AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ವಿರುದ್ಧ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಟಿಕೆಟ್ ಕಾಯ್ದಿರಿಸಿದ ಟೀಂ ಇಂಡಿಯಾ 3 ಆಟಗಾರರಿವರು

IND vs SL: ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2022 ರಲ್ಲಿ ಅನೇಕ ಭಾರತೀಯ ಆಟಗಾರರು ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಅವಕಾಶ ಪಡೆದ ಈ ಮೂವರು ಉತ್ತಮ ಪ್ರದರ್ಶನ ನೀಡಿ ಆಯ್ಕೆಗಾರರ ​​ಸಂಕಷ್ಟವನ್ನು ಹೆಚ್ಚಿಸಿದ್ದಾರೆ.

ಪೃಥ್ವಿಶಂಕರ
|

Updated on:Feb 28, 2022 | 8:09 PM

Share
ಶ್ರೀಲಂಕಾ ವಿರುದ್ಧದ ಟಿ20 ಸರಣಿಯು ಅನೇಕ ಭಾರತೀಯ ಆಟಗಾರರಿಗೆ ನಿರ್ಣಾಯಕ ಪರೀಕ್ಷೆಯಾಗಿತ್ತು. ಟಿ20 ವಿಶ್ವಕಪ್‌ನ ಪೂರ್ವದಲ್ಲಿ ಈ ಸರಣಿ ನಿರ್ಣಾಯಕವಾಗಿದೆ. ಆದರೆ, ಟಿ20 ವಿಶ್ವಕಪ್‌ಗೆ ಇನ್ನೂ ಸಮಯವಿದೆ. ಆದರೆ, ಶ್ರೀಲಂಕಾ ವಿರುದ್ಧದ ಅವಕಾಶವನ್ನು ಆಟಗಾರರು ಸದುಪಯೋಗಪಡಿಸಿಕೊಂಡರು ಮತ್ತು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯುವ ಐಸಿಸಿ ಟೂರ್ನಿಯಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡರು. ಈ ಸರಣಿಯಲ್ಲಿ ಮಿಂಚಿದವರ ಪ್ರದರ್ಶನವನ್ನು ನೋಡೋಣ.

1 / 4
ಭುವನೇಶ್ವರ್ ಕುಮಾರ್: ಟಿ20 ವಿಶ್ವಕಪ್ ತಂಡದಲ್ಲಿ ಭುವನೇಶ್ವರ್ ಕುಮಾರ್ ಸ್ಥಾನ ಪಡೆಯುತ್ತಾರೋ ಇಲ್ಲವೋ ಹೇಳಲು ಈ ಸರಣಿ ಸಾಕು. ಆದರೆ, ಭುವನೇಶ್ವರ್ ಭಾರತದ ವೈಟ್ ಬಾಲ್ ತಂಡದಲ್ಲಿ ಕರ್ಚೀಫ್ ತನ್ನ ಛಾಪು ಮೂಡಿಸಿರುವುದು ಇದೀಗ ಗೊತ್ತಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಳೆಯ ಛಾರ್ಮ್​ನೊಂದಿಗೆ ಕಾಣಿಸಿಕೊಂಡಿದ್ದಾರೆ. ರನ್ ಬಿಟ್ಟುಕೊಡದಂತೆ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರಿದರು. ಅವರು ಸರಣಿಯಲ್ಲಿ ಆಡಿದ 2 ಪಂದ್ಯಗಳಲ್ಲಿ 15 ಸರಾಸರಿಯಲ್ಲಿ 3 ವಿಕೆಟ್ ಪಡೆದರು.

2 / 4
ರವೀಂದ್ರ ಜಡೇಜಾ: ಗಾಯದ ಸಮಸ್ಯೆಯಿಂದ ಕೆಲ ದಿನಗಳಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಜಡೇಜಾ ಹೊಸ ವರ್ಷದಲ್ಲಿ ಅವರ ಮೊದಲ ಸರಣಿಯನ್ನು ಆಡುತ್ತಿದ್ದಾರೆ. ಆದಾಗ್ಯೂ ಈ ಸರಣಿಯಲ್ಲಿ ಅದ್ಭುತ ಪುನರಾಗಮನವನ್ನು ತೋರಿದರು. ಕ್ರಿಕೆಟ್‌ನಿಂದ ದೂರ ಉಳಿದಿರುವುದು ಜಡೇಜಾ ಆಟದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಅವರು ಚೆಂಡು ಮತ್ತು ಬ್ಯಾಟ್‌ನಿಂದ ಅದ್ಭುತಗಳನ್ನು ಮಾಡಿದರು. ಜಡೇಜಾ ಕೇವಲ 37 ಎಸೆತಗಳನ್ನು ಎದುರಿಸಿ ಸರಣಿಯಲ್ಲಿ 3 ಪಂದ್ಯಗಳಲ್ಲಿ 70 ರನ್ ಗಳಿಸಿದರು. ಅಲ್ಲದೆ 2 ವಿಕೆಟ್ ಪಡೆದರು.

3 / 4
ಶ್ರೇಯಸ್ ಅಯ್ಯರ್: ಬಲಗೈ ಬ್ಯಾಟ್ಸ್‌ಮನ್ ಟಿ20 ಸರಣಿಯಲ್ಲಿ 3 ಪಂದ್ಯಗಳಲ್ಲಿ 174.35 ಸರಾಸರಿಯಲ್ಲಿ 204 ರನ್ ಗಳಿಸಿದ್ದಾರೆ. ಅಚ್ಚರಿ ಎಂದರೆ ಶ್ರೇಯಸ್ ಒಮ್ಮೆಯೂ ಔಟಾಗಲಿಲ್ಲ. ಅವರು ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದರು. ಅವರು ಔಟಾಗದೆ 74 ರನ್ ಗಳಿಸಿದ್ದು ಅವರ ಅತ್ಯಧಿಕ ರನ್ ಆಗಿದೆ. ಇದು ಟಿ20 ವಿಶ್ವಕಪ್ 2022ರ ತಂಡದಲ್ಲಿ ಅವರ ಸ್ಥಾನವನ್ನು ಭದ್ರಪಡಿಸುವುದರಲ್ಲಿ ಸಂಶಯವಿಲ್ಲ.

4 / 4

Published On - 6:23 pm, Mon, 28 February 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?