AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರನ್​ ರಟ್​ನಲ್ಲಿ ಸಿಲುಕಿ ಒದ್ದಾಡುತ್ತಿರುವ ರೋಹಿತ್ ಶರ್ಮಾ

IND vs NZ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಅತ್ತ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 235 ರನ್​ ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Nov 02, 2024 | 10:08 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೂ ಹಿಟ್​ಮ್ಯಾನ್ ವಿಫಲರಾಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 18 ರನ್​ಗಳಿಸಿ ಔಟಾಗಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೂ ಹಿಟ್​ಮ್ಯಾನ್ ವಿಫಲರಾಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 18 ರನ್​ಗಳಿಸಿ ಔಟಾಗಿದ್ದಾರೆ.

1 / 5
ಇದರೊಂದಿಗೆ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ ಅತ್ಯಧಿಕ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ ಭಾರತೀಯ ನಾಯಕನೆಂಬ ಹೀನಾಯ ದಾಖಲೆ ಹಿಟ್​ಮ್ಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

ಇದರೊಂದಿಗೆ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ ಅತ್ಯಧಿಕ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ ಭಾರತೀಯ ನಾಯಕನೆಂಬ ಹೀನಾಯ ದಾಖಲೆ ಹಿಟ್​ಮ್ಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

2 / 5
ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1984 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿದ್ದ ಗವಾಸ್ಕರ್, ತವರಿನಲ್ಲಿ ಆಡಿದ 8 ಇನಿಂಗ್ಸ್​ಗಳಲ್ಲಿ ಕೇವಲ 140 ರನ್ ಕಲೆಹಾಕಿದ್ದರು. ಅಂದರೆ 17.50 ರ ಸರಾಸರಿಯಲ್ಲಿ ಬ್ಯಾಟಿಂಗ್ ಪ್ರದರ್ಶಿಸಿ ಭಾರೀ ಟೀಕೆಗೆ ಗುರಿಯಾಗಿದ್ದರು.

ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1984 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿದ್ದ ಗವಾಸ್ಕರ್, ತವರಿನಲ್ಲಿ ಆಡಿದ 8 ಇನಿಂಗ್ಸ್​ಗಳಲ್ಲಿ ಕೇವಲ 140 ರನ್ ಕಲೆಹಾಕಿದ್ದರು. ಅಂದರೆ 17.50 ರ ಸರಾಸರಿಯಲ್ಲಿ ಬ್ಯಾಟಿಂಗ್ ಪ್ರದರ್ಶಿಸಿ ಭಾರೀ ಟೀಕೆಗೆ ಗುರಿಯಾಗಿದ್ದರು.

3 / 5
ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಸುನಿಲ್ ಗವಾಸ್ಕರ್​ಗಿಂತಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ವರ್ಷ ತವರಿನಲ್ಲಿ ಆಡಿದ 9 ಇನಿಂಗ್ಸ್​ಗಳಲ್ಲಿ ಹಿಟ್​ಮ್ಯಾನ್ ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅಂದರೆ ಕೇವಲ 13.55 ಸರಾಸರಿಯಲ್ಲಿ ರನ್ ಕಲೆಹಾಕಿ ತವರಿನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ನಾಯಕ ಎನಿಸಿಕೊಂಡಿದ್ದಾರೆ.

ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಸುನಿಲ್ ಗವಾಸ್ಕರ್​ಗಿಂತಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ವರ್ಷ ತವರಿನಲ್ಲಿ ಆಡಿದ 9 ಇನಿಂಗ್ಸ್​ಗಳಲ್ಲಿ ಹಿಟ್​ಮ್ಯಾನ್ ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅಂದರೆ ಕೇವಲ 13.55 ಸರಾಸರಿಯಲ್ಲಿ ರನ್ ಕಲೆಹಾಕಿ ತವರಿನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ನಾಯಕ ಎನಿಸಿಕೊಂಡಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕನ ದಾಖಲೆ ಇಂಗ್ಲೆಂಡ್​ನ ಮಾಜಿ ಕ್ಯಾಪ್ಟನ್ ನಾಸಿರ್ ಹುಸೇನ್ ಹೆಸರಿನಲ್ಲಿದೆ. 2000 ರಲ್ಲಿ ನಾಸಿರ್ ಹುಸೇನ್ ತವರಿನಲ್ಲಿ ಆಡಿದ 10 ಇನಿಂಗ್ಸ್​ಗಳಿಂದ ಕೇವಲ 92 ರನ್​ ಗಳಿಸಿ ಈ ಕಳಪೆ ದಾಖಲೆ ಬರೆದಿದ್ದರು. ಇದೀಗ 9 ಇನಿಂಗ್ಸ್​ಗಳಿಂದ 122 ರನ್ ಪೇರಿಸಿ ಈ ಅನಗತ್ಯ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೈಫಲ್ಯ ಮುಂದುವರೆದರೆ ನಾಸಿರ್ ಹುಸೇನ್ ಹೆಸರಿನಲ್ಲಿರುವ ಅತ್ಯಂತ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಬಹುದು.

ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕನ ದಾಖಲೆ ಇಂಗ್ಲೆಂಡ್​ನ ಮಾಜಿ ಕ್ಯಾಪ್ಟನ್ ನಾಸಿರ್ ಹುಸೇನ್ ಹೆಸರಿನಲ್ಲಿದೆ. 2000 ರಲ್ಲಿ ನಾಸಿರ್ ಹುಸೇನ್ ತವರಿನಲ್ಲಿ ಆಡಿದ 10 ಇನಿಂಗ್ಸ್​ಗಳಿಂದ ಕೇವಲ 92 ರನ್​ ಗಳಿಸಿ ಈ ಕಳಪೆ ದಾಖಲೆ ಬರೆದಿದ್ದರು. ಇದೀಗ 9 ಇನಿಂಗ್ಸ್​ಗಳಿಂದ 122 ರನ್ ಪೇರಿಸಿ ಈ ಅನಗತ್ಯ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೈಫಲ್ಯ ಮುಂದುವರೆದರೆ ನಾಸಿರ್ ಹುಸೇನ್ ಹೆಸರಿನಲ್ಲಿರುವ ಅತ್ಯಂತ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​