AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಉತ್ತಮ ಪ್ರದರ್ಶನದ ನಡುವೆಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ನತದೃಷ್ಟ ಕ್ರಿಕೆಟಿಗರಿವರು

IND vs SA: ಹೆಚ್ಚಿನ ಆಟಗಾರರು ಐಪಿಎಲ್ 2022 ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರಲ್ಲಿ ಹಲವರು ಈ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಆದಾಗ್ಯೂ ಮತ್ತೆ ಕೆಲವು ಹೆಸರುಗಳನ್ನು ಕೈಬಿಡಲಾಗಿದೆ.

ಪೃಥ್ವಿಶಂಕರ
|

Updated on:May 23, 2022 | 6:09 PM

Share
ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಜೂನ್ 9 ರಿಂದ ಪ್ರಾರಂಭವಾಗುವ ಸರಣಿಗೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸಲಿದ್ದಾರೆ. ಹೆಚ್ಚಿನ ಆಟಗಾರರು ಐಪಿಎಲ್ 2022 ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರಲ್ಲಿ ಹಲವರು ಈ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಆದಾಗ್ಯೂ ಮತ್ತೆ ಕೆಲವು ಹೆಸರುಗಳನ್ನು ಕೈಬಿಡಲಾಗಿದೆ.

1 / 6
ಶಿಖರ್ ಧವನ್- ಮತ್ತೊಂದೆಡೆ, ಹಿರಿಯ ಆಟಗಾರರ ವಿಷಯಕ್ಕೆ ಬಂದರೆ, ಶಿಖರ್ ಧವನ್​ಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರ T20 ವಿಶ್ವಕಪ್‌ಗೆ ಹೋಗುವ ಭರವಸೆ ಕೊನೆಗೊಳ್ಳುವಂತಿದೆ. ಈ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ಪರ ಧವನ್ 13 ಇನ್ನಿಂಗ್ಸ್‌ಗಳಲ್ಲಿ 421 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 122 ಆಗಿತ್ತು.

2 / 6
IND vs SA: ಉತ್ತಮ ಪ್ರದರ್ಶನದ ನಡುವೆಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ನತದೃಷ್ಟ ಕ್ರಿಕೆಟಿಗರಿವರು

ಸಂಜು ಸ್ಯಾಮ್ಸನ್: ಪೃಥ್ವಿ ಶಾ ಅವರಂತೆಯೇ ಸಂಜು ಸ್ಯಾಮ್ಸನ್​ಗೂ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್‌ಗೆ ನಾಯಕರಾಗಿದ್ದ ಅವಧಿಯಲ್ಲಿ ತಂಡವನ್ನು ಪ್ಲೇ ಆಫ್‌ಗೆ ಕೊಂಡೊಯ್ದಿದ್ದ ಸ್ಯಾಮ್ಸನ್, ಈ ಋತುವಿನಲ್ಲಿ ಬೃಹತ್ ಇನ್ನಿಂಗ್ಸ್‌ಗಳನ್ನು ಆಡಿಲ್ಲ. ಆದರೆ, ತಂಡದ ಅಗತ್ಯಕ್ಕೆ ತಕ್ಕಂತೆ ಇನಿಂಗ್ಸ್‌ ಆಡಿದ್ದರು. ಅವರು ಇದುವರೆಗೆ 14 ಇನ್ನಿಂಗ್ಸ್‌ಗಳಲ್ಲಿ 147 ಸ್ಟ್ರೈಕ್ ರೇಟ್‌ನೊಂದಿಗೆ 374 ರನ್ ಗಳಿಸಿದ್ದಾರೆ.

3 / 6
IND vs SA: ಉತ್ತಮ ಪ್ರದರ್ಶನದ ನಡುವೆಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ನತದೃಷ್ಟ ಕ್ರಿಕೆಟಿಗರಿವರು

ರಾಹುಲ್ ತ್ರಿಪಾಠಿ: ಇತ್ತೀಚಿನ ದಿನಗಳಲ್ಲಿ ಕೆಲವು ಹೊಸ ಆಟಗಾರರು ತಂಡಕ್ಕೆ ಸೇರ್ಪಡೆಗೊಂಡಿದ್ದರೆ, ರಾಹುಲ್ ತ್ರಿಪಾಠಿಗೆ ಮಾತ್ರ ಮತ್ತೆ ನಿರಾಸೆಯಾಗಿದೆ. 31 ವರ್ಷದ ಬ್ಯಾಟ್ಸ್‌ಮನ್ 14 ಇನ್ನಿಂಗ್ಸ್‌ಗಳಲ್ಲಿ 37 ಸರಾಸರಿ ಮತ್ತು 158 ಸ್ಟ್ರೈಕ್‌ರೇಟ್​ನಲ್ಲಿ 413 ರನ್ ಗಳಿಸಿದರು. ಮಧ್ಯಮ ಓವರ್‌ಗಳಲ್ಲಿಯೂ ರನ್‌ ವೇಗವನ್ನು ಕಾಯ್ದುಕೊಳ್ಳುವ ಸಾಮರ್ಥ್ಯ ಅವರಲ್ಲಿದೆ.

4 / 6
IND vs SA: ಉತ್ತಮ ಪ್ರದರ್ಶನದ ನಡುವೆಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ನತದೃಷ್ಟ ಕ್ರಿಕೆಟಿಗರಿವರು

ಪೃಥ್ವಿ ಶಾ: ದೆಹಲಿ ಕ್ಯಾಪಿಟಲ್ಸ್‌ ಪರ ಆಡುತ್ತಿರುವ ಯುವ ಆರಂಭಿಕ ಆಟಗಾರ ಈ ಋತುವಿನಲ್ಲಿ ಕೆಲವು ಬಿರುಗಾಳಿಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಅವರು 10 ಇನ್ನಿಂಗ್ಸ್‌ಗಳಲ್ಲಿ 153 ಸ್ಟ್ರೈಕ್ ರೇಟ್‌ನೊಂದಿಗೆ 283 ರನ್ ಗಳಿಸಿದರು. ಇದರಲ್ಲಿ 32 ಅರ್ಧಶತಕಗಳು ಸೇರಿವೆ. ಪವರ್‌ಪ್ಲೇಯಲ್ಲಿ ಬಿರುಗಾಳಿ ಎಬ್ಬಿಸುವ ಸಾಮರ್ಥ್ಯವಿದ್ದರೂ, ಅವಕಾಶ ಮತ್ತೆ ಬರಲಿಲ್ಲ.

5 / 6
IND vs SA: ಉತ್ತಮ ಪ್ರದರ್ಶನದ ನಡುವೆಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ನತದೃಷ್ಟ ಕ್ರಿಕೆಟಿಗರಿವರು

ಮೊಹ್ಸಿನ್ ಖಾನ್: ಬೌಲರ್‌ಗಳಲ್ಲಿ ಉಮ್ರಾನ್ ಮಲಿಕ್ ನಂತರ, ಎಡಗೈ ವೇಗಿ ಮೊಹ್ಸಿನ್ ಖಾನ್ ಹೆಚ್ಚು ಚರ್ಚೆಗೆ ಒಳಗಾಗಿದ್ದಾರೆ. ಉತ್ತರ ಪ್ರದೇಶದ ಉದಯೋನ್ಮುಖ ವೇಗದ ಬೌಲರ್ ಲಕ್ನೋ ಸೂಪರ್ ಜೈಂಟ್ಸ್‌ ಪರ ಪಾದಾರ್ಪಣೆ ಮಾಡಿದರು. ಅವರು ಅದ್ಭುತ ಪ್ರದರ್ಶನ ನೀಡಿ 8 ಪಂದ್ಯಗಳಲ್ಲಿ 13 ವಿಕೆಟ್‌ಗಳನ್ನು ಪಡೆದು ತಂಡವನ್ನು ಪ್ಲೇ ಆಫ್‌ಗೆ ಕೊಂಡೊಯ್ದರು. ಗಮನಾರ್ಹವಾಗಿ, ಮೊಹ್ಸಿನ್ ಎಕಾನಮಿ ಕೂಡ ಪ್ರತಿ ಓವರ್‌ಗೆ ಕೇವಲ 5.93.

6 / 6

Published On - 5:56 pm, Mon, 23 May 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ