AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಮಾನ… ಟೆಸ್ಟ್ ಇತಿಹಾಸದಲ್ಲೇ ಅವಮಾನಕರ ಸೋಲುಂಡ ಟೀಮ್ ಇಂಡಿಯಾ

India vs New Zealand, 3rd Test: ಭಾರತದ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ನ್ಯೂಝಿಲೆಂಡ್, 2ನೇ ಪಂದ್ಯವನ್ನು 113 ರನ್​ಗಳಿಂದ ಗೆದ್ದುಕೊಂಡಿತ್ತು. ಇದೀಗ 3ನೇ ಪಂದ್ಯದಲ್ಲಿ 25 ರನ್​ಗಳ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 03, 2024 | 1:43 PM

ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡವನ್ನು ತವರಿನಲ್ಲಿ ಬಗ್ಗು ಬಡಿದು ನ್ಯೂಝಿಲೆಂಡ್ ಹೊಸ ಇತಿಹಾಸ ರಚಿಸಿದೆ.

ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡವನ್ನು ತವರಿನಲ್ಲಿ ಬಗ್ಗು ಬಡಿದು ನ್ಯೂಝಿಲೆಂಡ್ ಹೊಸ ಇತಿಹಾಸ ರಚಿಸಿದೆ.

1 / 5
ಈ ಮೂಲಕ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ಮೊದಲ ತಂಡವೆಂಬ ವಿಶೇಷ ದಾಖಲೆಯೊಂದನ್ನು ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ 1958 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು 3-0 ಅಂತರದಿಂದ ಸರಣಿ ಸೋತಿದ್ದರೂ, ಅದು 5 ಪಂದ್ಯಗಳ ಸರಣಿಯಾಗಿತ್ತು. ಅಲ್ಲದೆ ಆ ಸರಣಿಯ ಎರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು.

ಈ ಮೂಲಕ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ಮೊದಲ ತಂಡವೆಂಬ ವಿಶೇಷ ದಾಖಲೆಯೊಂದನ್ನು ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ 1958 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು 3-0 ಅಂತರದಿಂದ ಸರಣಿ ಸೋತಿದ್ದರೂ, ಅದು 5 ಪಂದ್ಯಗಳ ಸರಣಿಯಾಗಿತ್ತು. ಅಲ್ಲದೆ ಆ ಸರಣಿಯ ಎರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು.

2 / 5
ಆದರೆ ಇದೇ ಮೊದಲ ಬಾರಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ಅವಮಾನಕರ ಸೋಲಿಗೆ ಕೊರೊಳೊಡ್ಡಿದೆ. ಅಷ್ಟೇ ಅಲ್ಲದೆ 24 ವರ್ಷಗಳ ಬಳಿಕ ತವರಿನಲ್ಲಿ ವೈಟ್ ವಾಶ್ ಆಗಿದೆ.

ಆದರೆ ಇದೇ ಮೊದಲ ಬಾರಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ಅವಮಾನಕರ ಸೋಲಿಗೆ ಕೊರೊಳೊಡ್ಡಿದೆ. ಅಷ್ಟೇ ಅಲ್ಲದೆ 24 ವರ್ಷಗಳ ಬಳಿಕ ತವರಿನಲ್ಲಿ ವೈಟ್ ವಾಶ್ ಆಗಿದೆ.

3 / 5
ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ವೈಟ್ ವಾಶ್ ಸೋಲು ಎದುರಿಸಿದ್ದು 2000 ರಲ್ಲಿ. ಅಂದು ಸೌತ್ ಆಫ್ರಿಕಾ ತಂಡವು ಭಾರತವನ್ನು 2-0 ಅಂತರದಿಂದ ಮಣಿಸಿ ಇತಿಹಾಸ ಬರೆದಿತ್ತು. ಇದೀಗ 24 ವರ್ಷಗಳ ಬಳಿಕ ಕಿವೀಸ್ ಪಡೆ ಭಾರತ ತಂಡಕ್ಕೆ ಮತ್ತೆ ವೈಟ್ ವಾಶ್ ಸೋಲಿನ ರುಚಿ ತೋರಿಸಿದೆ.

ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ವೈಟ್ ವಾಶ್ ಸೋಲು ಎದುರಿಸಿದ್ದು 2000 ರಲ್ಲಿ. ಅಂದು ಸೌತ್ ಆಫ್ರಿಕಾ ತಂಡವು ಭಾರತವನ್ನು 2-0 ಅಂತರದಿಂದ ಮಣಿಸಿ ಇತಿಹಾಸ ಬರೆದಿತ್ತು. ಇದೀಗ 24 ವರ್ಷಗಳ ಬಳಿಕ ಕಿವೀಸ್ ಪಡೆ ಭಾರತ ತಂಡಕ್ಕೆ ಮತ್ತೆ ವೈಟ್ ವಾಶ್ ಸೋಲಿನ ರುಚಿ ತೋರಿಸಿದೆ.

4 / 5
ಇದೀಗ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿಯೇ ಅವಮಾನಕರ ರೀತಿಯಲ್ಲಿ ಸೋಲುಂಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

ಇದೀಗ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿಯೇ ಅವಮಾನಕರ ರೀತಿಯಲ್ಲಿ ಸೋಲುಂಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

5 / 5
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ