AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯಕ್ಕೆ ಚಾಲನೆ ದೊರೆತಿದೆ. 8 ತಂಡಗಳೊಂದಿಗೆ ಶುರುವಾದ ಈ ಟೂರ್ನಿಯ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Mar 09, 2025 | 2:43 PM

Share
ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಆಡುವ ಬಳಗದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಕೂಡ ಸೇರ್ಪಡೆಯಾಗಿದೆ.

ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಆಡುವ ಬಳಗದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಕೂಡ ಸೇರ್ಪಡೆಯಾಗಿದೆ.

1 / 5
ಹೌದು, ಇದು ವಿರಾಟ್ ಕೊಹ್ಲಿ 550ನೇ ಅಂತಾರಾಷ್ಟ್ರೀಯ ಮ್ಯಾಚ್. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ಪಂದ್ಯಗಳನ್ನಾಡಿರುವುದು ಕೇವಲ 6 ಆಟಗಾರರು ಮಾತ್ರ. ಈ ಸಾಧನೆ ಮಾಡಿದ ಆರನೇ ಆಟಗಾರ ವಿರಾಟ್ ಕೊಹ್ಲಿ. ಅಲ್ಲದೆ ಈ ಮೈಲುಗಲ್ಲು ಮುಟ್ಟಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

ಹೌದು, ಇದು ವಿರಾಟ್ ಕೊಹ್ಲಿ 550ನೇ ಅಂತಾರಾಷ್ಟ್ರೀಯ ಮ್ಯಾಚ್. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ಪಂದ್ಯಗಳನ್ನಾಡಿರುವುದು ಕೇವಲ 6 ಆಟಗಾರರು ಮಾತ್ರ. ಈ ಸಾಧನೆ ಮಾಡಿದ ಆರನೇ ಆಟಗಾರ ವಿರಾಟ್ ಕೊಹ್ಲಿ. ಅಲ್ಲದೆ ಈ ಮೈಲುಗಲ್ಲು ಮುಟ್ಟಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

2 / 5
ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550+ ಪಂದ್ಯಗಳನ್ನಾಡಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್ (ಭಾರತ), ಮಹೇಲ ಜಯವರ್ಧನೆ (ಶ್ರೀಲಂಕಾ), ಕುಮಾರ ಸಂಗಾಕ್ಕರ (ಶ್ರೀಲಂಕಾ), ಸನತ್ ಜಯಸೂರ್ಯ (ಶ್ರೀಲಂಕಾ)  ಹಾಗೂ ರಿಕಿ ಪಾಟಿಂಗ್ (ಆಸ್ಟ್ರೇಲಿಯಾ). ಇದೀಗ ಈ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.

ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550+ ಪಂದ್ಯಗಳನ್ನಾಡಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್ (ಭಾರತ), ಮಹೇಲ ಜಯವರ್ಧನೆ (ಶ್ರೀಲಂಕಾ), ಕುಮಾರ ಸಂಗಾಕ್ಕರ (ಶ್ರೀಲಂಕಾ), ಸನತ್ ಜಯಸೂರ್ಯ (ಶ್ರೀಲಂಕಾ) ಹಾಗೂ ರಿಕಿ ಪಾಟಿಂಗ್ (ಆಸ್ಟ್ರೇಲಿಯಾ). ಇದೀಗ ಈ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.

3 / 5
ಟೀಮ್ ಇಂಡಿಯಾ ಪರ ಈವರೆಗೆ 550* ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 27598* ರನ್ ಕಲೆಹಾಕಿದ್ದಾರೆ. ಈ ವೇಳೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ 82 ಶತಕಗಳು ಮೂಡಿಬಂದಿವೆ. ಹಾಗೆಯೇ 9 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇದರ ಜೊತೆ 336 ಕ್ಯಾಚ್​ಗಳನ್ನು ಹಿಡಿದಿರುವುದು ವಿಶೇಷ.

ಟೀಮ್ ಇಂಡಿಯಾ ಪರ ಈವರೆಗೆ 550* ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 27598* ರನ್ ಕಲೆಹಾಕಿದ್ದಾರೆ. ಈ ವೇಳೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ 82 ಶತಕಗಳು ಮೂಡಿಬಂದಿವೆ. ಹಾಗೆಯೇ 9 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇದರ ಜೊತೆ 336 ಕ್ಯಾಚ್​ಗಳನ್ನು ಹಿಡಿದಿರುವುದು ವಿಶೇಷ.

4 / 5
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಿಂದ 2013ರ ನಡುವೆ ಸಚಿನ್ ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 100 ಶತಕಗಳೊಂದಿಗೆ 34357 ರನ್​ ಕಲೆಹಾಕಿದ್ದಲ್ಲದೆ, 201 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಿಂದ 2013ರ ನಡುವೆ ಸಚಿನ್ ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 100 ಶತಕಗಳೊಂದಿಗೆ 34357 ರನ್​ ಕಲೆಹಾಕಿದ್ದಲ್ಲದೆ, 201 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

5 / 5

Published On - 2:25 pm, Sun, 9 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್