AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಏಕದಿನ ಸರಣಿ ಸೋತು 45 ವರ್ಷಗಳ ನಂತರ ಬೇಡದ ದಾಖಲೆ ಬರೆದ ಟೀಂ ಇಂಡಿಯಾ

IND vs SL: ವಾಸ್ತವವಾಗಿ 2024 ರಲ್ಲಿ ಭಾರತದ ಮೊದಲ ಏಕದಿನ ಸರಣಿ ಇದಾಗಿತ್ತು. ಇದರ ಜೊತೆಗೆ ಈ ವರ್ಷದ ಕೊನೆಯ ಏಕದಿನ ಸರಣಿ ಕೂಡ ಇದೇ. ಈ ಸರಣಿಯನ್ನು ಹೊರತುಪಡಿಸಿ ಭಾರತ ಈ ವರ್ಷ ಇನ್ನ್ಯಾವುದೇ ಏಕದಿನ ಪಂದ್ಯವನ್ನು ಆಡುವುದಿಲ್ಲ. ಇದರರ್ಥ ಟೀಂ ಇಂಡಿಯಾ ಈ ವರ್ಷ ಆಡಿದ ಏಕೈಕ ಸರಣಿಯನ್ನು ಸೋತಿದೆ.

ಪೃಥ್ವಿಶಂಕರ
|

Updated on: Aug 09, 2024 | 10:41 PM

Share
ಟೀಂ ಇಂಡಿಯಾದ ಶ್ರೀಲಂಕಾ ಪ್ರವಾಸ ಸೋಲಿನೊಂದಿಗೆ ಅಂತ್ಯಗೊಂಡಿದೆ. ಉಭಯ ತಂಡಗಳ ನಡುವೆ ನಡೆದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-2 ಅಂತರದಿಂದ ಸೋಲನುಭವಿಸಿತ್ತು. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಸರಣಿಯ ಕೊನೆಯ ಪಂದ್ಯ ನಡೆದಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 110 ರನ್‌ಗಳಿಂದ ಸೋತಿತ್ತು.

ಟೀಂ ಇಂಡಿಯಾದ ಶ್ರೀಲಂಕಾ ಪ್ರವಾಸ ಸೋಲಿನೊಂದಿಗೆ ಅಂತ್ಯಗೊಂಡಿದೆ. ಉಭಯ ತಂಡಗಳ ನಡುವೆ ನಡೆದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-2 ಅಂತರದಿಂದ ಸೋಲನುಭವಿಸಿತ್ತು. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಸರಣಿಯ ಕೊನೆಯ ಪಂದ್ಯ ನಡೆದಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 110 ರನ್‌ಗಳಿಂದ ಸೋತಿತ್ತು.

1 / 6
ಇದರೊಂದಿಗೆ ಟೀಂ ಇಂಡಿಯಾದ 45 ವರ್ಷಗಳ ಸುದೀರ್ಘ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿದೆ. ಇದರ ಜೊತೆಗೆ ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಜೋಡಿಯು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲನ್ನು ಎದುರಿಸಿದ ಭಾರತದ ಮೂರನೇ ನಾಯಕ ಮತ್ತು ಕೋಚ್‌ ಜೋಡಿ ಎನಿಸಿಕೊಂಡಿದೆ.

ಇದರೊಂದಿಗೆ ಟೀಂ ಇಂಡಿಯಾದ 45 ವರ್ಷಗಳ ಸುದೀರ್ಘ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿದೆ. ಇದರ ಜೊತೆಗೆ ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಜೋಡಿಯು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲನ್ನು ಎದುರಿಸಿದ ಭಾರತದ ಮೂರನೇ ನಾಯಕ ಮತ್ತು ಕೋಚ್‌ ಜೋಡಿ ಎನಿಸಿಕೊಂಡಿದೆ.

2 / 6
ವಾಸ್ತವವಾಗಿ 2024 ರಲ್ಲಿ ಭಾರತದ ಮೊದಲ ಏಕದಿನ ಸರಣಿ ಇದಾಗಿತ್ತು. ಇದರ ಜೊತೆಗೆ ಈ ವರ್ಷದ ಕೊನೆಯ ಏಕದಿನ ಸರಣಿ ಕೂಡ ಇದೇ. ಈ ಸರಣಿಯನ್ನು ಹೊರತುಪಡಿಸಿ ಭಾರತ ಈ ವರ್ಷ ಇನ್ನ್ಯಾವುದೇ ಏಕದಿನ ಪಂದ್ಯವನ್ನು ಆಡುವುದಿಲ್ಲ. ಇದರರ್ಥ ಟೀಂ ಇಂಡಿಯಾ ಈ ವರ್ಷ ಆಡಿದ ಏಕೈಕ ಸರಣಿಯನ್ನು ಸೋತಿದೆ.

ವಾಸ್ತವವಾಗಿ 2024 ರಲ್ಲಿ ಭಾರತದ ಮೊದಲ ಏಕದಿನ ಸರಣಿ ಇದಾಗಿತ್ತು. ಇದರ ಜೊತೆಗೆ ಈ ವರ್ಷದ ಕೊನೆಯ ಏಕದಿನ ಸರಣಿ ಕೂಡ ಇದೇ. ಈ ಸರಣಿಯನ್ನು ಹೊರತುಪಡಿಸಿ ಭಾರತ ಈ ವರ್ಷ ಇನ್ನ್ಯಾವುದೇ ಏಕದಿನ ಪಂದ್ಯವನ್ನು ಆಡುವುದಿಲ್ಲ. ಇದರರ್ಥ ಟೀಂ ಇಂಡಿಯಾ ಈ ವರ್ಷ ಆಡಿದ ಏಕೈಕ ಸರಣಿಯನ್ನು ಸೋತಿದೆ.

3 / 6
ಈ ಮೂಲಕ 1979 ರ ನಂತರ ಟೀಂ ಇಂಡಿಯಾಕ್ಕೆ ವರ್ಷದಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಹಿಂದೆ 1979ರಲ್ಲೂ ಟೀಂ ಇಂಡಿಯಾ ಕೇವಲ ಮೂರು ಏಕದಿನ ಪಂದ್ಯಗಳನ್ನಾಡಿತ್ತು. ಆಡಿದ್ದ ಆ ಎಲ್ಲಾ ಮೂರು ಪಂದ್ಯಗಳನ್ನು ಭಾರತ ಸೋತಿತ್ತು.

ಈ ಮೂಲಕ 1979 ರ ನಂತರ ಟೀಂ ಇಂಡಿಯಾಕ್ಕೆ ವರ್ಷದಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಹಿಂದೆ 1979ರಲ್ಲೂ ಟೀಂ ಇಂಡಿಯಾ ಕೇವಲ ಮೂರು ಏಕದಿನ ಪಂದ್ಯಗಳನ್ನಾಡಿತ್ತು. ಆಡಿದ್ದ ಆ ಎಲ್ಲಾ ಮೂರು ಪಂದ್ಯಗಳನ್ನು ಭಾರತ ಸೋತಿತ್ತು.

4 / 6
ಇದಲ್ಲದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋತ ಭಾರತೀಯ ನಾಯಕರ ಪಟ್ಟಿಗೆ ಇದೀಗ ರೋಹಿತ್ ಶರ್ಮಾ ಸೇರ್ಪಡೆಯಾಗಿದ್ದಾರೆ. ರೋಹಿತ್‌ಗಿಂತ ಮೊದಲು ಮೊಹಮ್ಮದ್ ಅಜರುದ್ದೀನ್ ಮತ್ತು ಸಚಿನ್ ತೆಂಡೂಲ್ಕರ್ ಹೆಸರು ಮಾತ್ರ ಈ ಪಟ್ಟಿಯಲ್ಲಿ ಸೇರಿತ್ತು. ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಟೀಂ ಇಂಡಿಯಾ 1993 ರಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಸರಣಿಯನ್ನು ಕಳೆದುಕೊಂಡಿತ್ತು.

ಇದಲ್ಲದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋತ ಭಾರತೀಯ ನಾಯಕರ ಪಟ್ಟಿಗೆ ಇದೀಗ ರೋಹಿತ್ ಶರ್ಮಾ ಸೇರ್ಪಡೆಯಾಗಿದ್ದಾರೆ. ರೋಹಿತ್‌ಗಿಂತ ಮೊದಲು ಮೊಹಮ್ಮದ್ ಅಜರುದ್ದೀನ್ ಮತ್ತು ಸಚಿನ್ ತೆಂಡೂಲ್ಕರ್ ಹೆಸರು ಮಾತ್ರ ಈ ಪಟ್ಟಿಯಲ್ಲಿ ಸೇರಿತ್ತು. ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಟೀಂ ಇಂಡಿಯಾ 1993 ರಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಸರಣಿಯನ್ನು ಕಳೆದುಕೊಂಡಿತ್ತು.

5 / 6
ಇದಾದ ಬಳಿಕ 1997ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂತಹ ಸೋಲು ಕಂಡಿತ್ತು. ಇದೀಗ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋತ ಮೂರನೇ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

ಇದಾದ ಬಳಿಕ 1997ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂತಹ ಸೋಲು ಕಂಡಿತ್ತು. ಇದೀಗ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋತ ಮೂರನೇ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್