AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಿ20 ಸರಣಿಗೆ ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್​ಪುರ್​ನಲ್ಲಿ ಜರುಗಲಿದೆ. ಇನ್ನುಳಿದ ಪಂದ್ಯಗಳು ಕ್ರಮವಾಗಿ ಧರ್ಮಶಾಲ, ಲಕ್ನೋ ಮತ್ತು ಅಹಮದಾಬಾದ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Dec 07, 2025 | 7:59 AM

Share
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಬೇಕಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಕೆಲ ಪ್ರಮು ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಆ ಆಟಗಾರರು ಯಾರೆಂದರೆ...

ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಬೇಕಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಕೆಲ ಪ್ರಮು ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಆ ಆಟಗಾರರು ಯಾರೆಂದರೆ...

1 / 10
ರಿಂಕು ಸಿಂಗ್: ಭಾರತದ ಪರ 35 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್ ಅವರನ್ನು  ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಂಕು ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ.

ರಿಂಕು ಸಿಂಗ್: ಭಾರತದ ಪರ 35 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್ ಅವರನ್ನು  ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಂಕು ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ.

2 / 10
ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಈವರೆಗೆ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ ಕಳೆದ ತಿಂಗಳು ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದಾರೆ.

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಈವರೆಗೆ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ ಕಳೆದ ತಿಂಗಳು ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದಾರೆ.

3 / 10
ಯಶಸ್ವಿ ಜೈಸ್ವಾಲ್: ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅವರನ್ನು ಸಹ ಟಿ20 ಸರಣಿಗೆ ಆಯ್ಕೆ ಮಾಡಿಲ್ಲ. ಹೀಗಾಗಿ ಜೈಸ್ವಾಲ್ ಕೂಡ ಮುಂಬರುವ 5 ಪಂದ್ಯಗಳ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಯಶಸ್ವಿ ಜೈಸ್ವಾಲ್: ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅವರನ್ನು ಸಹ ಟಿ20 ಸರಣಿಗೆ ಆಯ್ಕೆ ಮಾಡಿಲ್ಲ. ಹೀಗಾಗಿ ಜೈಸ್ವಾಲ್ ಕೂಡ ಮುಂಬರುವ 5 ಪಂದ್ಯಗಳ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

4 / 10
ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಸಹ ಟಿ20 ಸರಣಿಗೆ ಪರಿಗಣಿಸಲಾಗಿಲ್ಲ. ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ದುಬಾರಿಯಾಗಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದೆ. ಹೀಗಾಗಿ ಅವರು ಸಹ ಮುಂದಿನ ಸರಣಿಯಲ್ಲಿ ಕಣಕ್ಕಿಳಿಯುವುದಿಲ್ಲ.

ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಸಹ ಟಿ20 ಸರಣಿಗೆ ಪರಿಗಣಿಸಲಾಗಿಲ್ಲ. ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ದುಬಾರಿಯಾಗಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದೆ. ಹೀಗಾಗಿ ಅವರು ಸಹ ಮುಂದಿನ ಸರಣಿಯಲ್ಲಿ ಕಣಕ್ಕಿಳಿಯುವುದಿಲ್ಲ.

5 / 10
ರಿಷಭ್ ಪಂತ್: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾಗ್ಯೂ ಅವರಿಗೆ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಟಿ20 ಸರಣಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ತಂಡದಲ್ಲಿ ರಿಷಭ್​ಗೆ ಸ್ಥಾನ ನೀಡಿಲ್ಲ.

ರಿಷಭ್ ಪಂತ್: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾಗ್ಯೂ ಅವರಿಗೆ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಟಿ20 ಸರಣಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ತಂಡದಲ್ಲಿ ರಿಷಭ್​ಗೆ ಸ್ಥಾನ ನೀಡಿಲ್ಲ.

6 / 10
ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಆದರೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ ಬೆನ್ನಲ್ಲೇ ಹಿಟ್​ಮ್ಯಾನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.

ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಆದರೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ ಬೆನ್ನಲ್ಲೇ ಹಿಟ್​ಮ್ಯಾನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.

7 / 10
ರವೀಂದ್ರ ಜಡೇಜಾ: ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ರವೀಂದ್ರ ಜಡೇಜಾ. ಚುಟುಕು ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಜಡೇಜಾ ಇದೀಗ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನತ್ತ ಫೋಕಸ್ ಮಾಡಿದ್ದಾರೆ. ಹೀಗಾಗಿ ಅವರನ್ನೂ ಸಹ ಟಿ20​ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.

ರವೀಂದ್ರ ಜಡೇಜಾ: ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ರವೀಂದ್ರ ಜಡೇಜಾ. ಚುಟುಕು ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಜಡೇಜಾ ಇದೀಗ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನತ್ತ ಫೋಕಸ್ ಮಾಡಿದ್ದಾರೆ. ಹೀಗಾಗಿ ಅವರನ್ನೂ ಸಹ ಟಿ20​ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.

8 / 10
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಚುಟುಕು ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಕೂಡ ಕಾಣಿಸಿಕೊಳ್ಳುವುದಿಲ್ಲ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಚುಟುಕು ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಕೂಡ ಕಾಣಿಸಿಕೊಳ್ಳುವುದಿಲ್ಲ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...

9 / 10
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.

10 / 10
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್