AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಜನ್ಮದಿನದಂದು ಈ ದಾಖಲೆ ಬರೆದ ಮೊದಲ ಬೌಲರ್ ಕುಲ್ದೀಪ್ ಯಾದವ್..!

IND vs SA: ಮ್ಮ 29ನೇ ಹುಟ್ಟುಹಬದಂದು ಕುಲ್ದೀಪ್ ಐದು ವಿಕೆಟ್ ಕಬಳಿಸಿದ್ದು ವಿಶೇಷವಾಗಿತ್ತು. ಈ ಮೂಲಕ ಕುಲ್ದೀಪ್ ಜನ್ಮದಿನದಂದು 3 ವಿಕೆಟ್ ಪಡೆದು ದಾಖಲೆ ಬರೆದಿದ್ದ ಟೀಂ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಅವರ ದಾಖಲೆ ಮುರಿದರು.

ಪೃಥ್ವಿಶಂಕರ
|

Updated on: Dec 15, 2023 | 8:38 AM

Share
ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವನ್ನು 106 ರನ್‌ಗಳಿಂದ ಗೆದ್ದು ಸರಣಿಯನ್ನು 1-1 ರಲ್ಲಿ ಕೊನೆಗೊಳಿಸಿತು. ಟೀಂ ಇಂಡಿಯಾ ಪರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್​ನಲ್ಲಿ ಮಿಂಚಿದರೆ ಬೌಲಿಂಗ್‌ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿ ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದರು.

ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವನ್ನು 106 ರನ್‌ಗಳಿಂದ ಗೆದ್ದು ಸರಣಿಯನ್ನು 1-1 ರಲ್ಲಿ ಕೊನೆಗೊಳಿಸಿತು. ಟೀಂ ಇಂಡಿಯಾ ಪರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್​ನಲ್ಲಿ ಮಿಂಚಿದರೆ ಬೌಲಿಂಗ್‌ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿ ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದರು.

1 / 8
ಈ ಪಂದ್ಯದಲ್ಲಿ ಕುಲ್ದೀಪ್ ಯಾದವ್ 2.5 ಓವರ್‌ ಬೌಲ್ ಮಾಡಿ 17 ರನ್ ನೀಡಿ 5 ವಿಕೆಟ್ ಪಡೆದರು. ಇದರೊಂದಿಗೆ, ಅಂತಾರಾಷ್ಟ್ರೀಯ ಟಿ20 ಯಲ್ಲಿ 2 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ ಕುಲ್ದೀಪ್ ಯಾದವ್ 2.5 ಓವರ್‌ ಬೌಲ್ ಮಾಡಿ 17 ರನ್ ನೀಡಿ 5 ವಿಕೆಟ್ ಪಡೆದರು. ಇದರೊಂದಿಗೆ, ಅಂತಾರಾಷ್ಟ್ರೀಯ ಟಿ20 ಯಲ್ಲಿ 2 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು.

2 / 8
ಹಾಗೆಯೇ ಭಾರತದ ಪರ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಗಳಿಸಿದ ಭುವನೇಶ್ವರ್ ಕುಮಾರ್ ಅವರ ದಾಖಲೆನ್ನು ಸರಿಗಟ್ಟಿದ್ದಾರೆ.

ಹಾಗೆಯೇ ಭಾರತದ ಪರ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಗಳಿಸಿದ ಭುವನೇಶ್ವರ್ ಕುಮಾರ್ ಅವರ ದಾಖಲೆನ್ನು ಸರಿಗಟ್ಟಿದ್ದಾರೆ.

3 / 8
ಈ ಇಬ್ಬರಲ್ಲದೆ ಭಾರತದ ಪರ ಯುಜ್ವೇಂದ್ರ ಚಹಾಲ್ ಮತ್ತು ದೀಪಕ್ ಚಹಾರ್ ಕೂಡ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಒಮ್ಮೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಈ ಇಬ್ಬರಲ್ಲದೆ ಭಾರತದ ಪರ ಯುಜ್ವೇಂದ್ರ ಚಹಾಲ್ ಮತ್ತು ದೀಪಕ್ ಚಹಾರ್ ಕೂಡ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಒಮ್ಮೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

4 / 8
ಈ ಪಂದ್ಯದಲ್ಲಿ ಕುಲ್ದೀಪ್ ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್ ಮತ್ತು ಲಿಜಾದ್ ವಿಲಿಯಮ್ಸ್ ಅವರ ವಿಕೆಟ್‌ಗಳನ್ನು ಪಡೆದರು.

ಈ ಪಂದ್ಯದಲ್ಲಿ ಕುಲ್ದೀಪ್ ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್ ಮತ್ತು ಲಿಜಾದ್ ವಿಲಿಯಮ್ಸ್ ಅವರ ವಿಕೆಟ್‌ಗಳನ್ನು ಪಡೆದರು.

5 / 8
ಅದರಲ್ಲೂ ತಮ್ಮ 29ನೇ ಹುಟ್ಟುಹಬದಂದು ಕುಲ್ದೀಪ್ ಐದು ವಿಕೆಟ್ ಕಬಳಿಸಿದ್ದು ವಿಶೇಷವಾಗಿತ್ತು. ಈ ಮೂಲಕ ಕುಲ್ದೀಪ್ ಜನ್ಮದಿನದಂದು 3 ವಿಕೆಟ್ ಪಡೆದು ದಾಖಲೆ ಬರೆದಿದ್ದ ಟೀಂ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಅವರ ದಾಖಲೆ ಮುರಿದರು.

ಅದರಲ್ಲೂ ತಮ್ಮ 29ನೇ ಹುಟ್ಟುಹಬದಂದು ಕುಲ್ದೀಪ್ ಐದು ವಿಕೆಟ್ ಕಬಳಿಸಿದ್ದು ವಿಶೇಷವಾಗಿತ್ತು. ಈ ಮೂಲಕ ಕುಲ್ದೀಪ್ ಜನ್ಮದಿನದಂದು 3 ವಿಕೆಟ್ ಪಡೆದು ದಾಖಲೆ ಬರೆದಿದ್ದ ಟೀಂ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಅವರ ದಾಖಲೆ ಮುರಿದರು.

6 / 8
ಯುವರಾಜ್ ಸಿಂಗ್ ತಮ್ಮ ಜನ್ಮದಿನದಂದು ಅಂದರೆ 12 ಡಿಸೆಂಬರ್ 2009 ರಂದು ಮೊಹಾಲಿಯಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 23 ರನ್‌ ನೀಡಿ ಮೂರು ವಿಕೆಟ್ ಪಡೆದಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು.

ಯುವರಾಜ್ ಸಿಂಗ್ ತಮ್ಮ ಜನ್ಮದಿನದಂದು ಅಂದರೆ 12 ಡಿಸೆಂಬರ್ 2009 ರಂದು ಮೊಹಾಲಿಯಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 23 ರನ್‌ ನೀಡಿ ಮೂರು ವಿಕೆಟ್ ಪಡೆದಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು.

7 / 8
ಇಲ್ಲಿಯವರೆಗೆ ಭಾರತದ ಪರ 34 ಟಿ20 ಪಂದ್ಯಗಳನ್ನಾಡಿರುವ ಕುಲ್ದೀಪ್ 6.68 ರ ಅದ್ಭುತ ಎಕಾನಮಿಯಲ್ಲಿ 58 ವಿಕೆಟ್ಗಳನ್ನು ಪಡೆದಿದ್ದಾರೆ.

ಇಲ್ಲಿಯವರೆಗೆ ಭಾರತದ ಪರ 34 ಟಿ20 ಪಂದ್ಯಗಳನ್ನಾಡಿರುವ ಕುಲ್ದೀಪ್ 6.68 ರ ಅದ್ಭುತ ಎಕಾನಮಿಯಲ್ಲಿ 58 ವಿಕೆಟ್ಗಳನ್ನು ಪಡೆದಿದ್ದಾರೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ