AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಅತ್ಯಂತ ಹೀನಾಯ ಸೋಲು..!

India vs South Africa, 1st Test: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಝಾಹಿರ್ ಯೂಸುಫ್
|

Updated on: Nov 16, 2025 | 2:53 PM

Share
ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿವೆ. ಈ 93 ವರ್ಷಗಳಲ್ಲಿ ಟೀಮ್ ಇಂಡಿಯಾ (Team India) ಹಲವು ಏಳು ಬೀಳುಗಳನ್ನು ಕಂಡಿದೆ. ಈ ಏಳು ಬೀಳುಗಳ ನಡುವೆ ಇದೀಗ ಭಾರತ ತಂಡವು ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ.

ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿವೆ. ಈ 93 ವರ್ಷಗಳಲ್ಲಿ ಟೀಮ್ ಇಂಡಿಯಾ (Team India) ಹಲವು ಏಳು ಬೀಳುಗಳನ್ನು ಕಂಡಿದೆ. ಈ ಏಳು ಬೀಳುಗಳ ನಡುವೆ ಇದೀಗ ಭಾರತ ತಂಡವು ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 30 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 124 ರನ್​​ಗಳ ಗುರಿ ಪಡೆದ ಟೀಮ್ ಇಂಡಿಯಾ 93 ರನ್​ಗಳಿಸುವಷ್ಟರಲ್ಲಿ ಸರ್ಪಪತನ ಕಂಡಿದೆ. 

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 30 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 124 ರನ್​​ಗಳ ಗುರಿ ಪಡೆದ ಟೀಮ್ ಇಂಡಿಯಾ 93 ರನ್​ಗಳಿಸುವಷ್ಟರಲ್ಲಿ ಸರ್ಪಪತನ ಕಂಡಿದೆ. 

2 / 5
ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ. ಅಂದರೆ ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ. ಅಂದರೆ ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

3 / 5
2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

4 / 5
ಸೌತ್ ಆಫ್ರಿಕಾ ತಂಡ ನೀಡಿದ 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ತವರಿನಲ್ಲಿ ಅತ್ಯಲ್ಪ ಗುರಿ ಬೆನ್ನತ್ತಲಾಗದೇ ಅತ್ಯಂತ ಹೀನಾಯ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಸೋಲು ಇತಿಹಾಸ ಪುಟಗಳಲ್ಲಿ ಅಚ್ಚಳಿಯದೇ ಉಳಿಯಲಿದೆ.

ಸೌತ್ ಆಫ್ರಿಕಾ ತಂಡ ನೀಡಿದ 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ತವರಿನಲ್ಲಿ ಅತ್ಯಲ್ಪ ಗುರಿ ಬೆನ್ನತ್ತಲಾಗದೇ ಅತ್ಯಂತ ಹೀನಾಯ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಸೋಲು ಇತಿಹಾಸ ಪುಟಗಳಲ್ಲಿ ಅಚ್ಚಳಿಯದೇ ಉಳಿಯಲಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ