AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 152, 140 ರನ್.. ಗುವಾಹಟಿಯಲ್ಲಿ ಕಿಂಗ್ ಕೊಹ್ಲಿ- ಹಿಟ್​ಮ್ಯಾನ್ ರೋಹಿತ್​ನ​ದ್ದೇ ದರ್ಬಾರು..!

IND vs SL: 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

TV9 Web
| Edited By: |

Updated on:Jan 09, 2023 | 11:50 AM

Share
ಟಿ20 ಸರಣಿ ಮುಗಿದ ಬಳಿಕ ಇದೀಗ ಎಲ್ಲರ ಗಮನ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ ಏಕದಿನ ಸರಣಿಯತ್ತ ನೆಟ್ಟಿದೆ. ಈ ಸರಣಿ ಜನವರಿ 10 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಗುವಾಹಟಿಯ ಬರ್ಸಾಪರಾ ಮೈದಾನದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಇದರೊಂದಿಗೆ ಇಬ್ಬರೂ ಒಟ್ಟಾಗಿ 4 ವರ್ಷಗಳ ಹಿಂದಿನ ದಾಖಲೆಯನ್ನು ಮತ್ತೆ ಪುನಾರವರ್ತಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

ಟಿ20 ಸರಣಿ ಮುಗಿದ ಬಳಿಕ ಇದೀಗ ಎಲ್ಲರ ಗಮನ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ ಏಕದಿನ ಸರಣಿಯತ್ತ ನೆಟ್ಟಿದೆ. ಈ ಸರಣಿ ಜನವರಿ 10 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಗುವಾಹಟಿಯ ಬರ್ಸಾಪರಾ ಮೈದಾನದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಇದರೊಂದಿಗೆ ಇಬ್ಬರೂ ಒಟ್ಟಾಗಿ 4 ವರ್ಷಗಳ ಹಿಂದಿನ ದಾಖಲೆಯನ್ನು ಮತ್ತೆ ಪುನಾರವರ್ತಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

1 / 6
ಗುವಾಹಟಿಯ ಈ ಮೈದಾನದಲ್ಲಿ ಇಲ್ಲಿಯವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

ಗುವಾಹಟಿಯ ಈ ಮೈದಾನದಲ್ಲಿ ಇಲ್ಲಿಯವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

2 / 6
ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಕೇವಲ 117 ಎಸೆತಗಳಲ್ಲಿ 15 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 152 ರನ್ ಗಳಿಸಿದರು. ಕೊನೆಯವರೆಗೂ ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದ್ದರು

ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಕೇವಲ 117 ಎಸೆತಗಳಲ್ಲಿ 15 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 152 ರನ್ ಗಳಿಸಿದರು. ಕೊನೆಯವರೆಗೂ ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದ್ದರು

3 / 6
ಅದೇ ಸಮಯದಲ್ಲಿ, ತಂಡದ ನಾಯಕರಾಗಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 107 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 140 ರನ್ ಚಚ್ಚಿದರು. ಇದು ಕೊಹ್ಲಿ ಅವರ ಏಕದಿನ ವೃತ್ತಿ ಬದುಕಿನ 36ನೇ ಶತಕವಾಗಿತ್ತು. ಬಳಿಕ ಈ ಸ್ಫೋಟಕ ಶತಕ ಸಿಡಿಸಿದ್ದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತ್ತು.

ಅದೇ ಸಮಯದಲ್ಲಿ, ತಂಡದ ನಾಯಕರಾಗಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 107 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 140 ರನ್ ಚಚ್ಚಿದರು. ಇದು ಕೊಹ್ಲಿ ಅವರ ಏಕದಿನ ವೃತ್ತಿ ಬದುಕಿನ 36ನೇ ಶತಕವಾಗಿತ್ತು. ಬಳಿಕ ಈ ಸ್ಫೋಟಕ ಶತಕ ಸಿಡಿಸಿದ್ದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತ್ತು.

4 / 6
ಹೀಗಾಗಿ ಜ. 10ರಂದು ನಡೆಯುವ ಪಂದ್ಯದಲ್ಲೂ ಈ ಇಬ್ಬರು ಬ್ಯಾಟ್ಸ್‌ಮನ್‌ಗಳಿಂದ ಅಭಿಮಾನಿಗಳು ಹಳೆಯ ಆಟವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ರೋಹಿತ್ ಶರ್ಮಾ ಸುಮಾರು 3 ವರ್ಷಗಳಿಂದ ಏಕದಿನದಲ್ಲಿ ಶತಕ ಸಿಡಿಸಿಲ್ಲ. ಕೊನೆಯದಾಗಿ 19 ಜನವರಿ 2020 ರಂದು ಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ಆ ಬಳಿಕ ಆಗಸ ನೋಡಿಲ್ಲ.

ಹೀಗಾಗಿ ಜ. 10ರಂದು ನಡೆಯುವ ಪಂದ್ಯದಲ್ಲೂ ಈ ಇಬ್ಬರು ಬ್ಯಾಟ್ಸ್‌ಮನ್‌ಗಳಿಂದ ಅಭಿಮಾನಿಗಳು ಹಳೆಯ ಆಟವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ರೋಹಿತ್ ಶರ್ಮಾ ಸುಮಾರು 3 ವರ್ಷಗಳಿಂದ ಏಕದಿನದಲ್ಲಿ ಶತಕ ಸಿಡಿಸಿಲ್ಲ. ಕೊನೆಯದಾಗಿ 19 ಜನವರಿ 2020 ರಂದು ಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ಆ ಬಳಿಕ ಆಗಸ ನೋಡಿಲ್ಲ.

5 / 6
ಮತ್ತೊಂದೆಡೆ, ವಿರಾಟ್ ಕೊಹ್ಲಿ 3 ವರ್ಷಗಳ ನಂತರ ಕಳೆದ ತಿಂಗಳಷ್ಟೇ ಬಾಂಗ್ಲಾದೇಶ ವಿರುದ್ಧ ಏಕದಿನ ಶತಕ ಗಳಿಸಿದ್ದರು. ಆದಾಗ್ಯೂ, ನವೆಂಬರ್ 2019 ರಿಂದ, ಅವರು ಇನ್ನೂ ಭಾರತದಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ. ಹೀಗಾಗಿ ಆ ಕೊರತೆಯನ್ನು ಕೂಡ ಕೊಹ್ಲಿ ಈ ಸರಣಿಯಲ್ಲಿ ಕೊನೆಗೊಳಿಸುವ ತವಕದಲ್ಲಿದ್ದಾರೆ.

ಮತ್ತೊಂದೆಡೆ, ವಿರಾಟ್ ಕೊಹ್ಲಿ 3 ವರ್ಷಗಳ ನಂತರ ಕಳೆದ ತಿಂಗಳಷ್ಟೇ ಬಾಂಗ್ಲಾದೇಶ ವಿರುದ್ಧ ಏಕದಿನ ಶತಕ ಗಳಿಸಿದ್ದರು. ಆದಾಗ್ಯೂ, ನವೆಂಬರ್ 2019 ರಿಂದ, ಅವರು ಇನ್ನೂ ಭಾರತದಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ. ಹೀಗಾಗಿ ಆ ಕೊರತೆಯನ್ನು ಕೂಡ ಕೊಹ್ಲಿ ಈ ಸರಣಿಯಲ್ಲಿ ಕೊನೆಗೊಳಿಸುವ ತವಕದಲ್ಲಿದ್ದಾರೆ.

6 / 6

Published On - 11:50 am, Mon, 9 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್