AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

India vs New Zealand: ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 215 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಕಣಕ್ಕಿಳಿದಿರಲಿಲ್ಲ.

ಝಾಹಿರ್ ಯೂಸುಫ್
|

Updated on: Jan 29, 2026 | 9:11 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿರಲಿಲ್ಲ. ನಿಗಲ್ ಇಂಜುರಿಯ ಕಾರಣ ಇಶಾನ್ ಇಂದು ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದರು.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿರಲಿಲ್ಲ. ನಿಗಲ್ ಇಂಜುರಿಯ ಕಾರಣ ಇಶಾನ್ ಇಂದು ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದರು.

1 / 5
ಆದರೆ ಇದೇ ವೇಳೆ ಇಶಾನ್ ಕಿಶನ್ ಮೈದಾನದಲ್ಲಿ ಬ್ಯಾಟ್ ಹಿಡಿದು ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಅಂದರೆ ಈ ಪಂದ್ಯಕ್ಕೂ ಮುನ್ನ ಇಶಾನ್ ಅಭ್ಯಾಸದಲ್ಲಿ ನಿರತರಾಗಿದ್ದದ್ದು ಇದರಿಂದ ಸ್ಪಷ್ಟವಾಗಿತ್ತು. ಇದಾದ ಬಳಿಕ ಹಲವು ಬಾರಿ ಮೈದಾನಕ್ಕೆ ಆಗಮಿಸಿದ್ದರು.

ಆದರೆ ಇದೇ ವೇಳೆ ಇಶಾನ್ ಕಿಶನ್ ಮೈದಾನದಲ್ಲಿ ಬ್ಯಾಟ್ ಹಿಡಿದು ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಅಂದರೆ ಈ ಪಂದ್ಯಕ್ಕೂ ಮುನ್ನ ಇಶಾನ್ ಅಭ್ಯಾಸದಲ್ಲಿ ನಿರತರಾಗಿದ್ದದ್ದು ಇದರಿಂದ ಸ್ಪಷ್ಟವಾಗಿತ್ತು. ಇದಾದ ಬಳಿಕ ಹಲವು ಬಾರಿ ಮೈದಾನಕ್ಕೆ ಆಗಮಿಸಿದ್ದರು.

2 / 5
ಅಂದರೆ ಪಂದ್ಯದುದ್ದಕ್ಕೂ ವಾಟರ್ ಬಾಯ್ ಆಗಿ ಮೈದಾನಕ್ಕೆ ಆಗಮಿಸಿದ್ದ ಇಶಾನ್ ಕಿಶನ್ ಯಾವುದೇ ಫಿಟ್​ನೆಸ್ ಸಮಸ್ಯೆ ಇಲ್ಲದಂತೆ ಕಂಡು ಬಂದರು. ಅದರಲ್ಲೂ ಅವರು ವೇಗದಲ್ಲಿ ಓಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹೀಗಾಗಿಯೇ ಇದೀಗ ಇಶಾನ್ ಕಿಶನ್ ಅವರ ಗಾಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಅಂದರೆ ಪಂದ್ಯದುದ್ದಕ್ಕೂ ವಾಟರ್ ಬಾಯ್ ಆಗಿ ಮೈದಾನಕ್ಕೆ ಆಗಮಿಸಿದ್ದ ಇಶಾನ್ ಕಿಶನ್ ಯಾವುದೇ ಫಿಟ್​ನೆಸ್ ಸಮಸ್ಯೆ ಇಲ್ಲದಂತೆ ಕಂಡು ಬಂದರು. ಅದರಲ್ಲೂ ಅವರು ವೇಗದಲ್ಲಿ ಓಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹೀಗಾಗಿಯೇ ಇದೀಗ ಇಶಾನ್ ಕಿಶನ್ ಅವರ ಗಾಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

3 / 5
ನಿಗಲ್ ಇಂಜುರಿ ಎಂಬುದು ಸಣ್ಣ ನೋವಿನ ಸಮಸ್ಯೆ. ಕೈ ಕಾಲು ಅಥವಾ ದೇಹದ ಭಾಗದಲ್ಲಿ ಕಾಣಿಸಿಕೊಳ್ಳುವ ಈ ನೋವಿನ ಸಮಸ್ಯೆಯಿದ್ದರೆ ಇಶಾನ್ ಕಿಶನ್ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಬೇಕಿತ್ತು. ಇದರ ಹೊರತಾಗಿ ಅವರನ್ನು ವಾಟರ್ ಬಾಯ್ ಆಗಿ ಬಳಸಿಕೊಂಡಿರುವುದೇಕೆ? ಎಂದು ಅನೇಕರು ಪ್ರಶ್ನಿಸಿದ್ದಾರೆ.

ನಿಗಲ್ ಇಂಜುರಿ ಎಂಬುದು ಸಣ್ಣ ನೋವಿನ ಸಮಸ್ಯೆ. ಕೈ ಕಾಲು ಅಥವಾ ದೇಹದ ಭಾಗದಲ್ಲಿ ಕಾಣಿಸಿಕೊಳ್ಳುವ ಈ ನೋವಿನ ಸಮಸ್ಯೆಯಿದ್ದರೆ ಇಶಾನ್ ಕಿಶನ್ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಬೇಕಿತ್ತು. ಇದರ ಹೊರತಾಗಿ ಅವರನ್ನು ವಾಟರ್ ಬಾಯ್ ಆಗಿ ಬಳಸಿಕೊಂಡಿರುವುದೇಕೆ? ಎಂದು ಅನೇಕರು ಪ್ರಶ್ನಿಸಿದ್ದಾರೆ.

4 / 5
ಒಟ್ಟಿನಲ್ಲಿ ಟೀಮ್ ಇಂಡಿಯಾ ಕೋಚ್​ನ ನಡೆಯು ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಅದರಲ್ಲೂ ಗೌತಮ್ ಗಂಭೀರ್ ಸುಳ್ಳು ಹೇಳಿ ಅತ್ಯುತ್ತಮ ಫಾರ್ಮ್​ನಲ್ಲಿರುವ ಇಶಾನ್ ಅವರನ್ನು ಆಡುವ ಬಳಗದಿಂದ ಹೊರಗಿಟ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಒಟ್ಟಿನಲ್ಲಿ ಟೀಮ್ ಇಂಡಿಯಾ ಕೋಚ್​ನ ನಡೆಯು ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಅದರಲ್ಲೂ ಗೌತಮ್ ಗಂಭೀರ್ ಸುಳ್ಳು ಹೇಳಿ ಅತ್ಯುತ್ತಮ ಫಾರ್ಮ್​ನಲ್ಲಿರುವ ಇಶಾನ್ ಅವರನ್ನು ಆಡುವ ಬಳಗದಿಂದ ಹೊರಗಿಟ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ