IND vs SA 3rd T20I: ಇಂದು ತೃತೀಯ ಟಿ20: ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ

Edited By:

Updated on: Jun 14, 2022 | 9:06 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಟಿ20 ಪಂದ್ಯದಲ್ಲಿ ಸೋತು ಸರಣಿ ಕಳೆದುಕೊಳ್ಳುವ ಭೀತಿಯಲ್ಲಿರುವ ಭಾರತ ತಂಡ ಇಂದು ಮೂರನೇ ಟಿ20 ಪಂದ್ಯವನ್ನು ಆಡಲಿದೆ. ವಿಶಾಖಪಟ್ಟಣದ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಕದನ ನಡೆಯಲಿದೆ. ಇದಕ್ಕಾಗಿ ಭಾರತೀಯ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

1 / 8
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ 2-2 ಅಂತರದಿಂದ ಸರಣಿ ಸಮಬಲಗೊಂಡಿರುವ ಕಾರಣ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ 2-2 ಅಂತರದಿಂದ ಸರಣಿ ಸಮಬಲಗೊಂಡಿರುವ ಕಾರಣ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ.

2 / 8

ನಾಯಕ ರಿಷಭ್ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ಅಸ್ಥಿರ ಪ್ರದರ್ಶನ ನೀಡುತ್ತಿದ್ದು ಲಯಕ್ಕೆ ಮರಳಬೇಕಿದೆ.

3 / 8

ಸರಣಿಯಲ್ಲಿ ಎರಡು ಅರ್ಧಶತಕ ಹೊಡೆದಿರುವ ಇಶಾನ್ ಉತ್ತಮ ಲಯದಲ್ಲಿದ್ದರೆ ರುತುರಾಜ್ ಗಾಯಕ್ವಾಡ್ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಆರಂಭಿಕ ಜೋಡಿಯಲ್ಲಿ ಬದಲಾವಣೆ ಆಗುತ್ತಾ ಎಂಬುದು ಕುತೂಹಲ. ವೆಂಕಟೇಶ್ ಅಯ್ಯರ್​​ಗೆ ಅವಕಾಶ ನೀಡಿದರೆ ಅಚ್ಚರಿ ಪಡಬೇಕಿಲ್ಲ.

4 / 8

ಅಭ್ಯಾಸದಲ್ಲಿ ನಿರತರಾಗಿರುವ ಶ್ರೇಯಸ್ ಅಯ್ಯರ್.

5 / 8

ಇಂದಿನ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ ಅವರೇ ಪ್ರಮುಖ ಹೈಲೇಟ್ ಆಗಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಆಡುತ್ತಿರುವ ಕಾರ್ತಿಕ್​ಗೆ ಬೆಂಗಳೂರಿನಲ್ಲಿ ಅಭಿಮಾನಿಗಳ ಬಳಗ ಜೋರಾಗಿಯೇ ಇದೆ. ಹೀಗಾಗಿ ಡಿಕೆ ಘೋಷಣೆ ದೊಟ್ಟದಲ್ಲಿ ಕೇಳಿಬರಲಿದೆ. ನಾಲ್ಕನೇ ಪಂದ್ಯದಲ್ಲಿ ಮಿಂಚಿನ ಅರ್ಧಶತಕ ಹೊಡೆದಿದ್ದ ದಿನೇಶ್ ಗೆಲುವಿನ ರೂವಾರಿಯಾಗಿದ್ದರು.

6 / 8

ದಕ್ಷಿಣ ಆಫ್ರಿಕಾ ಸರಣಿಗೆ ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್ ಅವರಂತಹ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದ್ದರೂ, ಅವರಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಅಂತಿಮ ಕದನದಲ್ಲಿ ಅವಕಾಶ ಅನುಮಾನ.

7 / 8

ವೇಗಿಗಳಾಗಿ ಹರ್ಷಲ್ ಪಟೇಲ್ ಮತ್ತು ಭುವನೇಶ್ವರ್ ಕುಮಾರ್ ಭಾರತಕ್ಕೆ ಅತ್ಯಂತ ಪ್ರಮುಖ ಅಸ್ತ್ರವಾಗಿದ್ದು, ಹರ್ಷಲ್ ಈ ಸರಣಿಯಲ್ಲಿ ಏಳು ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ಭುವನೇಶ್ವರ್ ಆರು ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪವರ್‌ಪ್ಲೇ/ಡೆತ್ ಓವರ್‌ಗಳಲ್ಲಿ ಅವರ ಬೌಲಿಂಗ್ ಅತ್ಯಂತ ನಿರ್ಣಾಯಕವಾಗಿರುತ್ತದೆ.

8 / 8

ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಹಲ್ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

Published On - 9:06 am, Tue, 14 June 22

Loading...
Unable to load recommendations.
Follow Us