AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 152, 140 ರನ್.. ಗುವಾಹಟಿಯಲ್ಲಿ ಕಿಂಗ್ ಕೊಹ್ಲಿ- ಹಿಟ್​ಮ್ಯಾನ್ ರೋಹಿತ್​ನ​ದ್ದೇ ದರ್ಬಾರು..!

IND vs SL: 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

TV9 Web
| Updated By: ಪೃಥ್ವಿಶಂಕರ

Updated on:Jan 09, 2023 | 11:50 AM

ಟಿ20 ಸರಣಿ ಮುಗಿದ ಬಳಿಕ ಇದೀಗ ಎಲ್ಲರ ಗಮನ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ ಏಕದಿನ ಸರಣಿಯತ್ತ ನೆಟ್ಟಿದೆ. ಈ ಸರಣಿ ಜನವರಿ 10 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಗುವಾಹಟಿಯ ಬರ್ಸಾಪರಾ ಮೈದಾನದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಇದರೊಂದಿಗೆ ಇಬ್ಬರೂ ಒಟ್ಟಾಗಿ 4 ವರ್ಷಗಳ ಹಿಂದಿನ ದಾಖಲೆಯನ್ನು ಮತ್ತೆ ಪುನಾರವರ್ತಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

ಟಿ20 ಸರಣಿ ಮುಗಿದ ಬಳಿಕ ಇದೀಗ ಎಲ್ಲರ ಗಮನ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ ಏಕದಿನ ಸರಣಿಯತ್ತ ನೆಟ್ಟಿದೆ. ಈ ಸರಣಿ ಜನವರಿ 10 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಗುವಾಹಟಿಯ ಬರ್ಸಾಪರಾ ಮೈದಾನದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಇದರೊಂದಿಗೆ ಇಬ್ಬರೂ ಒಟ್ಟಾಗಿ 4 ವರ್ಷಗಳ ಹಿಂದಿನ ದಾಖಲೆಯನ್ನು ಮತ್ತೆ ಪುನಾರವರ್ತಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

1 / 6
ಗುವಾಹಟಿಯ ಈ ಮೈದಾನದಲ್ಲಿ ಇಲ್ಲಿಯವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

ಗುವಾಹಟಿಯ ಈ ಮೈದಾನದಲ್ಲಿ ಇಲ್ಲಿಯವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

2 / 6
ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಕೇವಲ 117 ಎಸೆತಗಳಲ್ಲಿ 15 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 152 ರನ್ ಗಳಿಸಿದರು. ಕೊನೆಯವರೆಗೂ ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದ್ದರು

ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಕೇವಲ 117 ಎಸೆತಗಳಲ್ಲಿ 15 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 152 ರನ್ ಗಳಿಸಿದರು. ಕೊನೆಯವರೆಗೂ ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದ್ದರು

3 / 6
ಅದೇ ಸಮಯದಲ್ಲಿ, ತಂಡದ ನಾಯಕರಾಗಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 107 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 140 ರನ್ ಚಚ್ಚಿದರು. ಇದು ಕೊಹ್ಲಿ ಅವರ ಏಕದಿನ ವೃತ್ತಿ ಬದುಕಿನ 36ನೇ ಶತಕವಾಗಿತ್ತು. ಬಳಿಕ ಈ ಸ್ಫೋಟಕ ಶತಕ ಸಿಡಿಸಿದ್ದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತ್ತು.

ಅದೇ ಸಮಯದಲ್ಲಿ, ತಂಡದ ನಾಯಕರಾಗಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 107 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 140 ರನ್ ಚಚ್ಚಿದರು. ಇದು ಕೊಹ್ಲಿ ಅವರ ಏಕದಿನ ವೃತ್ತಿ ಬದುಕಿನ 36ನೇ ಶತಕವಾಗಿತ್ತು. ಬಳಿಕ ಈ ಸ್ಫೋಟಕ ಶತಕ ಸಿಡಿಸಿದ್ದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತ್ತು.

4 / 6
ಹೀಗಾಗಿ ಜ. 10ರಂದು ನಡೆಯುವ ಪಂದ್ಯದಲ್ಲೂ ಈ ಇಬ್ಬರು ಬ್ಯಾಟ್ಸ್‌ಮನ್‌ಗಳಿಂದ ಅಭಿಮಾನಿಗಳು ಹಳೆಯ ಆಟವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ರೋಹಿತ್ ಶರ್ಮಾ ಸುಮಾರು 3 ವರ್ಷಗಳಿಂದ ಏಕದಿನದಲ್ಲಿ ಶತಕ ಸಿಡಿಸಿಲ್ಲ. ಕೊನೆಯದಾಗಿ 19 ಜನವರಿ 2020 ರಂದು ಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ಆ ಬಳಿಕ ಆಗಸ ನೋಡಿಲ್ಲ.

ಹೀಗಾಗಿ ಜ. 10ರಂದು ನಡೆಯುವ ಪಂದ್ಯದಲ್ಲೂ ಈ ಇಬ್ಬರು ಬ್ಯಾಟ್ಸ್‌ಮನ್‌ಗಳಿಂದ ಅಭಿಮಾನಿಗಳು ಹಳೆಯ ಆಟವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ರೋಹಿತ್ ಶರ್ಮಾ ಸುಮಾರು 3 ವರ್ಷಗಳಿಂದ ಏಕದಿನದಲ್ಲಿ ಶತಕ ಸಿಡಿಸಿಲ್ಲ. ಕೊನೆಯದಾಗಿ 19 ಜನವರಿ 2020 ರಂದು ಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ಆ ಬಳಿಕ ಆಗಸ ನೋಡಿಲ್ಲ.

5 / 6
ಮತ್ತೊಂದೆಡೆ, ವಿರಾಟ್ ಕೊಹ್ಲಿ 3 ವರ್ಷಗಳ ನಂತರ ಕಳೆದ ತಿಂಗಳಷ್ಟೇ ಬಾಂಗ್ಲಾದೇಶ ವಿರುದ್ಧ ಏಕದಿನ ಶತಕ ಗಳಿಸಿದ್ದರು. ಆದಾಗ್ಯೂ, ನವೆಂಬರ್ 2019 ರಿಂದ, ಅವರು ಇನ್ನೂ ಭಾರತದಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ. ಹೀಗಾಗಿ ಆ ಕೊರತೆಯನ್ನು ಕೂಡ ಕೊಹ್ಲಿ ಈ ಸರಣಿಯಲ್ಲಿ ಕೊನೆಗೊಳಿಸುವ ತವಕದಲ್ಲಿದ್ದಾರೆ.

ಮತ್ತೊಂದೆಡೆ, ವಿರಾಟ್ ಕೊಹ್ಲಿ 3 ವರ್ಷಗಳ ನಂತರ ಕಳೆದ ತಿಂಗಳಷ್ಟೇ ಬಾಂಗ್ಲಾದೇಶ ವಿರುದ್ಧ ಏಕದಿನ ಶತಕ ಗಳಿಸಿದ್ದರು. ಆದಾಗ್ಯೂ, ನವೆಂಬರ್ 2019 ರಿಂದ, ಅವರು ಇನ್ನೂ ಭಾರತದಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ. ಹೀಗಾಗಿ ಆ ಕೊರತೆಯನ್ನು ಕೂಡ ಕೊಹ್ಲಿ ಈ ಸರಣಿಯಲ್ಲಿ ಕೊನೆಗೊಳಿಸುವ ತವಕದಲ್ಲಿದ್ದಾರೆ.

6 / 6

Published On - 11:50 am, Mon, 9 January 23

Follow us
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್