IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

IND vs SA: ಜೂನ್ 12 ರ ಭಾನುವಾರ ಕಟಕ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ 20 ಸರಣಿಯ ಎರಡನೇ ಪಂದ್ಯ ನಡೆಯಲಿದ್ದು, ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಲು ಪ್ರಯತ್ನಿಸಲಿದೆ.

|

Updated on:Jun 11, 2022 | 8:55 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಒಡಿಶಾದ ಕಟಕ್‌ನಲ್ಲಿ ಭಾನುವಾರ ಜೂನ್ 12 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಕಟಕ್ ತಲುಪಿದ್ದು, ತಮ್ಮ ಸಿದ್ಧತೆಯಲ್ಲಿ ನಿರತವಾಗಿವೆ. ಕಟಕ್‌ನಲ್ಲಿ ಈ ಪಂದ್ಯದ ಬಗ್ಗೆ ರೋಮಾಂಚನವಿದೆ ಮತ್ತು ಇದು ಟಿಕೆಟ್ ಮಾರಾಟದಿಂದ ಟೀಮ್ ಇಂಡಿಯಾದ ಅಭ್ಯಾಸದವರೆಗೆ ಗೋಚರಿಸಿತು, ಅದು ಎಷ್ಟರಮಟ್ಟಿಗೆ ಎಂದರೆ ಕೇವಲ ಮ್ಯಾಚ್​ ಪ್ರಾಕ್ಟೀಸ್​ಗೇನೆ ಇಡೀ ಕ್ರೀಡಾಂಗಣ ಫುಲ್ ಭರ್ತಿಯಾಗಿತ್ತು.

1 / 5
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಜೂನ್ 11 ರ ಶನಿವಾರದಂದು ಪಂದ್ಯಕ್ಕೆ ಒಂದು ದಿನ ಮೊದಲು ಟೀಮ್ ಇಂಡಿಯಾದ ಅಭ್ಯಾಸದ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ, ಇದರಲ್ಲಿ ಸಾವಿರಾರು ಪ್ರೇಕ್ಷಕರು ಕ್ರೀಡಾಂಗಣದ ಆಸನಗಳಲ್ಲಿ ಕುಳಿತಿರುವುದು ಕಂಡುಬಂದಿದೆ.

2 / 5
IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಈ ಸಮಯದಲ್ಲಿ, ಪ್ರೇಕ್ಷಕರು ಟೀಂ ಇಂಡಿಯಾ ನಾಯಕ ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಅವರಂತಹ ಸ್ಟಾರ್‌ಗಳನ್ನು ತುಂಬಾ ಹತ್ತಿರದಿಂದ ನೋಡಿದರು ಮತ್ತು ಅವರನ್ನು ಪ್ರೋತ್ಸಾಹಿಸಿದರು. ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರದಂದು ಹಬ್ಬದ ವಾತಾವರಣ ಕಡಿಮೆಯೇನಿಲ್ಲ ಎಂಬುದನ್ನು ಈ ಜನಸಂದಣಿಯಿಂದ ಊಹಿಸಬಹುದು.

3 / 5
IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಸುಮಾರು ಎರಡೂವರೆ ವರ್ಷಗಳ ನಂತರ ಕಟಕ್‌ನಲ್ಲಿ ಅಂತರಾಷ್ಟ್ರೀಯ ಪಂದ್ಯ ನಡೆಯಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯ ಪ್ರೇಕ್ಷಕರಲ್ಲಿ ಭಾರೀ ಉತ್ಸಾಹ ಮೂಡಿದೆ. ಈ ಉತ್ಸಾಹವು ಕೆಲವು ದಿನಗಳ ಹಿಂದೆ ಟಿಕೆಟ್ ಮಾರಾಟದ ಸಮಯದಲ್ಲಿ ಗೊಂದಲಕ್ಕೆ ತಿರುಗಿತ್ತು, ಇದರಿಂದಾಗಿ ಪೊಲೀಸರು ಲಾಠಿ ಬಲವನ್ನು ಬಳಸಬೇಕಾಯಿತು.

4 / 5
IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಟೀಂ ಇಂಡಿಯಾ ಮಾತ್ರವಲ್ಲ, ದಕ್ಷಿಣ ಆಫ್ರಿಕಾ ತಂಡವೂ ಈ ಮೊದಲು ಬಾರಾಬತಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸಿ ಪರಿಸ್ಥಿತಿಗಳನ್ನು ಅವಲೋಕಿಸಿತು. ದೆಹಲಿಯಲ್ಲಿ ನಡೆದ ಮೊದಲ ಪಂದ್ಯವನ್ನು ಆಫ್ರಿಕಾ ತಂಡ 7 ವಿಕೆಟ್​ಗಳಿಂದ ಗೆದ್ದುಕೊಂಡಿದ್ದು, ಇದೀಗ ಆಫ್ರಿಕಾ ತಂಡ ಇಲ್ಲಿಯೂ ಗೆದ್ದು ಬಲಿಷ್ಠ ಹೆಜ್ಜೆ ಇಡಲು ಬಯಸಿದ್ದು, ಟೀಂ ಇಂಡಿಯಾ ಸಮಬಲ ಸಾಧಿಸಲು ಪ್ರಯತ್ನಿಸಲಿದೆ.

5 / 5

Published On - 8:42 pm, Sat, 11 June 22

Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್