AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 5 ವಿಕೆಟ್​ಗಳ ಗೊಂಚಲು ಪಡೆದ ಜಡೇಜಾ; ಮೂವರು ದಿಗ್ಗಜರ ದಾಖಲೆ ಉಡೀಸ್

Ravindra Jadeja: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಐದು ವಿಕೆಟ್​ಗಳ ಗೊಂಚಲು ಪಡೆದ ರವೀಂದ್ರ ಜಡೇಜಾ, ಟೀಂ ಇಂಡಿಯಾದ ಮೂವರು ದಿಗ್ಗಜ ಬೌಲರ್​ಗಳ ದಾಖಲೆ ಮುರಿದಿದ್ದಾರೆ. ಇದೀಗ ಜಡೇಜಾ ಟೆಸ್ಟ್​ನಲ್ಲಿ ಅಧಿಕ ವಿಕೆಟ್ ಪಡೆದಿರುವ ಭಾರತದ ಐದನೇ ಬೌಲರ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Nov 01, 2024 | 4:08 PM

Share
ಭಾರತ ಹಾಗೂ ನ್ಯೂಜಿಲೆಂಡ್ ನಡವೆ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ 235 ರನ್​​ಗಳಿಗೆ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಿವೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ 5 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

ಭಾರತ ಹಾಗೂ ನ್ಯೂಜಿಲೆಂಡ್ ನಡವೆ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ 235 ರನ್​​ಗಳಿಗೆ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಿವೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ 5 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

1 / 5
ರವೀಂದ್ರ ಜಡೇಜಾ ಖಾತೆಗೆ ಜಾರಿದ ಬಿದ್ದ ವಿಕೆಟ್​ಗಳ ಪೈಕಿ, ವಿಲ್ ಯಂಗ್, ಟಾಮ್ ಬ್ಲಂಡೆಲ್, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ ಹಾಗೂ ಮ್ಯಾಟ್ ಹೆನ್ರಿ ಸೇರಿದ್ದಾರೆ. ದಿನದಾಟದ ಮೊದಲೆರಡು ಸೆಷನ್​ಗಳಲ್ಲಿ ಮೂರು ವಿಕೆಟ್ ಉರುಳಿಸಿದ್ದ ಜಡೇಜಾ, ಚಹಾ ವಿರಾಮದ ಮೊದಲು ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸಿದರು. ಈ ಮೂಲಕ ಜಡೇಜಾ ವಿಶಿಷ್ಟ ದಾಖಲೆಯನ್ನು ಮಾಡಿದರು.

ರವೀಂದ್ರ ಜಡೇಜಾ ಖಾತೆಗೆ ಜಾರಿದ ಬಿದ್ದ ವಿಕೆಟ್​ಗಳ ಪೈಕಿ, ವಿಲ್ ಯಂಗ್, ಟಾಮ್ ಬ್ಲಂಡೆಲ್, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ ಹಾಗೂ ಮ್ಯಾಟ್ ಹೆನ್ರಿ ಸೇರಿದ್ದಾರೆ. ದಿನದಾಟದ ಮೊದಲೆರಡು ಸೆಷನ್​ಗಳಲ್ಲಿ ಮೂರು ವಿಕೆಟ್ ಉರುಳಿಸಿದ್ದ ಜಡೇಜಾ, ಚಹಾ ವಿರಾಮದ ಮೊದಲು ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸಿದರು. ಈ ಮೂಲಕ ಜಡೇಜಾ ವಿಶಿಷ್ಟ ದಾಖಲೆಯನ್ನು ಮಾಡಿದರು.

2 / 5
ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸುವ ಮೂಲಕ ರವೀಂದ್ರ ಜಡೇಜಾ, ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಬೌಲರ್​ಗಳ ಪೈಕಿಯಲ್ಲಿ ಇದೀಗ ಐದನೇ ಸ್ಥಾನಕ್ಕೆ ಬಂದಿದ್ದಾರೆ. ಈ ಮೂಲಕ ಜಡೇಜಾ, ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಅವರನ್ನೂ ಸಹ ಹಿಂದಿಕ್ಕಿದ್ದಾರೆ.

ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸುವ ಮೂಲಕ ರವೀಂದ್ರ ಜಡೇಜಾ, ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಬೌಲರ್​ಗಳ ಪೈಕಿಯಲ್ಲಿ ಇದೀಗ ಐದನೇ ಸ್ಥಾನಕ್ಕೆ ಬಂದಿದ್ದಾರೆ. ಈ ಮೂಲಕ ಜಡೇಜಾ, ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಅವರನ್ನೂ ಸಹ ಹಿಂದಿಕ್ಕಿದ್ದಾರೆ.

3 / 5
ರವೀಂದ್ರ ಜಡೇಜಾ ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ 312 ವಿಕೆಟ್‌ಗಳನ್ನು ಉರುಳಿಸಿದ್ದು, ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪಟ್ಟಿಯಲ್ಲಿ ಜಹೀರ್ ಖಾನ್ ಹಾಗೂ ಇಶಾಂತ್​ ಶರ್ಮಾರನ್ನು ಹಿಂದಿಕ್ಕಿದ್ದಾರೆ. ಜಹೀರ್ ಮತ್ತು ಇಶಾಂತ್ ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ ತಲಾ 311 ವಿಕೆಟ್‌ಗಳನ್ನು ಪಡೆದಿದ್ದಾರೆ.

ರವೀಂದ್ರ ಜಡೇಜಾ ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ 312 ವಿಕೆಟ್‌ಗಳನ್ನು ಉರುಳಿಸಿದ್ದು, ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪಟ್ಟಿಯಲ್ಲಿ ಜಹೀರ್ ಖಾನ್ ಹಾಗೂ ಇಶಾಂತ್​ ಶರ್ಮಾರನ್ನು ಹಿಂದಿಕ್ಕಿದ್ದಾರೆ. ಜಹೀರ್ ಮತ್ತು ಇಶಾಂತ್ ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ ತಲಾ 311 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಹಾಗೆಯೇ ವಾಂಖೆಡೆ ಮೈದಾನದಲ್ಲಿ 5 ವಿಕೆಟ್​ಗಳ ಗೊಂಚಲು ಪಡೆದ ರವೀಂದ್ರ ಜಡೇಜಾ ಈ ಮೂಲಕ ಭಾರತದಲ್ಲಿ ಆಡಿದ ಟೆಸ್ಟ್‌ ಪಂದ್ಯದ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್‌ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಕಪಿಲ್ ದೇವ್‌ರನ್ನು ಹಿಂದಿಕ್ಕಿದ್ದಾರೆ. ಕಪಿಲ್ ಭಾರತದಲ್ಲಿ 11 ಬಾರಿ ಐದು ವಿಕೆಟ್ ಪಡೆದಿದ್ದರೆ, ಜಡೇಜಾ 12 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಹಾಗೆಯೇ ವಾಂಖೆಡೆ ಮೈದಾನದಲ್ಲಿ 5 ವಿಕೆಟ್​ಗಳ ಗೊಂಚಲು ಪಡೆದ ರವೀಂದ್ರ ಜಡೇಜಾ ಈ ಮೂಲಕ ಭಾರತದಲ್ಲಿ ಆಡಿದ ಟೆಸ್ಟ್‌ ಪಂದ್ಯದ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್‌ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಕಪಿಲ್ ದೇವ್‌ರನ್ನು ಹಿಂದಿಕ್ಕಿದ್ದಾರೆ. ಕಪಿಲ್ ಭಾರತದಲ್ಲಿ 11 ಬಾರಿ ಐದು ವಿಕೆಟ್ ಪಡೆದಿದ್ದರೆ, ಜಡೇಜಾ 12 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

5 / 5

Published On - 4:08 pm, Fri, 1 November 24

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ