
ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಕಣಕ್ಕಿಳಿದಿರಲಿಲ್ಲ. ಈ ಪಂದ್ಯದ ಟಾಸ್ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೀಮ್ನಲ್ಲಿ 3 ಬದಲಾವಣೆ ಮಾಡಿರುವುದು ಖಚಿತಪಡಿಸಿದ್ದರು.

ಅದರಂತೆ ಅವೇಶ್ ಖಾನ್ ಬದಲಿಗೆ ರವಿ ಬಿಷ್ಣೋಯ್ ಹಾಗೂ ರವೀಂದ್ರ ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಾಣಿಸಿಕೊಂಡಿದ್ದರು. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಪಾಂಡ್ಯ ಬದಲಿಗೆ ಪಂತ್ ಕಾಣಿಸಿಕೊಂಡಿದ್ದರು. ಆದರೆ ಪಾಕ್ ವಿರುದ್ದ ಪಾಂಡ್ಯ ತಂಡಕ್ಕೆ ಮರಳಿದ್ದು ಹೀಗಾಗಿ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಡಲಾಯಿತು.

ಇಲ್ಲಿ ಡಿಕೆ ಅವರನ್ನು ಕೈ ಬಿಡಲು ಮುಖ್ಯ ಕಾರಣ ಎಡಗೈ ಬ್ಯಾಟ್ಸ್ಮನ್ನ ಆಯ್ಕೆ. ಅಂದರೆ ತಂಡದಲ್ಲಿ ಏಕೈಕ ಎಡಗೈ ಬ್ಯಾಟ್ಸ್ಮನ್ ಆಗಿದ್ದ ಜಡೇಜಾ ಗಾಯಗೊಂಡು ಹೊರಬಿದ್ದಿದ್ದರು. ಹೀಗಾಗಿ ಮತ್ತೋರ್ವ ಎಡಗೈ ಆಟಗಾರನನ್ನು ಆಡಿಸಬೇಕಾದ ಅನಿವಾರ್ಯತೆ ಇತ್ತು.

ಹೀಗಾಗಿ ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಆಯ್ಕೆ ಮಾಡಲಾಗಿದೆ. ಇದರಿಂದ ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿಯಬೇಕಾಯಿತು.

ಪಾಕ್ ವಿರುದ್ಧ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ XI: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್