AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಅರ್ಷದೀಪ್ ಸಿಂಗ್..!

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 17, 2023 | 5:38 PM

Share
ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

2 / 8
ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

3 / 8
ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

4 / 8
ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

5 / 8
ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

6 / 8
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

7 / 8
ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ