AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಭಾರತದ ಗೆಲುವು ಕಸಿದ ಭಾರತೀಯ ಮೂಲದವರು..!

Ajaz Patel - Rachin Ravindra: ಅಂತಿಮವಾಗಿ 91 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅಜೇಯ 18 ರನ್​ಗಳಿಸಿದರೆ, ಏಜಾಝ್ ಪಟೇಲ್ 23 ಎಸೆತಗಳಲ್ಲಿ ಕೇವಲ 2 ರನ್​ಗಳಿಸಿ ಅಜೇಯರಾಗಿ ಉಳಿದರು.

TV9 Web
| Edited By: |

Updated on: Nov 29, 2021 | 5:28 PM

Share
 ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ.  ಟೀಮ್ ಇಂಡಿಯಾ ನೀಡಿದ 284 ರನ್​ಗಳ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. 86ನೇ ಓವರ್​ ಮುಕ್ತಾಯದ ವೇಳೆಗೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 147 ರನ್​ಗಳಿಸಿತ್ತು. ಈ ವೇಳೆ ಗೆಲುವು ಭಾರತದ್ದೇ ಎಂದು ಎಲ್ಲರೂ ಭಾವಿಸಿದ್ದರು.

ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ. ಟೀಮ್ ಇಂಡಿಯಾ ನೀಡಿದ 284 ರನ್​ಗಳ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. 86ನೇ ಓವರ್​ ಮುಕ್ತಾಯದ ವೇಳೆಗೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 147 ರನ್​ಗಳಿಸಿತ್ತು. ಈ ವೇಳೆ ಗೆಲುವು ಭಾರತದ್ದೇ ಎಂದು ಎಲ್ಲರೂ ಭಾವಿಸಿದ್ದರು.

1 / 6
 ಆದರೆ 8ನೇ ಕ್ರಮಾಂಕದಲ್ಲಿ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾರತೀಯ ಮೂಲದ ನ್ಯೂಜಿಲೆಂಡ್​ ಕ್ರಿಕೆಟರ್ ಟೀಮ್ ಇಂಡಿಯಾ ಬೌಲರುಗಳ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಭಾರತೀಯ ಅನುಭವಿ ಸ್ಪಿನ್ನರ್​ಗಳ ಮುಂದೆ 22 ವರ್ಷದ ರಚಿನ್ ತಡೆಗೋಡೆಯಾಗಿ ನಿಂತು ಏಕಾಂಗಿಯಾಗಿ ಹೋರಾಟ ಮುಂದುವರೆಸಿದರು. ಈ ಹಂತದಲ್ಲಿ 90ನೇ ಓವರ್​ನಲ್ಲಿ ಟಿಮ್ ಸೌಥಿಯನ್ನು ಜಡೇಜಾ ಔಟ್ ಮಾಡಿದರು. ಈ ವೇಳೆ ಮತ್ತೊಮ್ಮೆ ಭಾರತದ ಗೆಲುವಿನ ಆಸೆ ಚಿಗುರಿತು.

ಆದರೆ 8ನೇ ಕ್ರಮಾಂಕದಲ್ಲಿ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾರತೀಯ ಮೂಲದ ನ್ಯೂಜಿಲೆಂಡ್​ ಕ್ರಿಕೆಟರ್ ಟೀಮ್ ಇಂಡಿಯಾ ಬೌಲರುಗಳ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಭಾರತೀಯ ಅನುಭವಿ ಸ್ಪಿನ್ನರ್​ಗಳ ಮುಂದೆ 22 ವರ್ಷದ ರಚಿನ್ ತಡೆಗೋಡೆಯಾಗಿ ನಿಂತು ಏಕಾಂಗಿಯಾಗಿ ಹೋರಾಟ ಮುಂದುವರೆಸಿದರು. ಈ ಹಂತದಲ್ಲಿ 90ನೇ ಓವರ್​ನಲ್ಲಿ ಟಿಮ್ ಸೌಥಿಯನ್ನು ಜಡೇಜಾ ಔಟ್ ಮಾಡಿದರು. ಈ ವೇಳೆ ಮತ್ತೊಮ್ಮೆ ಭಾರತದ ಗೆಲುವಿನ ಆಸೆ ಚಿಗುರಿತು.

2 / 6
ಆದರೆ 10ನೇ ವಿಕೆಟ್​ಗೆ ರಚಿನ್ ಜೊತೆಗೂಡಿದ ಮತ್ತೋರ್ವ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗ ಅಜಾಝ್ ಪಟೇಲ್ ಕೂಡ ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರು. ಅದರಂತೆ ಇಬ್ಬರೂ ಬಂಡೆಯಂತೆ ಕ್ರೀಸ್ ಕಚ್ಚಿ ನಿಂತರು. ಅಂತಿಮ 9 ಓವರ್​ಗಳನ್ನು ಜೊತೆಯಾಗಿ ಎದುರಿಸಿದ ರಚಿನ್ ಹಾಗೂ ಏಜಾಝ್ ಕಲೆಹಾಕಿದ್ದು ಕೇವಲ 10 ರನ್​ ಮಾತ್ರ. ಅಂದರೆ ಇಬ್ಬರೂ ಟೆಸ್ಟ್ ಕ್ರಿಕೆಟ್ ಹೇಗೆ ಆಡಬೇಕೆಂದು ಇಡೀ ವಿಶ್ವಕ್ಕೆ ತೋರಿಸಿಕೊಟ್ಟರು.

ಆದರೆ 10ನೇ ವಿಕೆಟ್​ಗೆ ರಚಿನ್ ಜೊತೆಗೂಡಿದ ಮತ್ತೋರ್ವ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗ ಅಜಾಝ್ ಪಟೇಲ್ ಕೂಡ ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರು. ಅದರಂತೆ ಇಬ್ಬರೂ ಬಂಡೆಯಂತೆ ಕ್ರೀಸ್ ಕಚ್ಚಿ ನಿಂತರು. ಅಂತಿಮ 9 ಓವರ್​ಗಳನ್ನು ಜೊತೆಯಾಗಿ ಎದುರಿಸಿದ ರಚಿನ್ ಹಾಗೂ ಏಜಾಝ್ ಕಲೆಹಾಕಿದ್ದು ಕೇವಲ 10 ರನ್​ ಮಾತ್ರ. ಅಂದರೆ ಇಬ್ಬರೂ ಟೆಸ್ಟ್ ಕ್ರಿಕೆಟ್ ಹೇಗೆ ಆಡಬೇಕೆಂದು ಇಡೀ ವಿಶ್ವಕ್ಕೆ ತೋರಿಸಿಕೊಟ್ಟರು.

3 / 6
 ಅಂತಿಮವಾಗಿ 91 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅಜೇಯ 18 ರನ್​ಗಳಿಸಿದರೆ, ಏಜಾಝ್ ಪಟೇಲ್ 23 ಎಸೆತಗಳಲ್ಲಿ ಕೇವಲ 2 ರನ್​ಗಳಿಸಿ ಅಜೇಯರಾಗಿ ಉಳಿದರು. ಕೊನೆಯ 8 ಓವರ್​ಗಳಲ್ಲಿ ಅತ್ಯುತ್ತಮ ರಕ್ಷಣಾತ್ಮಕ ಆಟವಾಡಿದ ಭಾರತೀಯ ಮೂಲದ ಈ ಜೋಡಿ ಅಂತಿಮವಾಗಿ 9 ವಿಕೆಟ್​ ನಷ್ಟಕ್ಕೆ 165 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ ಪಾಲಿನ ಗೆಲುವನ್ನು ಕಸಿದುಕೊಂಡರು.

ಅಂತಿಮವಾಗಿ 91 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅಜೇಯ 18 ರನ್​ಗಳಿಸಿದರೆ, ಏಜಾಝ್ ಪಟೇಲ್ 23 ಎಸೆತಗಳಲ್ಲಿ ಕೇವಲ 2 ರನ್​ಗಳಿಸಿ ಅಜೇಯರಾಗಿ ಉಳಿದರು. ಕೊನೆಯ 8 ಓವರ್​ಗಳಲ್ಲಿ ಅತ್ಯುತ್ತಮ ರಕ್ಷಣಾತ್ಮಕ ಆಟವಾಡಿದ ಭಾರತೀಯ ಮೂಲದ ಈ ಜೋಡಿ ಅಂತಿಮವಾಗಿ 9 ವಿಕೆಟ್​ ನಷ್ಟಕ್ಕೆ 165 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ ಪಾಲಿನ ಗೆಲುವನ್ನು ಕಸಿದುಕೊಂಡರು.

4 / 6
ಅಂದಹಾಗೆ ರಚಿನ್ ರವೀಂದ್ರ ಬೆಂಗಳೂರು ಮೂಲದ  ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿ ಅಲ್ಲಿಯೇ ನೆಲೆಸಿದ್ದಾರೆ. ಇದೀಗ ರಚಿನ್ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಅಂದಹಾಗೆ ರಚಿನ್ ರವೀಂದ್ರ ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿ ಅಲ್ಲಿಯೇ ನೆಲೆಸಿದ್ದಾರೆ. ಇದೀಗ ರಚಿನ್ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

5 / 6
ಇನ್ನು ಮುಂಬೈ ಮೂಲದ ಏಜಾಝ್ ಪಟೇಲ್ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ನ್ಯೂಜಿಲೆಂಡ್ ತಂಡದಲ್ಲಿ ಎಂಬುದು ವಿಶೇಷ. ಇದೀಗ ಇಬ್ಬರು ಭಾರತೀಯ ಮೂಲದ ಕ್ರಿಕೆಟಿಗರೇ ಕ್ರಿಕೆಟ್ ಕ್ರಿಕೆಟ್​ ರೋಚಕ ಹೋರಾಟದಲ್ಲಿ ಟೀಮ್ ಇಂಡಿಯಾದ ಗೆಲುವನ್ನು ಕಸಿದುಕೊಂಡಿರುವುದು ವಿಶೇಷ.

ಇನ್ನು ಮುಂಬೈ ಮೂಲದ ಏಜಾಝ್ ಪಟೇಲ್ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ನ್ಯೂಜಿಲೆಂಡ್ ತಂಡದಲ್ಲಿ ಎಂಬುದು ವಿಶೇಷ. ಇದೀಗ ಇಬ್ಬರು ಭಾರತೀಯ ಮೂಲದ ಕ್ರಿಕೆಟಿಗರೇ ಕ್ರಿಕೆಟ್ ಕ್ರಿಕೆಟ್​ ರೋಚಕ ಹೋರಾಟದಲ್ಲಿ ಟೀಮ್ ಇಂಡಿಯಾದ ಗೆಲುವನ್ನು ಕಸಿದುಕೊಂಡಿರುವುದು ವಿಶೇಷ.

6 / 6
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು