AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರನ್​ ರಟ್​ನಲ್ಲಿ ಸಿಲುಕಿ ಒದ್ದಾಡುತ್ತಿರುವ ರೋಹಿತ್ ಶರ್ಮಾ

IND vs NZ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಅತ್ತ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 235 ರನ್​ ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Nov 02, 2024 | 10:08 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೂ ಹಿಟ್​ಮ್ಯಾನ್ ವಿಫಲರಾಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 18 ರನ್​ಗಳಿಸಿ ಔಟಾಗಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೂ ಹಿಟ್​ಮ್ಯಾನ್ ವಿಫಲರಾಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 18 ರನ್​ಗಳಿಸಿ ಔಟಾಗಿದ್ದಾರೆ.

1 / 5
ಇದರೊಂದಿಗೆ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ ಅತ್ಯಧಿಕ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ ಭಾರತೀಯ ನಾಯಕನೆಂಬ ಹೀನಾಯ ದಾಖಲೆ ಹಿಟ್​ಮ್ಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

ಇದರೊಂದಿಗೆ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ ಅತ್ಯಧಿಕ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ ಭಾರತೀಯ ನಾಯಕನೆಂಬ ಹೀನಾಯ ದಾಖಲೆ ಹಿಟ್​ಮ್ಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

2 / 5
ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1984 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿದ್ದ ಗವಾಸ್ಕರ್, ತವರಿನಲ್ಲಿ ಆಡಿದ 8 ಇನಿಂಗ್ಸ್​ಗಳಲ್ಲಿ ಕೇವಲ 140 ರನ್ ಕಲೆಹಾಕಿದ್ದರು. ಅಂದರೆ 17.50 ರ ಸರಾಸರಿಯಲ್ಲಿ ಬ್ಯಾಟಿಂಗ್ ಪ್ರದರ್ಶಿಸಿ ಭಾರೀ ಟೀಕೆಗೆ ಗುರಿಯಾಗಿದ್ದರು.

ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1984 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿದ್ದ ಗವಾಸ್ಕರ್, ತವರಿನಲ್ಲಿ ಆಡಿದ 8 ಇನಿಂಗ್ಸ್​ಗಳಲ್ಲಿ ಕೇವಲ 140 ರನ್ ಕಲೆಹಾಕಿದ್ದರು. ಅಂದರೆ 17.50 ರ ಸರಾಸರಿಯಲ್ಲಿ ಬ್ಯಾಟಿಂಗ್ ಪ್ರದರ್ಶಿಸಿ ಭಾರೀ ಟೀಕೆಗೆ ಗುರಿಯಾಗಿದ್ದರು.

3 / 5
ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಸುನಿಲ್ ಗವಾಸ್ಕರ್​ಗಿಂತಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ವರ್ಷ ತವರಿನಲ್ಲಿ ಆಡಿದ 9 ಇನಿಂಗ್ಸ್​ಗಳಲ್ಲಿ ಹಿಟ್​ಮ್ಯಾನ್ ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅಂದರೆ ಕೇವಲ 13.55 ಸರಾಸರಿಯಲ್ಲಿ ರನ್ ಕಲೆಹಾಕಿ ತವರಿನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ನಾಯಕ ಎನಿಸಿಕೊಂಡಿದ್ದಾರೆ.

ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಸುನಿಲ್ ಗವಾಸ್ಕರ್​ಗಿಂತಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ವರ್ಷ ತವರಿನಲ್ಲಿ ಆಡಿದ 9 ಇನಿಂಗ್ಸ್​ಗಳಲ್ಲಿ ಹಿಟ್​ಮ್ಯಾನ್ ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅಂದರೆ ಕೇವಲ 13.55 ಸರಾಸರಿಯಲ್ಲಿ ರನ್ ಕಲೆಹಾಕಿ ತವರಿನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ನಾಯಕ ಎನಿಸಿಕೊಂಡಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕನ ದಾಖಲೆ ಇಂಗ್ಲೆಂಡ್​ನ ಮಾಜಿ ಕ್ಯಾಪ್ಟನ್ ನಾಸಿರ್ ಹುಸೇನ್ ಹೆಸರಿನಲ್ಲಿದೆ. 2000 ರಲ್ಲಿ ನಾಸಿರ್ ಹುಸೇನ್ ತವರಿನಲ್ಲಿ ಆಡಿದ 10 ಇನಿಂಗ್ಸ್​ಗಳಿಂದ ಕೇವಲ 92 ರನ್​ ಗಳಿಸಿ ಈ ಕಳಪೆ ದಾಖಲೆ ಬರೆದಿದ್ದರು. ಇದೀಗ 9 ಇನಿಂಗ್ಸ್​ಗಳಿಂದ 122 ರನ್ ಪೇರಿಸಿ ಈ ಅನಗತ್ಯ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೈಫಲ್ಯ ಮುಂದುವರೆದರೆ ನಾಸಿರ್ ಹುಸೇನ್ ಹೆಸರಿನಲ್ಲಿರುವ ಅತ್ಯಂತ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಬಹುದು.

ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕನ ದಾಖಲೆ ಇಂಗ್ಲೆಂಡ್​ನ ಮಾಜಿ ಕ್ಯಾಪ್ಟನ್ ನಾಸಿರ್ ಹುಸೇನ್ ಹೆಸರಿನಲ್ಲಿದೆ. 2000 ರಲ್ಲಿ ನಾಸಿರ್ ಹುಸೇನ್ ತವರಿನಲ್ಲಿ ಆಡಿದ 10 ಇನಿಂಗ್ಸ್​ಗಳಿಂದ ಕೇವಲ 92 ರನ್​ ಗಳಿಸಿ ಈ ಕಳಪೆ ದಾಖಲೆ ಬರೆದಿದ್ದರು. ಇದೀಗ 9 ಇನಿಂಗ್ಸ್​ಗಳಿಂದ 122 ರನ್ ಪೇರಿಸಿ ಈ ಅನಗತ್ಯ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೈಫಲ್ಯ ಮುಂದುವರೆದರೆ ನಾಸಿರ್ ಹುಸೇನ್ ಹೆಸರಿನಲ್ಲಿರುವ ಅತ್ಯಂತ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಬಹುದು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ