AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

IND vs SA: ಜೂನ್ 12 ರ ಭಾನುವಾರ ಕಟಕ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ 20 ಸರಣಿಯ ಎರಡನೇ ಪಂದ್ಯ ನಡೆಯಲಿದ್ದು, ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಲು ಪ್ರಯತ್ನಿಸಲಿದೆ.

ಪೃಥ್ವಿಶಂಕರ
|

Updated on:Jun 11, 2022 | 8:55 PM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಒಡಿಶಾದ ಕಟಕ್‌ನಲ್ಲಿ ಭಾನುವಾರ ಜೂನ್ 12 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಕಟಕ್ ತಲುಪಿದ್ದು, ತಮ್ಮ ಸಿದ್ಧತೆಯಲ್ಲಿ ನಿರತವಾಗಿವೆ. ಕಟಕ್‌ನಲ್ಲಿ ಈ ಪಂದ್ಯದ ಬಗ್ಗೆ ರೋಮಾಂಚನವಿದೆ ಮತ್ತು ಇದು ಟಿಕೆಟ್ ಮಾರಾಟದಿಂದ ಟೀಮ್ ಇಂಡಿಯಾದ ಅಭ್ಯಾಸದವರೆಗೆ ಗೋಚರಿಸಿತು, ಅದು ಎಷ್ಟರಮಟ್ಟಿಗೆ ಎಂದರೆ ಕೇವಲ ಮ್ಯಾಚ್​ ಪ್ರಾಕ್ಟೀಸ್​ಗೇನೆ ಇಡೀ ಕ್ರೀಡಾಂಗಣ ಫುಲ್ ಭರ್ತಿಯಾಗಿತ್ತು.

1 / 5
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಜೂನ್ 11 ರ ಶನಿವಾರದಂದು ಪಂದ್ಯಕ್ಕೆ ಒಂದು ದಿನ ಮೊದಲು ಟೀಮ್ ಇಂಡಿಯಾದ ಅಭ್ಯಾಸದ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ, ಇದರಲ್ಲಿ ಸಾವಿರಾರು ಪ್ರೇಕ್ಷಕರು ಕ್ರೀಡಾಂಗಣದ ಆಸನಗಳಲ್ಲಿ ಕುಳಿತಿರುವುದು ಕಂಡುಬಂದಿದೆ.

2 / 5
IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಈ ಸಮಯದಲ್ಲಿ, ಪ್ರೇಕ್ಷಕರು ಟೀಂ ಇಂಡಿಯಾ ನಾಯಕ ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಅವರಂತಹ ಸ್ಟಾರ್‌ಗಳನ್ನು ತುಂಬಾ ಹತ್ತಿರದಿಂದ ನೋಡಿದರು ಮತ್ತು ಅವರನ್ನು ಪ್ರೋತ್ಸಾಹಿಸಿದರು. ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರದಂದು ಹಬ್ಬದ ವಾತಾವರಣ ಕಡಿಮೆಯೇನಿಲ್ಲ ಎಂಬುದನ್ನು ಈ ಜನಸಂದಣಿಯಿಂದ ಊಹಿಸಬಹುದು.

3 / 5
IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಸುಮಾರು ಎರಡೂವರೆ ವರ್ಷಗಳ ನಂತರ ಕಟಕ್‌ನಲ್ಲಿ ಅಂತರಾಷ್ಟ್ರೀಯ ಪಂದ್ಯ ನಡೆಯಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯ ಪ್ರೇಕ್ಷಕರಲ್ಲಿ ಭಾರೀ ಉತ್ಸಾಹ ಮೂಡಿದೆ. ಈ ಉತ್ಸಾಹವು ಕೆಲವು ದಿನಗಳ ಹಿಂದೆ ಟಿಕೆಟ್ ಮಾರಾಟದ ಸಮಯದಲ್ಲಿ ಗೊಂದಲಕ್ಕೆ ತಿರುಗಿತ್ತು, ಇದರಿಂದಾಗಿ ಪೊಲೀಸರು ಲಾಠಿ ಬಲವನ್ನು ಬಳಸಬೇಕಾಯಿತು.

4 / 5
IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಟೀಂ ಇಂಡಿಯಾ ಮಾತ್ರವಲ್ಲ, ದಕ್ಷಿಣ ಆಫ್ರಿಕಾ ತಂಡವೂ ಈ ಮೊದಲು ಬಾರಾಬತಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸಿ ಪರಿಸ್ಥಿತಿಗಳನ್ನು ಅವಲೋಕಿಸಿತು. ದೆಹಲಿಯಲ್ಲಿ ನಡೆದ ಮೊದಲ ಪಂದ್ಯವನ್ನು ಆಫ್ರಿಕಾ ತಂಡ 7 ವಿಕೆಟ್​ಗಳಿಂದ ಗೆದ್ದುಕೊಂಡಿದ್ದು, ಇದೀಗ ಆಫ್ರಿಕಾ ತಂಡ ಇಲ್ಲಿಯೂ ಗೆದ್ದು ಬಲಿಷ್ಠ ಹೆಜ್ಜೆ ಇಡಲು ಬಯಸಿದ್ದು, ಟೀಂ ಇಂಡಿಯಾ ಸಮಬಲ ಸಾಧಿಸಲು ಪ್ರಯತ್ನಿಸಲಿದೆ.

5 / 5

Published On - 8:42 pm, Sat, 11 June 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ