AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 46 ರನ್​ಗೆ ಆಲೌಟ್; ಮಾಧ್ಯಮಗಳ ಮುಂದೆ ತಪ್ಪನ್ನು ಒಪ್ಪಿಕೊಂಡ ರೋಹಿತ್ ಶರ್ಮಾ

Rohit Sharma: ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಇಡೀ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಪಂದ್ಯದ ಎರಡನೇ ದಿನದಾಟದಂತ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Oct 17, 2024 | 7:49 PM

Share
ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಇಡೀ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಪಂದ್ಯದ ಎರಡನೇ ದಿನದಾಟದಂತ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಇಡೀ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಪಂದ್ಯದ ಎರಡನೇ ದಿನದಾಟದಂತ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

1 / 6
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್​ನ ಎರಡನೇ ದಿನದ ಪ್ರದರ್ಶನದ ಬಗ್ಗೆ ದಿನದಾಟ ಮುಗಿದ ಬಳಿಕ ರೋಹಿತ್ ಶರ್ಮಾ ಬಳಿ ಹಲವು ಪ್ರಶ್ನೆಗಳನ್ನು ಕೇಳಲಾಯಿತು.  ಇದರಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ ಕ್ರಮಾಂಕ ಬದಲಾವಣೆ, ರಿಷಬ್ ಪಂತ್ ಇಂಜುರಿ ಹಾಗೂ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಬಗ್ಗೆ ಪ್ರಶ್ನೆಗಳಿದ್ದವು.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್​ನ ಎರಡನೇ ದಿನದ ಪ್ರದರ್ಶನದ ಬಗ್ಗೆ ದಿನದಾಟ ಮುಗಿದ ಬಳಿಕ ರೋಹಿತ್ ಶರ್ಮಾ ಬಳಿ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಇದರಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ ಕ್ರಮಾಂಕ ಬದಲಾವಣೆ, ರಿಷಬ್ ಪಂತ್ ಇಂಜುರಿ ಹಾಗೂ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಬಗ್ಗೆ ಪ್ರಶ್ನೆಗಳಿದ್ದವು.

2 / 6
ಮೊದಲನೆಯದ್ದಾಗಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ, ಪಿಚ್ ಅನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾವು ಎಡವಿದೆವು. ಪಿಚ್ ಫ್ಲಾಟ್ ಆಗಿದ್ದು ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತದೆ ಎಂದು ಭಾವಿಸಿ ನಾನು ಮೊದಲು ಬ್ಯಾಟಿಂಗ್ ಆಯ್ದುಕೊಂಡೆ ಎಂದಿದ್ದಾರೆ.

ಮೊದಲನೆಯದ್ದಾಗಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ, ಪಿಚ್ ಅನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾವು ಎಡವಿದೆವು. ಪಿಚ್ ಫ್ಲಾಟ್ ಆಗಿದ್ದು ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತದೆ ಎಂದು ಭಾವಿಸಿ ನಾನು ಮೊದಲು ಬ್ಯಾಟಿಂಗ್ ಆಯ್ದುಕೊಂಡೆ ಎಂದಿದ್ದಾರೆ.

3 / 6
ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಲಾಗಿತ್ತು. ವಾಸ್ತವವಾಗಿ ಕೊಹ್ಲಿ ಟೆಸ್ಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿಯುತ್ತಾರೆ. ಆದರೆ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಶೂನ್ಯಕ್ಕೆ ಔಟಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್,​ ವಿರಾಟ್ ಕೊಹ್ಲಿ ಅವರೇ ಈ ನಿರ್ಧಾರ ತೆಗೆದುಕೊಂಡಿದ್ದರಿಂದ ಅವರ ಬ್ಯಾಟಿಂಗ್ ಕ್ರಮಾಂಕ ಬದಲಿಸಲಾಯಿತು ಎಂದಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಲಾಗಿತ್ತು. ವಾಸ್ತವವಾಗಿ ಕೊಹ್ಲಿ ಟೆಸ್ಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿಯುತ್ತಾರೆ. ಆದರೆ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಶೂನ್ಯಕ್ಕೆ ಔಟಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್,​ ವಿರಾಟ್ ಕೊಹ್ಲಿ ಅವರೇ ಈ ನಿರ್ಧಾರ ತೆಗೆದುಕೊಂಡಿದ್ದರಿಂದ ಅವರ ಬ್ಯಾಟಿಂಗ್ ಕ್ರಮಾಂಕ ಬದಲಿಸಲಾಯಿತು ಎಂದಿದ್ದಾರೆ.

4 / 6
ಇನ್ನು ಪಂದ್ಯದ ವೇಳೆ ಪಂತ್ ಅವರ ಕಾಲಿಗೆ ಚೆಂಡು ಬಡಿದು ಮೈದಾನದಿಂದ ಹೊರಹೊಗಿದ್ದರು. ಈ ಬಗ್ಗೆ ಮಾಹಿತಿ ನೀಡಿದ ರೋಹಿತ್, ಪಂತ್ ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ಕಾಲಿಗೆ ಚೆಂಡು ಬಡಿದಿದೆ. ಹೀಗಾಗಿ ಪಂತ್ ಅವರ ಕಾಲು ಊದಿಕೊಂಡಿದ್ದು, ಈ ಗಾಯದ ಗಂಭೀರತೆ ನಂತರ ತಿಳಿಯಲಿದೆ ಎಂದಿದ್ದಾರೆ. ​

ಇನ್ನು ಪಂದ್ಯದ ವೇಳೆ ಪಂತ್ ಅವರ ಕಾಲಿಗೆ ಚೆಂಡು ಬಡಿದು ಮೈದಾನದಿಂದ ಹೊರಹೊಗಿದ್ದರು. ಈ ಬಗ್ಗೆ ಮಾಹಿತಿ ನೀಡಿದ ರೋಹಿತ್, ಪಂತ್ ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ಕಾಲಿಗೆ ಚೆಂಡು ಬಡಿದಿದೆ. ಹೀಗಾಗಿ ಪಂತ್ ಅವರ ಕಾಲು ಊದಿಕೊಂಡಿದ್ದು, ಈ ಗಾಯದ ಗಂಭೀರತೆ ನಂತರ ತಿಳಿಯಲಿದೆ ಎಂದಿದ್ದಾರೆ. ​

5 / 6
ಮೊದಲ ಇನ್ನಿಂಗ್ಸ್​ನಲ್ಲಿ ಸತತ ವಿಕೆಟ್ ಪತನದ ನಡುವೆಯೂ ತಂಡದ ಕೆಲವರು ಕೆಟ ಶಾಟ್ ಆಡಿ ವಿಕೆಟ್ ಒಪ್ಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್, ಭಾರತದ ಬ್ಯಾಟ್ಸ್‌ಮನ್‌ಗಳ ಶಾಟ್ ಆಯ್ಕೆ ಸರಿ ಇರಲಿಲ್ಲ. ಇದು ತಂಡಕ್ಕೆ ಕೆಟ್ಟ ದಿನವಾಗಿತ್ತು. ಕೆಲವೊಮ್ಮೆ ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದು ಅಂದುಕೊಂಡಂತೆ ನಡೆಯುವುದಿಲ್ಲ ಎಂದು ರೋಹಿತ್ ಹೇಳಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ಸತತ ವಿಕೆಟ್ ಪತನದ ನಡುವೆಯೂ ತಂಡದ ಕೆಲವರು ಕೆಟ ಶಾಟ್ ಆಡಿ ವಿಕೆಟ್ ಒಪ್ಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್, ಭಾರತದ ಬ್ಯಾಟ್ಸ್‌ಮನ್‌ಗಳ ಶಾಟ್ ಆಯ್ಕೆ ಸರಿ ಇರಲಿಲ್ಲ. ಇದು ತಂಡಕ್ಕೆ ಕೆಟ್ಟ ದಿನವಾಗಿತ್ತು. ಕೆಲವೊಮ್ಮೆ ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದು ಅಂದುಕೊಂಡಂತೆ ನಡೆಯುವುದಿಲ್ಲ ಎಂದು ರೋಹಿತ್ ಹೇಳಿದ್ದಾರೆ.

6 / 6
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು