AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 152, 140 ರನ್.. ಗುವಾಹಟಿಯಲ್ಲಿ ಕಿಂಗ್ ಕೊಹ್ಲಿ- ಹಿಟ್​ಮ್ಯಾನ್ ರೋಹಿತ್​ನ​ದ್ದೇ ದರ್ಬಾರು..!

IND vs SL: 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

TV9 Web
| Edited By: |

Updated on:Jan 09, 2023 | 11:50 AM

Share
ಟಿ20 ಸರಣಿ ಮುಗಿದ ಬಳಿಕ ಇದೀಗ ಎಲ್ಲರ ಗಮನ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ ಏಕದಿನ ಸರಣಿಯತ್ತ ನೆಟ್ಟಿದೆ. ಈ ಸರಣಿ ಜನವರಿ 10 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಗುವಾಹಟಿಯ ಬರ್ಸಾಪರಾ ಮೈದಾನದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಇದರೊಂದಿಗೆ ಇಬ್ಬರೂ ಒಟ್ಟಾಗಿ 4 ವರ್ಷಗಳ ಹಿಂದಿನ ದಾಖಲೆಯನ್ನು ಮತ್ತೆ ಪುನಾರವರ್ತಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

ಟಿ20 ಸರಣಿ ಮುಗಿದ ಬಳಿಕ ಇದೀಗ ಎಲ್ಲರ ಗಮನ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ ಏಕದಿನ ಸರಣಿಯತ್ತ ನೆಟ್ಟಿದೆ. ಈ ಸರಣಿ ಜನವರಿ 10 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಗುವಾಹಟಿಯ ಬರ್ಸಾಪರಾ ಮೈದಾನದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯೊಂದಿಗೆ ತಂಡಕ್ಕೆ ಮರಳಲಿದ್ದಾರೆ. ಇದರೊಂದಿಗೆ ಇಬ್ಬರೂ ಒಟ್ಟಾಗಿ 4 ವರ್ಷಗಳ ಹಿಂದಿನ ದಾಖಲೆಯನ್ನು ಮತ್ತೆ ಪುನಾರವರ್ತಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

1 / 6
ಗುವಾಹಟಿಯ ಈ ಮೈದಾನದಲ್ಲಿ ಇಲ್ಲಿಯವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

ಗುವಾಹಟಿಯ ಈ ಮೈದಾನದಲ್ಲಿ ಇಲ್ಲಿಯವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಹಾಗೂ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

2 / 6
ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಕೇವಲ 117 ಎಸೆತಗಳಲ್ಲಿ 15 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 152 ರನ್ ಗಳಿಸಿದರು. ಕೊನೆಯವರೆಗೂ ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದ್ದರು

ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಕೇವಲ 117 ಎಸೆತಗಳಲ್ಲಿ 15 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 152 ರನ್ ಗಳಿಸಿದರು. ಕೊನೆಯವರೆಗೂ ಅಜೇಯರಾಗಿ ಉಳಿದು ಭಾರತವನ್ನು ಗೆಲುವಿನ ದಡ ಸೇರಿಸಿದ್ದರು

3 / 6
ಅದೇ ಸಮಯದಲ್ಲಿ, ತಂಡದ ನಾಯಕರಾಗಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 107 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 140 ರನ್ ಚಚ್ಚಿದರು. ಇದು ಕೊಹ್ಲಿ ಅವರ ಏಕದಿನ ವೃತ್ತಿ ಬದುಕಿನ 36ನೇ ಶತಕವಾಗಿತ್ತು. ಬಳಿಕ ಈ ಸ್ಫೋಟಕ ಶತಕ ಸಿಡಿಸಿದ್ದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತ್ತು.

ಅದೇ ಸಮಯದಲ್ಲಿ, ತಂಡದ ನಾಯಕರಾಗಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 107 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 140 ರನ್ ಚಚ್ಚಿದರು. ಇದು ಕೊಹ್ಲಿ ಅವರ ಏಕದಿನ ವೃತ್ತಿ ಬದುಕಿನ 36ನೇ ಶತಕವಾಗಿತ್ತು. ಬಳಿಕ ಈ ಸ್ಫೋಟಕ ಶತಕ ಸಿಡಿಸಿದ್ದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತ್ತು.

4 / 6
ಹೀಗಾಗಿ ಜ. 10ರಂದು ನಡೆಯುವ ಪಂದ್ಯದಲ್ಲೂ ಈ ಇಬ್ಬರು ಬ್ಯಾಟ್ಸ್‌ಮನ್‌ಗಳಿಂದ ಅಭಿಮಾನಿಗಳು ಹಳೆಯ ಆಟವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ರೋಹಿತ್ ಶರ್ಮಾ ಸುಮಾರು 3 ವರ್ಷಗಳಿಂದ ಏಕದಿನದಲ್ಲಿ ಶತಕ ಸಿಡಿಸಿಲ್ಲ. ಕೊನೆಯದಾಗಿ 19 ಜನವರಿ 2020 ರಂದು ಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ಆ ಬಳಿಕ ಆಗಸ ನೋಡಿಲ್ಲ.

ಹೀಗಾಗಿ ಜ. 10ರಂದು ನಡೆಯುವ ಪಂದ್ಯದಲ್ಲೂ ಈ ಇಬ್ಬರು ಬ್ಯಾಟ್ಸ್‌ಮನ್‌ಗಳಿಂದ ಅಭಿಮಾನಿಗಳು ಹಳೆಯ ಆಟವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ರೋಹಿತ್ ಶರ್ಮಾ ಸುಮಾರು 3 ವರ್ಷಗಳಿಂದ ಏಕದಿನದಲ್ಲಿ ಶತಕ ಸಿಡಿಸಿಲ್ಲ. ಕೊನೆಯದಾಗಿ 19 ಜನವರಿ 2020 ರಂದು ಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ಆ ಬಳಿಕ ಆಗಸ ನೋಡಿಲ್ಲ.

5 / 6
ಮತ್ತೊಂದೆಡೆ, ವಿರಾಟ್ ಕೊಹ್ಲಿ 3 ವರ್ಷಗಳ ನಂತರ ಕಳೆದ ತಿಂಗಳಷ್ಟೇ ಬಾಂಗ್ಲಾದೇಶ ವಿರುದ್ಧ ಏಕದಿನ ಶತಕ ಗಳಿಸಿದ್ದರು. ಆದಾಗ್ಯೂ, ನವೆಂಬರ್ 2019 ರಿಂದ, ಅವರು ಇನ್ನೂ ಭಾರತದಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ. ಹೀಗಾಗಿ ಆ ಕೊರತೆಯನ್ನು ಕೂಡ ಕೊಹ್ಲಿ ಈ ಸರಣಿಯಲ್ಲಿ ಕೊನೆಗೊಳಿಸುವ ತವಕದಲ್ಲಿದ್ದಾರೆ.

ಮತ್ತೊಂದೆಡೆ, ವಿರಾಟ್ ಕೊಹ್ಲಿ 3 ವರ್ಷಗಳ ನಂತರ ಕಳೆದ ತಿಂಗಳಷ್ಟೇ ಬಾಂಗ್ಲಾದೇಶ ವಿರುದ್ಧ ಏಕದಿನ ಶತಕ ಗಳಿಸಿದ್ದರು. ಆದಾಗ್ಯೂ, ನವೆಂಬರ್ 2019 ರಿಂದ, ಅವರು ಇನ್ನೂ ಭಾರತದಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ. ಹೀಗಾಗಿ ಆ ಕೊರತೆಯನ್ನು ಕೂಡ ಕೊಹ್ಲಿ ಈ ಸರಣಿಯಲ್ಲಿ ಕೊನೆಗೊಳಿಸುವ ತವಕದಲ್ಲಿದ್ದಾರೆ.

6 / 6

Published On - 11:50 am, Mon, 9 January 23

Web contact
Web contact

TV9 Kannada

Read More
Follow Us
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ