಲ್ಲಿ ಎಂಬುದು ವಿಶೇಷ. ಇದೀಗ ಇಬ್ಬರು ಭಾರತೀಯ ಮೂಲದ ಕ್ರಿಕೆಟಿಗರೇ ಕ್ರಿಕೆಟ್ ಕ್ರಿಕೆಟ್​ ರೋಚಕ ಹೋರಾಟದಲ್ಲಿ ಟೀಮ್ ಇಂಡಿಯಾದ ಗೆಲುವನ್ನು ಕಸಿದುಕೊಂಡಿರುವುದು ವಿಶೇಷ.

ಇನ್ನು ಮುಂಬೈ ಮೂಲದ ಏಜಾಝ್ ಪಟೇಲ್ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ನ್ಯೂಜಿಲೆಂಡ್ ತಂಡದಲ್ಲಿ ಎಂಬುದು ವಿಶೇಷ. ಇದೀಗ ಇಬ್ಬರು ಭಾರತೀಯ ಮೂಲದ ಕ್ರಿಕೆಟಿಗರೇ ಕ್ರಿಕೆಟ್ ಕ್ರಿಕೆಟ್​ ರೋಚಕ ಹೋರಾಟದಲ್ಲಿ ಟೀಮ್ ಇಂಡಿಯಾದ ಗೆಲುವನ್ನು ಕಸಿದುಕೊಂಡಿರುವುದು ವಿಶೇಷ.

6 / 6
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ