AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 121 ವರ್ಷಗಳ ಬಳಿಕ 23 ವಿಕೆಟ್ ಪತನ..!

IND vs SA 2nd Test: ಈ ಭರ್ಜರಿ ಪ್ರದರ್ಶನದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ರೋಹಿತ್ ಶರ್ಮಾ (39), ಶುಭ್​ಮನ್ ಗಿಲ್ (36) ಹಾಗೂ ವಿರಾಟ್ ಕೊಹ್ಲಿಯ (46) ಉತ್ತಮ ಬ್ಯಾಟಿಂಗ್​ನಿಂದಾಗಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತ್ತು.

TV9 Web
| Edited By: |

Updated on: Jan 04, 2024 | 6:28 AM

Share
ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ (IND vs SA) ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಬೌಲರ್​ಗಳು ಪರಾಕ್ರಮ ಮೆರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ (IND vs SA) ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಬೌಲರ್​ಗಳು ಪರಾಕ್ರಮ ಮೆರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ ದಾಳಿಗೆ ತತ್ತರಿಸಿತು. 9 ಓವರ್​ಗಳನ್ನು ಎಸೆದ ಸಿರಾಜ್ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡ ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ ದಾಳಿಗೆ ತತ್ತರಿಸಿತು. 9 ಓವರ್​ಗಳನ್ನು ಎಸೆದ ಸಿರಾಜ್ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡ ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

2 / 7
ಈ ಭರ್ಜರಿ ಪ್ರದರ್ಶನದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ರೋಹಿತ್ ಶರ್ಮಾ (39), ಶುಭ್​ಮನ್ ಗಿಲ್ (36) ಹಾಗೂ ವಿರಾಟ್ ಕೊಹ್ಲಿಯ (46) ಉತ್ತಮ ಬ್ಯಾಟಿಂಗ್​ನಿಂದಾಗಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತ್ತು.

ಈ ಭರ್ಜರಿ ಪ್ರದರ್ಶನದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ರೋಹಿತ್ ಶರ್ಮಾ (39), ಶುಭ್​ಮನ್ ಗಿಲ್ (36) ಹಾಗೂ ವಿರಾಟ್ ಕೊಹ್ಲಿಯ (46) ಉತ್ತಮ ಬ್ಯಾಟಿಂಗ್​ನಿಂದಾಗಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತ್ತು.

3 / 7
ಆದರೆ ಕೆಎಲ್ ರಾಹುಲ್ (8) ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ 11 ಎಸೆತಗಳಲ್ಲಿ ಒಂದೇ ಒಂದು ರನ್ ಕಲೆಹಾಕದೇ 6 ವಿಕೆಟ್ ಕಳೆದುಕೊಂಡಿತು. ಪರಿಣಾಮ ಭಾರತ ತಂಡವು 153 ರನ್​ಗಳಿಗೆ ತನ್ನ ಮೊದಲ ಇನಿಂಗ್ಸ್ ಅಂತ್ಯಗೊಳಿಸಿತು.

ಆದರೆ ಕೆಎಲ್ ರಾಹುಲ್ (8) ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ 11 ಎಸೆತಗಳಲ್ಲಿ ಒಂದೇ ಒಂದು ರನ್ ಕಲೆಹಾಕದೇ 6 ವಿಕೆಟ್ ಕಳೆದುಕೊಂಡಿತು. ಪರಿಣಾಮ ಭಾರತ ತಂಡವು 153 ರನ್​ಗಳಿಗೆ ತನ್ನ ಮೊದಲ ಇನಿಂಗ್ಸ್ ಅಂತ್ಯಗೊಳಿಸಿತು.

4 / 7
ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆ 3 ವಿಕೆಟ್ ಕಳೆದುಕೊಂಡು 62 ರನ್ ಕಲೆಹಾಕಿದೆ. ಅಂದರೆ ಮೊದಲ ದಿನದಾಟದಲ್ಲೇ ಉಭಯ ತಂಡಗಳು ಒಟ್ಟು 23 ವಿಕೆಟ್ ಕಳೆದುಕೊಂಡಿದೆ.

ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆ 3 ವಿಕೆಟ್ ಕಳೆದುಕೊಂಡು 62 ರನ್ ಕಲೆಹಾಕಿದೆ. ಅಂದರೆ ಮೊದಲ ದಿನದಾಟದಲ್ಲೇ ಉಭಯ ತಂಡಗಳು ಒಟ್ಟು 23 ವಿಕೆಟ್ ಕಳೆದುಕೊಂಡಿದೆ.

5 / 7
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೀಗೆ ಸಂಭವಿಸಿರುವುದು ಕೇವಲ 2 ಬಾರಿ ಮಾತ್ರ. 1902 ರಲ್ಲಿ ಮೆಲ್ಬೋರ್ನ್​​ನಲ್ಲಿ ನಡೆದ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ಒಟ್ಟು 25 ವಿಕೆಟ್​ಗಳು ಪತನವಾಗಿತ್ತು.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೀಗೆ ಸಂಭವಿಸಿರುವುದು ಕೇವಲ 2 ಬಾರಿ ಮಾತ್ರ. 1902 ರಲ್ಲಿ ಮೆಲ್ಬೋರ್ನ್​​ನಲ್ಲಿ ನಡೆದ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ಒಟ್ಟು 25 ವಿಕೆಟ್​ಗಳು ಪತನವಾಗಿತ್ತು.

6 / 7
ಇದೀಗ ಬರೋಬ್ಬರಿ 121 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ದಿನದಾಟದಲ್ಲೇ 23 ವಿಕೆಟ್​ಗಳು ಉರುಳಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನ ಮೊದಲ ದಿನವೇ 22+ ವಿಕೆಟ್ ಕಬಳಿಸಿ ಭಾರತ-ಸೌತ್ ಆಫ್ರಿಕಾ ಬೌಲರ್​ಗಳು ಇತಿಹಾಸವನ್ನು ಪುನರಾವರ್ತಿಸಿದ್ದಾರೆ.

ಇದೀಗ ಬರೋಬ್ಬರಿ 121 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ದಿನದಾಟದಲ್ಲೇ 23 ವಿಕೆಟ್​ಗಳು ಉರುಳಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನ ಮೊದಲ ದಿನವೇ 22+ ವಿಕೆಟ್ ಕಬಳಿಸಿ ಭಾರತ-ಸೌತ್ ಆಫ್ರಿಕಾ ಬೌಲರ್​ಗಳು ಇತಿಹಾಸವನ್ನು ಪುನರಾವರ್ತಿಸಿದ್ದಾರೆ.

7 / 7
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!