AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾಗೆ ಬಿಗ್ ಶಾಕ್: ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿಯುವ ಸಾಧ್ಯತೆ

Rohit Sharma: ಟೀಮ್ ಇಂಡಿಯಾದಲ್ಲಿ ಆರಂಭಿಕರಾಗಿ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಇದ್ದು, ಹೀಗಾಗಿ ರೋಹಿತ್ ಶರ್ಮಾ ಅಲಭ್ಯತೆಯ ನಡುವೆಯೂ ತಂಡದ ಅನುಭವಿ ಆಟಗಾರರು ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ಇನ್ನಿಂಗ್ಸ್ ಆರಂಭಿಸಬಹುದು.

TV9 Web
| Edited By: |

Updated on: Dec 13, 2021 | 2:37 PM

Share
 ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ಇದೇ ತಿಂಗಳ 26 ರಿಂದ ಶುರುವಾಗಲಿದೆ. ಆದರೆ ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಅಭ್ಯಾಸದಲ್ಲಿ ನಿರತರಾಗಿದ್ದ ಹಿಟ್​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅವರು ಟೆಸ್ಟ್ ಸರಣಿ ಆಡುವುದು ಅನುಮಾನ ಎನ್ನಲಾಗುತ್ತಿದೆ.

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ಇದೇ ತಿಂಗಳ 26 ರಿಂದ ಶುರುವಾಗಲಿದೆ. ಆದರೆ ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಅಭ್ಯಾಸದಲ್ಲಿ ನಿರತರಾಗಿದ್ದ ಹಿಟ್​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅವರು ಟೆಸ್ಟ್ ಸರಣಿ ಆಡುವುದು ಅನುಮಾನ ಎನ್ನಲಾಗುತ್ತಿದೆ.

1 / 6
ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ ಡಿಸೆಂಬರ್ 16 ರಂದು ತೆರಳಲಿದ್ದು, ಇದೀಗ ಸರಣಿಗಾಗಿ ತೆರಳುವ ಸಿದ್ದತೆಯ ಬೆನ್ನಲ್ಲೇ ರೋಹಿತ್ ಶರ್ಮಾ ಗಾಯಗೊಂಡಿರುವುದು ಭಾರತ ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಅಭ್ಯಾಸದ ವೇಳೆ ಥ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ಅವರು ಎಸೆದ ಬಾಲ್ ನೇರವಾಗಿ ರೋಹಿತ್ ಶರ್ಮಾ ಅವರ ಕೈಗೆ ತಾಗಿದೆ. ತೀವ್ರ ನೋವಿನ ಕಾರಣ ಆ ಬಳಿಕ ಹಿಟ್​ಮ್ಯಾನ್ ಅಭ್ಯಾಸ ನಡೆಸಿಲ್ಲ ಎಂದು ತಿಳಿದು ಬಂದಿದೆ.

ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ ಡಿಸೆಂಬರ್ 16 ರಂದು ತೆರಳಲಿದ್ದು, ಇದೀಗ ಸರಣಿಗಾಗಿ ತೆರಳುವ ಸಿದ್ದತೆಯ ಬೆನ್ನಲ್ಲೇ ರೋಹಿತ್ ಶರ್ಮಾ ಗಾಯಗೊಂಡಿರುವುದು ಭಾರತ ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಅಭ್ಯಾಸದ ವೇಳೆ ಥ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ಅವರು ಎಸೆದ ಬಾಲ್ ನೇರವಾಗಿ ರೋಹಿತ್ ಶರ್ಮಾ ಅವರ ಕೈಗೆ ತಾಗಿದೆ. ತೀವ್ರ ನೋವಿನ ಕಾರಣ ಆ ಬಳಿಕ ಹಿಟ್​ಮ್ಯಾನ್ ಅಭ್ಯಾಸ ನಡೆಸಿಲ್ಲ ಎಂದು ತಿಳಿದು ಬಂದಿದೆ.

2 / 6
ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲು ಇನ್ನೂ ಮೂರು ದಿನಗಳು ಉಳಿದಿದ್ದು, ಈ ನಡುವೆ ರೋಹಿತ್ ಶರ್ಮಾ ಚೇತರಿಸಿಕೊಳ್ಳುವ ಸಾಧ್ಯತೆಯಿದ್ದರೆ ಮಾತ್ರ ಸರಣಿಗಾಗಿ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲು ಇನ್ನೂ ಮೂರು ದಿನಗಳು ಉಳಿದಿದ್ದು, ಈ ನಡುವೆ ರೋಹಿತ್ ಶರ್ಮಾ ಚೇತರಿಸಿಕೊಳ್ಳುವ ಸಾಧ್ಯತೆಯಿದ್ದರೆ ಮಾತ್ರ ಸರಣಿಗಾಗಿ ತೆರಳಲಿದ್ದಾರೆ ಎಂದು ವರದಿಯಾಗಿದೆ.

3 / 6
ಇನ್ನು ಟೆಸ್ಟ್ ಸರಣಿ ಆರಂಭಕ್ಕೆ ಎರಡು ವಾರ ಬಾಕಿಯಿದ್ದು, ಹೀಗಾಗಿ ರೋಹಿತ್ ಶರ್ಮಾ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಕೂಡ ಇದೆ. ಒಂದು ವೇಳೆ ಸಂಪೂರ್ಣ ಫಿಟ್​ ಆದರೆ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಟೆಸ್ಟ್ ಸರಣಿ ಆರಂಭಕ್ಕೆ ಎರಡು ವಾರ ಬಾಕಿಯಿದ್ದು, ಹೀಗಾಗಿ ರೋಹಿತ್ ಶರ್ಮಾ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಕೂಡ ಇದೆ. ಒಂದು ವೇಳೆ ಸಂಪೂರ್ಣ ಫಿಟ್​ ಆದರೆ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

4 / 6
ಟೀಮ್ ಇಂಡಿಯಾದಲ್ಲಿ ಆರಂಭಿಕರಾಗಿ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಇದ್ದು, ಹೀಗಾಗಿ ರೋಹಿತ್ ಶರ್ಮಾ ಅಲಭ್ಯತೆಯ ನಡುವೆಯೂ ತಂಡದ ಅನುಭವಿ ಆಟಗಾರರು ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ಇನ್ನಿಂಗ್ಸ್ ಆರಂಭಿಸಬಹುದು.

ಟೀಮ್ ಇಂಡಿಯಾದಲ್ಲಿ ಆರಂಭಿಕರಾಗಿ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಇದ್ದು, ಹೀಗಾಗಿ ರೋಹಿತ್ ಶರ್ಮಾ ಅಲಭ್ಯತೆಯ ನಡುವೆಯೂ ತಂಡದ ಅನುಭವಿ ಆಟಗಾರರು ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ಇನ್ನಿಂಗ್ಸ್ ಆರಂಭಿಸಬಹುದು.

5 / 6
ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

6 / 6
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು