AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ರಾಹುಲ್ ಅಥವಾ ಪಂತ್; ಮೊದಲ ಏಕದಿನಕ್ಕೆ ಯಾರು ವಿಕೆಟ್ ಕೀಪರ್?

IND vs SL: 2022 ರ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ಪಂತ್, ಅಂದಿನಿಂದ ಭಾರತ ಏಕದಿನ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಟಿ20 ವಿಶ್ವಕಪ್ ಮೂಲಕ ಭಾರತ ಟಿ20 ತಂಡದಲ್ಲಿ ಆಡಿದ್ದ ಪಂತ್, ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇತ್ತ ಕನ್ನಡಿಗ ಕೆಎಲ್ ರಾಹುಲ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Aug 01, 2024 | 6:16 PM

Share
ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಅಷ್ಟೇ ಸಂಖ್ಯೆಯ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಕೊಲಂಬೊದಲ್ಲಿ ನಾಳೆ ಅಂದರೆ ಆಗಸ್ಟ್ 2 ರಂದು ನಡೆಯಲ್ಲಿದೆ.

ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಅಷ್ಟೇ ಸಂಖ್ಯೆಯ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಕೊಲಂಬೊದಲ್ಲಿ ನಾಳೆ ಅಂದರೆ ಆಗಸ್ಟ್ 2 ರಂದು ನಡೆಯಲ್ಲಿದೆ.

1 / 8
ಈ ಸರಣಿಯ ಇನ್ನೊಂದು ವಿಶೇಷವೆಂದರೆ.. ಟಿ20 ವಿಶ್ವಕಪ್ ಬಳಿಕ ಟಿ20 ಮಾದರಿಗೆ ವಿದಾಯ ಹೇಳಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ, ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದು ವಿಚಾರವೆಂದರೆ ವರ್ಷಗಳ ಬಳಿಕ ರಿಷಬ್ ಪಂತ್ ಏಕದಿನ ತಂಡದಲ್ಲಿ ಆಡಲಿದ್ದಾರೆ.

ಈ ಸರಣಿಯ ಇನ್ನೊಂದು ವಿಶೇಷವೆಂದರೆ.. ಟಿ20 ವಿಶ್ವಕಪ್ ಬಳಿಕ ಟಿ20 ಮಾದರಿಗೆ ವಿದಾಯ ಹೇಳಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ, ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದು ವಿಚಾರವೆಂದರೆ ವರ್ಷಗಳ ಬಳಿಕ ರಿಷಬ್ ಪಂತ್ ಏಕದಿನ ತಂಡದಲ್ಲಿ ಆಡಲಿದ್ದಾರೆ.

2 / 8
ವಾಸ್ತವವಾಗಿ 2022 ರ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ಪಂತ್, ಅಂದಿನಿಂದ ಭಾರತ ಏಕದಿನ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಟಿ20 ವಿಶ್ವಕಪ್ ಮೂಲಕ ಭಾರತ ಟಿ20 ತಂಡದಲ್ಲಿ ಆಡಿದ್ದ ಪಂತ್, ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇತ್ತ ಕನ್ನಡಿಗ ಕೆಎಲ್ ರಾಹುಲ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವಾಸ್ತವವಾಗಿ 2022 ರ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ಪಂತ್, ಅಂದಿನಿಂದ ಭಾರತ ಏಕದಿನ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಟಿ20 ವಿಶ್ವಕಪ್ ಮೂಲಕ ಭಾರತ ಟಿ20 ತಂಡದಲ್ಲಿ ಆಡಿದ್ದ ಪಂತ್, ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇತ್ತ ಕನ್ನಡಿಗ ಕೆಎಲ್ ರಾಹುಲ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

3 / 8
ಅಂದರೆ ಏಕದಿನ ಸರಣಿಗೆ ವಿಕೆಟ್ ಕೀಪರ್​ಗಳಾಗಿ ಭಾರತ ತಂಡದಲ್ಲಿ ರಿಷಬ್ ಪಂತ್ ಹಾಗೂ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಇಬ್ಬರಲ್ಲಿ ನಾಯಕ ರೋಹಿತ್ ಯಾರನ್ನು ಪ್ಲೇಯಿಂಗ್ 11 ನಲ್ಲಿ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ.

ಅಂದರೆ ಏಕದಿನ ಸರಣಿಗೆ ವಿಕೆಟ್ ಕೀಪರ್​ಗಳಾಗಿ ಭಾರತ ತಂಡದಲ್ಲಿ ರಿಷಬ್ ಪಂತ್ ಹಾಗೂ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಇಬ್ಬರಲ್ಲಿ ನಾಯಕ ರೋಹಿತ್ ಯಾರನ್ನು ಪ್ಲೇಯಿಂಗ್ 11 ನಲ್ಲಿ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ.

4 / 8
 ಮೇಲ್ನೋಟಕ್ಕೆ ರೋಹಿತ್ ಯಾವಾಗಲೂ ರಿಷಬ್ ಪಂತ್ ಅವರನ್ನು ಬೆಂಬಲಿಸುತ್ತಾರೆ ಮತ್ತು ಅವರಿಗೆ ಹೆಚ್ಚಿನ ಅವಕಾಶಗಳನ್ನು ನೀಡಿರುವುದನ್ನು ನಾವು ಕಂಡಿದ್ದೇವೆ. ರೋಹಿತ್ ನಾಯಕತ್ವದಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಸರಣಿಯಲ್ಲಿ ರಿಷಭ್ ಅತ್ಯುತ್ತಮ ಶತಕ ಗಳಿಸುವ ಮೂಲಕ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದರು.

ಮೇಲ್ನೋಟಕ್ಕೆ ರೋಹಿತ್ ಯಾವಾಗಲೂ ರಿಷಬ್ ಪಂತ್ ಅವರನ್ನು ಬೆಂಬಲಿಸುತ್ತಾರೆ ಮತ್ತು ಅವರಿಗೆ ಹೆಚ್ಚಿನ ಅವಕಾಶಗಳನ್ನು ನೀಡಿರುವುದನ್ನು ನಾವು ಕಂಡಿದ್ದೇವೆ. ರೋಹಿತ್ ನಾಯಕತ್ವದಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಸರಣಿಯಲ್ಲಿ ರಿಷಭ್ ಅತ್ಯುತ್ತಮ ಶತಕ ಗಳಿಸುವ ಮೂಲಕ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದರು.

5 / 8
ಡಿಸೆಂಬರ್ 2022 ರಲ್ಲಿ ರಸ್ತೆ ಅಪಘಾತದ ಕಾರಣದಿಂದ ತಂಡದಿಂದ ಹೊರಗುಳಿಯುವ ಮೊದಲು, ರಿಷಬ್ ಪಂತ್ ತಮ್ಮ ಕೊನೆಯ 5 ಏಕದಿನ ಇನ್ನಿಂಗ್ಸ್‌ಗಳಲ್ಲಿ ಶತಕ ಮತ್ತು ಅರ್ಧ ಶತಕವನ್ನು ಗಳಿಸಿದ್ದರು. ಇತ್ತೀಚೆಗಷ್ಟೇ ಮುಗಿದ ಟಿ20 ವಿಶ್ವಕಪ್‌ನಲ್ಲೂ ಪಂತ್, ಕೆಲವು ಸಣ್ಣ ಆದರೆ ಪ್ರಮುಖ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ತಮ್ಮ ಶಕ್ತಿಯನ್ನು ತೋರಿಸಿದ್ದರು. ಅಲ್ಲದೆ ಈ ಸರಣಿಯ ನಂತರ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ, ಬ್ಯಾಟಿಂಗ್ ಅಭ್ಯಾಸದ ದೃಷ್ಟಿಯಿಂದ ಈ ಸರಣಿಯಲ್ಲಿ ಪಂತ್‌ಗೆ ಅವಕಾಶ ನೀಡುವುದು ತಾರ್ಕಿಕವಾಗಿದೆ.

ಡಿಸೆಂಬರ್ 2022 ರಲ್ಲಿ ರಸ್ತೆ ಅಪಘಾತದ ಕಾರಣದಿಂದ ತಂಡದಿಂದ ಹೊರಗುಳಿಯುವ ಮೊದಲು, ರಿಷಬ್ ಪಂತ್ ತಮ್ಮ ಕೊನೆಯ 5 ಏಕದಿನ ಇನ್ನಿಂಗ್ಸ್‌ಗಳಲ್ಲಿ ಶತಕ ಮತ್ತು ಅರ್ಧ ಶತಕವನ್ನು ಗಳಿಸಿದ್ದರು. ಇತ್ತೀಚೆಗಷ್ಟೇ ಮುಗಿದ ಟಿ20 ವಿಶ್ವಕಪ್‌ನಲ್ಲೂ ಪಂತ್, ಕೆಲವು ಸಣ್ಣ ಆದರೆ ಪ್ರಮುಖ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ತಮ್ಮ ಶಕ್ತಿಯನ್ನು ತೋರಿಸಿದ್ದರು. ಅಲ್ಲದೆ ಈ ಸರಣಿಯ ನಂತರ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ, ಬ್ಯಾಟಿಂಗ್ ಅಭ್ಯಾಸದ ದೃಷ್ಟಿಯಿಂದ ಈ ಸರಣಿಯಲ್ಲಿ ಪಂತ್‌ಗೆ ಅವಕಾಶ ನೀಡುವುದು ತಾರ್ಕಿಕವಾಗಿದೆ.

6 / 8
ಇದರ ಹೊರತಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಪಂತ್‌ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆಯಾಗಿದ್ದು, ಈ ಪಾತ್ರ ಕೆಎಲ್ ರಾಹುಲ್ ಪಾಲಾಗುವುದು ಖಚಿತವಾಗಿದೆ. ರಾಹುಲ್ ಏಕದಿನ ವಿಶ್ವಕಪ್‌ನಲ್ಲಿ ವಿಕೆಟ್‌ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಲ್ಲದೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರಾಹುಲ್ ತಂಡದ ಪರ ಏಕಾಂಗಿ ಹೋರಾಟ ನೀಡಿದ್ದು ಇದಕ್ಕೆ ಉದಾಹರಣೆ.

ಇದರ ಹೊರತಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಪಂತ್‌ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆಯಾಗಿದ್ದು, ಈ ಪಾತ್ರ ಕೆಎಲ್ ರಾಹುಲ್ ಪಾಲಾಗುವುದು ಖಚಿತವಾಗಿದೆ. ರಾಹುಲ್ ಏಕದಿನ ವಿಶ್ವಕಪ್‌ನಲ್ಲಿ ವಿಕೆಟ್‌ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಲ್ಲದೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರಾಹುಲ್ ತಂಡದ ಪರ ಏಕಾಂಗಿ ಹೋರಾಟ ನೀಡಿದ್ದು ಇದಕ್ಕೆ ಉದಾಹರಣೆ.

7 / 8
ರಾಹುಲ್ ವಿಶ್ವಕಪ್‌ನ 10 ಇನ್ನಿಂಗ್ಸ್‌ಗಳಲ್ಲಿ 75 ಸರಾಸರಿಯಲ್ಲಿ 452 ರನ್ ಕಲೆಹಾಕಿದ್ದಲ್ಲದೆ, ವಿಕೆಟ್ ಕೀಪಿಂಗ್‌ನಲ್ಲಿ 17 ವಿಕೆಟ್ ಕೂಡ ಉರುಳಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ವಿಶ್ವಕಪ್‌ನಂತೆಯೇ ಬ್ಯಾಟಿಂಗ್ ಕ್ರಮಾಂಕದೊಂದಿಗೆ ಕಣಕ್ಕಿಳಿಯುವ ಮಾಡುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಲಂಕಾ ವಿರುದ್ಧ ರಾಹುಲ್ ಕಣಕ್ಕಿಳಿಯುವುದು ಭಾಗಶಃ ಖಚಿತವಾಗಿದೆ.

ರಾಹುಲ್ ವಿಶ್ವಕಪ್‌ನ 10 ಇನ್ನಿಂಗ್ಸ್‌ಗಳಲ್ಲಿ 75 ಸರಾಸರಿಯಲ್ಲಿ 452 ರನ್ ಕಲೆಹಾಕಿದ್ದಲ್ಲದೆ, ವಿಕೆಟ್ ಕೀಪಿಂಗ್‌ನಲ್ಲಿ 17 ವಿಕೆಟ್ ಕೂಡ ಉರುಳಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ವಿಶ್ವಕಪ್‌ನಂತೆಯೇ ಬ್ಯಾಟಿಂಗ್ ಕ್ರಮಾಂಕದೊಂದಿಗೆ ಕಣಕ್ಕಿಳಿಯುವ ಮಾಡುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಲಂಕಾ ವಿರುದ್ಧ ರಾಹುಲ್ ಕಣಕ್ಕಿಳಿಯುವುದು ಭಾಗಶಃ ಖಚಿತವಾಗಿದೆ.

8 / 8
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್