AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 18 ವರ್ಷಗಳ ಬಳಿಕ ಟೀಮ್ ಇಂಡಿಯಾದ ಅತ್ಯಂತ ಕಳಪೆ ಆರಂಭ..!

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಅದು ಸಹ 18 ವರ್ಷಗಳ ಬಳಿಕ, ಅಂದರೆ ತವರಿನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಮೊದಲ 10 ಓವರ್​ಗಳಲ್ಲಿ ರನ್​ಗಳಿಸಲು ಪರದಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 17, 2024 | 12:32 PM

Share
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ.

ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ.

1 / 5
ತಂಡದ ಮೊತ್ತ 9 ಆಗುವಷ್ಟರಲ್ಲಿ ರೋಹಿತ್ ಶರ್ಮಾ (2) ಔಟಾದರು. ಇನ್ನು ವಿರಾಟ್ ಕೊಹ್ಲಿ (0) ಹಾಗೂ ಸರ್ಫರಾಝ್ ಖಾನ್ (0) ಸೊನ್ನೆ ಸುತ್ತುವ ಮೂಲಕ ಹಿಂತಿರುಗಿದರು. ಪರಿಣಾಮ ಮೊದಲ ಹತ್ತು ಓವರ್​ಗಳಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 13 ರನ್​ಗಳು ಮಾತ್ರ.

ತಂಡದ ಮೊತ್ತ 9 ಆಗುವಷ್ಟರಲ್ಲಿ ರೋಹಿತ್ ಶರ್ಮಾ (2) ಔಟಾದರು. ಇನ್ನು ವಿರಾಟ್ ಕೊಹ್ಲಿ (0) ಹಾಗೂ ಸರ್ಫರಾಝ್ ಖಾನ್ (0) ಸೊನ್ನೆ ಸುತ್ತುವ ಮೂಲಕ ಹಿಂತಿರುಗಿದರು. ಪರಿಣಾಮ ಮೊದಲ ಹತ್ತು ಓವರ್​ಗಳಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 13 ರನ್​ಗಳು ಮಾತ್ರ.

2 / 5
ಇದರೊಂದಿಗೆ 18 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಂತ ಕಳಪೆ ಆರಂಭ ಪಡೆದುಕೊಂಡಂತಾಗಿದೆ. ಇದಕ್ಕೂ ಮುನ್ನ ಇಂತಹದೊಂದು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದು 2006 ರಲ್ಲಿ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡವು ಮೊದಲ 10 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು ಕೇವಲ 10 ರನ್ ಕಲೆಹಾಕಿದ್ದರು.

ಇದರೊಂದಿಗೆ 18 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಂತ ಕಳಪೆ ಆರಂಭ ಪಡೆದುಕೊಂಡಂತಾಗಿದೆ. ಇದಕ್ಕೂ ಮುನ್ನ ಇಂತಹದೊಂದು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದು 2006 ರಲ್ಲಿ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡವು ಮೊದಲ 10 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು ಕೇವಲ 10 ರನ್ ಕಲೆಹಾಕಿದ್ದರು.

3 / 5
ಇದೀಗ ಹದಿನೆಂಟು ವರ್ಷಗಳ ಬಳಿಕ ಮತ್ತೊಮ್ಮೆ ಭಾರತೀಯ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದ್ದಾರೆ. ನ್ಯೂಝಿಲೆಂಡ್ ವೇಗಿಗಳ ಕರಾರುವಾಕ್ ದಾಳಿಗೆ ತಡಕಾಡಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಮೊದಲ 10 ಓವರ್​ಗಳಲ್ಲಿ ಕೇವಲ 13 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಇದೀಗ ಹದಿನೆಂಟು ವರ್ಷಗಳ ಬಳಿಕ ಮತ್ತೊಮ್ಮೆ ಭಾರತೀಯ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದ್ದಾರೆ. ನ್ಯೂಝಿಲೆಂಡ್ ವೇಗಿಗಳ ಕರಾರುವಾಕ್ ದಾಳಿಗೆ ತಡಕಾಡಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಮೊದಲ 10 ಓವರ್​ಗಳಲ್ಲಿ ಕೇವಲ 13 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

4 / 5
ಅಲ್ಲದೆ ಭೋಜನಾ ವಿರಾಮದ ವೇಳೆಗೆ ಟೀಮ್ ಇಂಡಿಯಾ ಕೇವಲ 34 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್​ನಲ್ಲಿ ರಿಷಭ್ ಪಂತ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಲಂಚ್ ಬ್ರೇಕ್ ಬಳಿಕ ಇನಿಂಗ್ಸ್ ಮುಂದುವರೆಸಲಿದ್ದಾರೆ. ಇನ್ನು ನ್ಯೂಝಿಲೆಂಡ್ ಪರ ವಿಲಿಯಂ ಒರೋಕ್ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಅಲ್ಲದೆ ಭೋಜನಾ ವಿರಾಮದ ವೇಳೆಗೆ ಟೀಮ್ ಇಂಡಿಯಾ ಕೇವಲ 34 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್​ನಲ್ಲಿ ರಿಷಭ್ ಪಂತ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಲಂಚ್ ಬ್ರೇಕ್ ಬಳಿಕ ಇನಿಂಗ್ಸ್ ಮುಂದುವರೆಸಲಿದ್ದಾರೆ. ಇನ್ನು ನ್ಯೂಝಿಲೆಂಡ್ ಪರ ವಿಲಿಯಂ ಒರೋಕ್ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್