AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ರೋಹಿತ್ ಶರ್ಮಾ ‘ಮಿಷನ್ 89’: ಹೀಗಾದ್ರೆ ಪಾಕ್​ಗೆ ಸೋಲು ಖಚಿತ..!

IND vs PAK: ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಆಗಸ್ಟ್ 28 ರಂದು ನಡೆಯಲಿದೆ. ದುಬೈ ಇಂಟರ್​​ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Edited By: |

Updated on: Aug 25, 2022 | 12:55 PM

Share
ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಆಗಸ್ಟ್ 28 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಭರ್ಜರಿ ಸಿದ್ದತೆಯಲ್ಲಿದೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ ವಿಶೇಷ ಯೋಜನೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರಂಭಿಕರಾಗಿ ಆಡಲಿರುವ ಹಿಟ್​ಮ್ಯಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಪಾಕ್ ತಂಡಕ್ಕೆ ಸೋಲು ಖಚಿತ ಎನ್ನಬಹುದು. ಮತ್ತೊಂದೆಡೆ ಹೊಸ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಲಿದೆ. ಅದರಂತೆ ಮಿಷನ್ 89 ಯೋಜನೆಯೊಂದಿಗೆ ಹಿಟ್​ಮ್ಯಾನ್ ಕಣಕ್ಕಿಳಿಯಲಿದ್ದಾರೆ. ಏನಿದು ಮಿಷನ್ 89...?

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಆಗಸ್ಟ್ 28 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಭರ್ಜರಿ ಸಿದ್ದತೆಯಲ್ಲಿದೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ ವಿಶೇಷ ಯೋಜನೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರಂಭಿಕರಾಗಿ ಆಡಲಿರುವ ಹಿಟ್​ಮ್ಯಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಪಾಕ್ ತಂಡಕ್ಕೆ ಸೋಲು ಖಚಿತ ಎನ್ನಬಹುದು. ಮತ್ತೊಂದೆಡೆ ಹೊಸ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಲಿದೆ. ಅದರಂತೆ ಮಿಷನ್ 89 ಯೋಜನೆಯೊಂದಿಗೆ ಹಿಟ್​ಮ್ಯಾನ್ ಕಣಕ್ಕಿಳಿಯಲಿದ್ದಾರೆ. ಏನಿದು ಮಿಷನ್ 89...?

1 / 5
ಮಿಷನ್ 89 ರೋಹಿತ್ ಶರ್ಮಾ ಮುಂದಿರುವ ಟಾರ್ಗೆಟ್. ಅಂದರೆ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ 89 ರನ್ ಬಾರಿಸಿದರೆ ಏಷ್ಯಾಕಪ್​ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎನಿಸಿಕೊಳ್ಳಲಿದ್ದಾರೆ. ಇದೀಗ ಅದೇ ಟಾರ್ಗೆಟ್​ನಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದರೆ ಅತ್ತ ಪಾಕ್ ವಿರುದ್ದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಬಹುದು. ಅಲ್ಲದೆ ಈ ಮೂಲಕ ಗೆಲ್ಲುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

ಮಿಷನ್ 89 ರೋಹಿತ್ ಶರ್ಮಾ ಮುಂದಿರುವ ಟಾರ್ಗೆಟ್. ಅಂದರೆ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ 89 ರನ್ ಬಾರಿಸಿದರೆ ಏಷ್ಯಾಕಪ್​ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎನಿಸಿಕೊಳ್ಳಲಿದ್ದಾರೆ. ಇದೀಗ ಅದೇ ಟಾರ್ಗೆಟ್​ನಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದರೆ ಅತ್ತ ಪಾಕ್ ವಿರುದ್ದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಬಹುದು. ಅಲ್ಲದೆ ಈ ಮೂಲಕ ಗೆಲ್ಲುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

2 / 5
ಪ್ರಸ್ತುತ, ಏಷ್ಯಾ ಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಅವರು 23 ಪಂದ್ಯಗಳಲ್ಲಿ 2 ಶತಕ ಮತ್ತು 7 ಅರ್ಧ ಶತಕಗಳೊಂದಿಗೆ 971 ರನ್ ಗಳಿಸಿದ್ದಾರೆ.

ಪ್ರಸ್ತುತ, ಏಷ್ಯಾ ಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಅವರು 23 ಪಂದ್ಯಗಳಲ್ಲಿ 2 ಶತಕ ಮತ್ತು 7 ಅರ್ಧ ಶತಕಗಳೊಂದಿಗೆ 971 ರನ್ ಗಳಿಸಿದ್ದಾರೆ.

3 / 5
27 ಪಂದ್ಯಗಳಲ್ಲಿ 1 ಶತಕ ಮತ್ತು 7 ಅರ್ಧಶತಕಗಳೊಂದಿಗೆ 883 ರನ್ ಗಳಿಸಿರುವ ರೋಹಿತ್ ಶರ್ಮಾ ಭಾರತೀಯ ರನ್‌ ಸರದಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪಾಕ್ ವಿರುದ್ದದ ಪಂದ್ಯದಲ್ಲಿ 89 ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ಸಚಿನ್ ಅವರ ದಾಖಲೆಯನ್ನು ಹಿಂದಿಕ್ಕಬಹುದು.

27 ಪಂದ್ಯಗಳಲ್ಲಿ 1 ಶತಕ ಮತ್ತು 7 ಅರ್ಧಶತಕಗಳೊಂದಿಗೆ 883 ರನ್ ಗಳಿಸಿರುವ ರೋಹಿತ್ ಶರ್ಮಾ ಭಾರತೀಯ ರನ್‌ ಸರದಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪಾಕ್ ವಿರುದ್ದದ ಪಂದ್ಯದಲ್ಲಿ 89 ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ಸಚಿನ್ ಅವರ ದಾಖಲೆಯನ್ನು ಹಿಂದಿಕ್ಕಬಹುದು.

4 / 5
ಇನ್ನು ಶ್ರೀಲಂಕಾದ ಸನತ್ ಜಯಸೂರ್ಯ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜಯಸೂರ್ಯ 1220 ರನ್​ಗಳಿಸಿದರೆ,  ಶ್ರೀಲಂಕಾದ ಕುಮಾರ ಸಂಗಕ್ಕಾರ 1075 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.  ಇನ್ನು ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಪ್ರಸ್ತುತ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಶ್ರೀಲಂಕಾದ ಸನತ್ ಜಯಸೂರ್ಯ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜಯಸೂರ್ಯ 1220 ರನ್​ಗಳಿಸಿದರೆ, ಶ್ರೀಲಂಕಾದ ಕುಮಾರ ಸಂಗಕ್ಕಾರ 1075 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಪ್ರಸ್ತುತ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ