AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ 16 ವರ್ಷದ ಹಿಂದಿನ ಸೇಡು ತೀರಿಸಿಕೊಂಡ ಭಾರತ..!

IND vs SA: ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿ ಇತಿಹಾಸ ನಿರ್ಮಿಸಿದೆ. ಇದು ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಯಾವುದೇ ತಂಡ ಗಳಿಸಿದ ಕನಿಷ್ಠ ಸ್ಕೋರ್ ಆಗಿದೆ. ಇದರೊಂದಿಗೆ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ 16ವರ್ಷದ ಹಿಂದಿನ ಸೇಡು ತೀರಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Jan 03, 2024 | 8:08 PM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿ ಇತಿಹಾಸ ನಿರ್ಮಿಸಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿ ಇತಿಹಾಸ ನಿರ್ಮಿಸಿದೆ.

1 / 8
ಇದು ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಯಾವುದೇ ತಂಡ ಗಳಿಸಿದ ಕನಿಷ್ಠ ಸ್ಕೋರ್ ಆಗಿದೆ. ಇದರೊಂದಿಗೆ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ 16ವರ್ಷದ ಹಿಂದಿನ ಸೇಡು ತೀರಿಸಿಕೊಂಡಿದೆ.

ಇದು ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಯಾವುದೇ ತಂಡ ಗಳಿಸಿದ ಕನಿಷ್ಠ ಸ್ಕೋರ್ ಆಗಿದೆ. ಇದರೊಂದಿಗೆ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ 16ವರ್ಷದ ಹಿಂದಿನ ಸೇಡು ತೀರಿಸಿಕೊಂಡಿದೆ.

2 / 8
ಕೇಪ್ ಟೌನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಕೇವಲ 23.2 ಓವರ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಅಂದರೆ ಪಂದ್ಯದ ಮೊದಲ ಸೆಷನ್‌ನಲ್ಲಿಯೇ ಭಾರತದ ಬೌಲರ್‌ಗಳು ದಕ್ಷಿಣ ಆಫ್ರಿಕಾವನ್ನು ಆಲೌಟ್ ಮಾಡಿದರು.

ಕೇಪ್ ಟೌನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಕೇವಲ 23.2 ಓವರ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಅಂದರೆ ಪಂದ್ಯದ ಮೊದಲ ಸೆಷನ್‌ನಲ್ಲಿಯೇ ಭಾರತದ ಬೌಲರ್‌ಗಳು ದಕ್ಷಿಣ ಆಫ್ರಿಕಾವನ್ನು ಆಲೌಟ್ ಮಾಡಿದರು.

3 / 8
ಈ ಹಿಂದೆ ಅಂದರೆ, 2008ರಲ್ಲಿ ದಕ್ಷಿಣ ಆಫ್ರಿಕಾ ಕೂಡ ಭಾರತ ತಂಡದ ವಿರುದ್ಧ ಇದೇ ರೀತಿಯ ಸಾಧನೆ ಮಾಡಿತ್ತು. 2008 ರ ಭಾರತ ಪ್ರವಾಸದ ಸಮಯದಲ್ಲಿ, ಅಹಮದಾಬಾದ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾವು ಟೀಮ್ ಇಂಡಿಯಾವನ್ನು 76 ರನ್‌ಗಳಿಗೆ ಆಲೌಟ್ ಮಾಡಿತ್ತು. ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೂಡ ಪಂದ್ಯದ ಮೊದಲ ಸೆಷನ್‌ನಲ್ಲಿ ಭಾರತವನ್ನು ಆಲೌಟ್ ಮಾಡಿತ್ತು.

ಈ ಹಿಂದೆ ಅಂದರೆ, 2008ರಲ್ಲಿ ದಕ್ಷಿಣ ಆಫ್ರಿಕಾ ಕೂಡ ಭಾರತ ತಂಡದ ವಿರುದ್ಧ ಇದೇ ರೀತಿಯ ಸಾಧನೆ ಮಾಡಿತ್ತು. 2008 ರ ಭಾರತ ಪ್ರವಾಸದ ಸಮಯದಲ್ಲಿ, ಅಹಮದಾಬಾದ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾವು ಟೀಮ್ ಇಂಡಿಯಾವನ್ನು 76 ರನ್‌ಗಳಿಗೆ ಆಲೌಟ್ ಮಾಡಿತ್ತು. ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೂಡ ಪಂದ್ಯದ ಮೊದಲ ಸೆಷನ್‌ನಲ್ಲಿ ಭಾರತವನ್ನು ಆಲೌಟ್ ಮಾಡಿತ್ತು.

4 / 8
2008 ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಸರಣಿಯು 1-1 ರಿಂದ ಡ್ರಾದಲ್ಲಿ ಕೊನೆಗೊಂಡಿತು. ಸರಣಿಯ ಎರಡನೇ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ 76 ರನ್ ಗಳಿಗೆ ಕುಸಿದಿತ್ತು.

2008 ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಸರಣಿಯು 1-1 ರಿಂದ ಡ್ರಾದಲ್ಲಿ ಕೊನೆಗೊಂಡಿತು. ಸರಣಿಯ ಎರಡನೇ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ 76 ರನ್ ಗಳಿಗೆ ಕುಸಿದಿತ್ತು.

5 / 8
ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 494 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಅದೇ ಸಮಯದಲ್ಲಿ, ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 328 ರನ್ ಗಳಿಸಲಷ್ಟೇ ಶಕ್ತವಾಯಿತು ಮತ್ತು ಪಂದ್ಯವನ್ನು ಇನ್ನಿಂಗ್ಸ್ ಮತ್ತು 90 ರನ್‌ಗಳಿಂದ ಕಳೆದುಕೊಂಡಿತ್ತು.

ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 494 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಅದೇ ಸಮಯದಲ್ಲಿ, ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 328 ರನ್ ಗಳಿಸಲಷ್ಟೇ ಶಕ್ತವಾಯಿತು ಮತ್ತು ಪಂದ್ಯವನ್ನು ಇನ್ನಿಂಗ್ಸ್ ಮತ್ತು 90 ರನ್‌ಗಳಿಂದ ಕಳೆದುಕೊಂಡಿತ್ತು.

6 / 8
ಟೀಂ ಇಂಡಿಯಾ ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ 8 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ಭಾರತ 7 ಸರಣಿಗಳಲ್ಲಿ ಸೋಲು ಕಂಡಿದ್ದು, 1 ಸರಣಿ ಡ್ರಾ ಆಗಿದೆ. ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿದ ಏಕೈಕ ಭಾರತೀಯ ನಾಯಕ ಎಂಎಸ್ ಧೋನಿ.

ಟೀಂ ಇಂಡಿಯಾ ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ 8 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ಭಾರತ 7 ಸರಣಿಗಳಲ್ಲಿ ಸೋಲು ಕಂಡಿದ್ದು, 1 ಸರಣಿ ಡ್ರಾ ಆಗಿದೆ. ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿದ ಏಕೈಕ ಭಾರತೀಯ ನಾಯಕ ಎಂಎಸ್ ಧೋನಿ.

7 / 8
ಆದರೆ ಕೇಪ್ ಟೌನ್ ಟೆಸ್ಟ್​ನಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆದಿದ್ದು, ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಡ್ರಾ ಮಾಡಿಕೊಳ್ಳುವ ಸುವರ್ಣಾವಕಾಶ ಪಡೆದಿದೆ.

ಆದರೆ ಕೇಪ್ ಟೌನ್ ಟೆಸ್ಟ್​ನಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆದಿದ್ದು, ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಡ್ರಾ ಮಾಡಿಕೊಳ್ಳುವ ಸುವರ್ಣಾವಕಾಶ ಪಡೆದಿದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!